ಐಫೋನ್ ಕೊಟ್ಟಿದ್ದು ತಪ್ಪೇನಲ್ಲ: ಶಾಮನೂರು
Team Udayavani, Jul 19, 2018, 7:00 AM IST
ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿ ನವದೆಹಲಿಯಲ್ಲಿ ಏರ್ಪಡಿಸಿದ್ದ ರಾಜ್ಯ ಸಂಸದರ ಸಭೆಯಲ್ಲಿ ವಿತರಿಸಲಾಗಿದ್ದ
ಕಿಟ್ನಲ್ಲಿ ಐಫೋನ್ ಇಟ್ಟಿರುವುದು ಅಪರಾಧವಲ್ಲ ಎಂದು ಹೇಳುವ ಮೂಲಕ ಸಚಿವ ಡಿ.ಕೆ.ಶಿವಕುಮಾರ್ ನಡೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಟ್ನಲ್ಲಿ ಐಫೋನ್ ಇಟ್ಟಿದ್ದರಲ್ಲಿ ತಪ್ಪೇನಿದೆ? ನನಗೂ ಯಾರಾದರೂ ಏನಾದರೂ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ನೀವು ಕೊಟ್ಟರೆ ತೆಗೆದುಕೊಳ್ಳುವುದಿಲ್ಲವೇ? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.