ತ್ರಿಪುರ ಚಿಟ್‌ ಕಂಪನಿಯ 250 ಕೋಟಿ ಚೀಟಿಂಗ್‌


Team Udayavani, Jul 19, 2018, 6:00 AM IST

25000.jpg

ಬೆಂಗಳೂರು: ಚಿಟ್‌ ಫ‌ಂಡ್‌ ಸಂಸ್ಥೆಗಳ ಮೋಸದ ಬಗ್ಗೆ ಬಯಲಾಗುತ್ತಿದ್ದರೂ, ಜನ ಮಾತ್ರ ಇವರಿಂದ ದೂರವಾಗುತ್ತಿಲ್ಲ!
ಇದೀಗ ಬೆಂಗಳೂರಿನಲ್ಲಿ ಮತ್ತೂಂದು ಚಿಟ್‌ ಫ‌ಂಡ್‌ ಕಂಪನಿಯ ಮೋಸ ಬಯಲಾಗಿದ್ದು ಇದರ ಮಾಲೀಕ 250 ಕೋಟಿ ರೂ. ಪಂಗನಾಮ ಹಾಕಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಮಲ್ಲೇಶ್ವರಂನಲ್ಲಿದ್ದ ತ್ರಿಪುರ ಚಿಟ್‌ ಫ‌ಂಡ್‌ ಕಂಪನಿಯ ಮುಖ್ಯಸ್ಥ ಕೃಷ್ಣಪ್ರಸಾದ್‌ ಮತ್ತು ಆತನ ಸಹೋದ್ಯೋಗಿ ವೇಣು ಎಂಬುವವರು ನಾಲ್ಕು ರಾಜ್ಯಗಳ 30 ಸಾವಿರ ಮಂದಿಗೆ ಮೋಸ ಮಾಡಿದ್ದಾರೆ.

18 ವರ್ಷಗಳ ಹಿಂದೆ ಆರೋಪಿ ಕೃಷ್ಣಪ್ರಸಾದ್‌ ತಮಿಳುನಾಡಿನಲ್ಲಿ ತ್ರಿಪುರ ಚಿಟ್‌ ಫ‌ಂಡ್‌ ಕಂಪನಿ ತೆರೆದಿದ್ದು, ಇದನ್ನು ಕರ್ನಾಟಕ, ಕೇರಳ, ಆಂಧ್ರಪ್ರದೇಶದಲ್ಲಿ ವಿಸ್ತರಿಸಿ ನೂರಾರು ಶಾಖೆಗಳು ಹಾಗೂ ಉಪ ಶಾಖೆಗಳನ್ನು ತೆರೆದು ಸಾವಿರಾರು  ಜನರನ್ನು ನೋಂದಾಯಿಸಿಕೊಂಡಿದ್ದರು. ಹೂಡಿಕೆ ಹೆಸರಿನಲ್ಲಿ ನಾಲ್ಕು ರಾಜ್ಯದ ಸುಮಾರು 30 ಸಾವಿರ ಮಂದಿಯಿಂದ ಏಜೆಂಟರ ಮೂಲಕ ನೂರಾರು ಕೋಟಿ ರೂ. ಸಂಗ್ರಹಿಸಿದ್ದ. ಕರ್ನಾಟಕದಲ್ಲೇ 85 ಕೋಟಿ ರೂ. ವಂಚನೆ ಮಾಡಿದ್ದಾನೆ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಆರಂಭದಲ್ಲಿ ನಿಗದಿತ ಸಮಯಕ್ಕೆ  ಹಣ ಹಿಂದಿರುಗಿಸುತ್ತಿದ್ದ ಕೃಷ್ಣಪ್ರಸಾದ್‌ ಕಳೆದ ಅಕ್ಟೋಬರ್‌ನಿಂದ ಹಣ ವಾಪಸ್‌ ನೀಡದೆ ತಲೆಮರೆಸಿಕೊಂಡಿದ್ದ. ಇತ್ತ  ಹೂಡಿಕೆ ಮಾಡಿದ್ದವರು ಕಂಪನಿಯ ಏಜೆಂಟರಿಗೆ ಹಣ ವಾಪಸ್‌ ಮಾಡುವಂತೆ ಒತ್ತಡ ಹೇರುತ್ತಿದ್ದಂತೆ ಎಲ್ಲ ಶಾಖೆಗಳ ನಿರ್ದೇಶಕರು ನಾಪತ್ತೆಯಾಗಿದ್ದರು.  ಈ ಸಂಬಂಧ ಹಣ ಕಳೆದುಕೊಂಡವರು ಸ್ಥಳೀಯ ಠಾಣೆಗಳಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದರು. ಅಲ್ಲದೆ, ನಗರ ಪೊಲೀಸ್‌ ಆಯುಕ್ತರನ್ನು ಭೇಟಿಯಾಗಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು.

ಚೆನ್ನೈನಲ್ಲಿ ಬಂಧನ: ಕಂಪನಿಯ ಏಜೆಂಟರು  ಸಹ ಏ.21ರಂದು ಮಲ್ಲೇಶ್ವರಂ ಠಾಣೆಗೆ ದೂರು ನೀಡಿ ಕೃಷ್ಣಪ್ರಸಾದ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಆರೋಪಿ ಪತ್ತೆಗಾಗಿ ನಗರ ಪೊಲೀಸರ ವಿಶೇಷ ತಂಡ ತಮಿಳುನಾಡಿನಲ್ಲಿ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲೇ  ಚೆನ್ನೈ ಪೊಲೀಸರು ವಂಚನೆ ಪ್ರಕರಣದಲ್ಲಿ ಕೃಷ್ಣಪ್ರಸಾದ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಈ ಮಾಹಿತಿ ಸಂಗ್ರಹಿಸಿದ ಮಲ್ಲೇಶ್ವರಂ ಪೊಲೀಸರು ಕೋರ್ಟ್‌ ಅನುಮತಿ ಮೇರೆಗೆ ಐದು ದಿನಗಳ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಾನ್ಯದಿಂದ ಹೊಡೆತ: 2016ರ ನವೆಂಬರ್‌ನಲ್ಲಿ 1000 ಮತ್ತು 500ರ ನೋಟುಗಳು ಅಮಾನ್ಯಗೊಂಡಿದ್ದು ಹಾಗೂ ಒಂದೆರಡು ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಕಂಪನಿಗೆ ಕೋಟ್ಯಂತರ ರೂ. ನಷ್ಟವಾಗಿತ್ತು.  ಹೀಗಾಗಿ ಹಣ ಹಿಂದಿರುಗಿಸಲು ಸಾಧ್ಯವಾಗಿಲ್ಲ. ಈ ಹಿಂದೆ ಲಾಭಗಳಿಸಿದ ಹಣದ ಪೈಕಿ 40 ಕೋಟಿ ರೂ. ಮೌಲ್ಯದಲ್ಲಿ ಚೆನ್ನೈ ಮತ್ತು ಮುಂಬೈನಲ್ಲಿ ಅಪಾರ್ಟ್‌ಮೆಂಟ್‌ಗಳು, ವಿಲ್ಲಾಗಳನ್ನು ನಿರ್ಮಿಸಿದ್ದೇನೆ. ಆದಷ್ಟು ಬೇಗ ಎಲ್ಲ ಗ್ರಾಹಕರ ಹಣ ಹಿಂದಿರುಗಿಸುತ್ತೇನೆ ಎಂದು ಕೃಷ್ಣಪ್ರಸಾದ್‌ ಹೇಳಿಕೆ ದಾಖಲಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 85 ಕೋಟಿ ರೂ. ವಂಚನೆ
ಆರೋಪಿಯು  ಕರ್ನಾಟಕದಲ್ಲಿ 10 ಸಾವಿರಕ್ಕೂ ಅಧಿಕ ಮಂದಿಗೆ 85 ಕೋಟಿ ರೂ. ವಂಚಿಸಿದ್ದಾನೆ. ಈತನ ವಿರುದ್ಧ ಮಲ್ಲೇಶ್ವರಂ ಠಾಣೆವೊಂದರಲ್ಲಿಯೇ 40 ವಂಚನೆ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ನಗರದ ಇತರೆ 11 ಠಾಣೆಗಳಲ್ಲಿಯೂ ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲ್ಲೇಶ್ವರಂ ಕಚೇರಿ ಎದುರು ಪ್ರತಿಭಟನೆ
ಆರೋಪಿಯ ಬಂಧನದ ವಿಚಾರ ತಿಳಿಯುತ್ತಿದ್ದಂತೆ ನೂರಾರು ಮಂದಿ ಗ್ರಾಹಕರು ಬುಧವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ತ್ರಿಪುರ ಚಿಟ್‌ಫ‌ಂಡ್‌ ಕಂಪನಿ ಎದುರು ಜಮಾಯಿಸಿ ಆರೋಪಿಯಿಂದ ಹಣ ಕೊಡಿಸುವಂತೆ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗ್ರಾಹಕರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.