ಶಿಕ್ಷಕ ಅಭ್ಯರ್ಥಿಗಳ ಕಟ್‌ಆಫ್ ಅಂಕಕ್ಕೆ ಬ್ರೇಕ್‌


Team Udayavani, Jul 21, 2018, 7:00 AM IST

govt-logo.jpg

ಬೆಂಗಳೂರು: ಸರ್ಕಾರಿ ಶಾಲೆಗೆ ಪದವೀಧರ ಶಿಕ್ಷಕರ ನೇಮಕ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳುಗಳಿಸಿದ ಅಂಕ ಯಥಾವತ್ತಾಗಿ ಪ್ರಕಟಿಸಿ, ಕನಿಷ್ಠ ಅಂಕ (ಕಟ್‌ ಆಫ್ ಮಾರ್ಕ್ಸ್) ನಿಗದಿ ಮಾಡಬಾರದು ಎಂದು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಖಡಕ್‌ ಸೂಚನೆ ನೀಡಿದೆ.

ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ರಿಂದ 8ನೇ ತರಗತಿಯಲ್ಲಿ ಖಾಲಿ ಇರುವ ಗಣಿತ ಮತ್ತು ವಿಜ್ಞಾನದ 4,233, ಆಂಗ್ಲ ಭಾಷೆಯ 4,531 ಹಾಗೂ ಸಮಾಜ ವಿಜ್ಞಾನದ 1,236 ಹುದ್ದೆ ಸೇರಿ 10 ಸಾವಿರ ಪದವೀಧರ ಶಿಕ್ಷಕ ಹುದ್ದೆಯ ಭರ್ತಿಗೆ 2017ರ ಸೆಪ್ಟೆಂಬರ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜಿಲ್ಲಾ ಹಂತದಲ್ಲಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಉಪನಿರ್ದೇಶಕರ ನೇತೃತ್ವದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.

ಜೂ.20ರಂದು ಸಚಿವ ಎನ್‌.ಮಹೇಶ್‌ ಪರೀಕ್ಷಾ ಫ‌ಲಿತಾಂಶ ಪ್ರಕಟಿಸಿದ್ದರು. ಫ‌ಲಿತಾಂಶ ಹೊರಬಿದ್ದು ತಿಂಗಳಾದರೂ ಅಭ್ಯರ್ಥಿಗಳ ಅಂಕ ಗೊಂದಲ ಬಗೆಹರಿದಿಲ್ಲ. ನೊಂದ ಅಭ್ಯರ್ಥಿಗಳು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸರ್ಕಾರ, ಯಾವುದೇ ಕನಿಷ್ಠ ಅಂಕ ನಿಗದಿ ಮಾಡದೇ ಅಭ್ಯರ್ಥಿಗಳು ಪಡೆದ ಅಂಕ ಶೇಕಡವಾರು ಲೆಕ್ಕಾಚಾರದಲ್ಲಿ ಪೂರ್ಣವಾಗಿ ಪ್ರಕಟಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದೆ.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಯಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರ ಹುದ್ದೆಗೆ 50,633 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 1:2ರ ಅನುಪಾತದಲ್ಲಿ ಸಂದರ್ಶಕ್ಕೆ ಕೇವಲ 2264 ಅಭ್ಯರ್ಥಿಗಳು ಅರ್ಹರಾಗಿದ್ದರು. ಆ ವೇಳೆಗೆ ಕಟ್‌ಆಫ್ ಅಂಕ ಎಷ್ಟೆಂಬುದನ್ನು ಕೇಂದ್ರೀಕೃತ ದಾಖಲಾತಿ ಘಟಕ(ಸಿಎಸಿ) ಸ್ಪಷ್ಟಪಡಿಸಿರಲಿಲ್ಲ ಮತ್ತು ಅಭ್ಯರ್ಥಿಗಳು ಪಡೆದ ಅಂಕವನ್ನು ಪ್ರಕಟಿಸಿರಲಿಲ್ಲ.

ಅಧಿಕಾರಿಗಳ ಎಡವಟ್ಟಿನಿಂದ ಆಕ್ರೋಶಗೊಂಡ ಅಭ್ಯರ್ಥಿಗಳು, ಸರ್ಕಾರದ ಮೇಲೆ ಒತ್ತಡ ಹೇರಿ, ಅಂಕಪಟ್ಟಿ ಪಡೆದುಕೊಂಡರು. ಇಷ್ಟಾದರೂ ಗೊಂದಲ ಸರಿಪಡಿಸಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಹೀಗಾಗಿ ನೇಮಕಾತಿ ಮಾನದಂಡವನ್ನೇ ಸಡಿಲಿಸುವಂತೆ ಅಧಿಕಾರಿಗಳಿಗೆ ಸರ್ಕಾರ ನಿರ್ದೇಶಿಸಿ ಆದೇಶ ಹೊಡಿಸಿದೆ.

ಮಾನದಂಡ ಬದಲಾವಣೆ: ಸ್ಪರ್ಧಾತ್ಮಕ ಪರೀಕ್ಷೆಯ ಪೇಪರ್‌-2ರಲ್ಲಿ ಶೇ.50 ಅಂಕ ಮತ್ತು ಬೋಧನಾ ಭಾಷಾ ಸಾಮರ್ಥ್ಯ ಪರೀಕ್ಷೆ(ಪೇಪರ್‌-3)ಯಲ್ಲಿ ಶೇ.60 ಅಂಕ ಪಡೆದ ಅಭ್ಯರ್ಥಿಗಳು ಮಾತ್ರ ಆಯ್ಕೆಗೆ ಅರ್ಹರು ಎಂಬುದನ್ನು ಸಡಿಲಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದ ಎಲ್ಲರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ,ಕಾನೂನು ಇಲಾಖೆಯ ಅಭಿಪ್ರಾಯ ಪಡೆದು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಹೊಸಪಟ್ಟಿ ಸಾಧ್ಯತೆ ?: ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದರೆ, ಪಟ್ಟಿ ಪರಿಷ್ಕರಣೆ ಮಾಡಿಲ್ಲ. ಕಟ್‌ಆಫ್ ಅಂಕ ನಿಗದಿ ಮಾಡಬೇಡಿ ಎಂದು ಸರ್ಕಾರ ಸೂಚಿಸಿರುವುದರಿಂದ ಜಿಲ್ಲಾವಾರು ಅರ್ಹ ಅಭ್ಯರ್ಥಿಗಳ
ಹೊಸ ಆಯ್ಕೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಅಥವಾ ಹಳೇ ಪಟ್ಟಿಗೆ ಹೊಸಬರು ಸೇರಿಕೊಳ್ಳಲಿದ್ದಾರೆ.

ಸ್ಪಂದಿಸದ ಹೆಲ್ಪ್ಲೈನ್‌
ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ, ಉಪನಿರ್ದೇಶಕರು ಸೇರಿದಂತೆ ಯಾವ ಅಧಿಕಾರಿಗಳು ಕೂಡ ಅಭ್ಯರ್ಥಿಗಳ ಗೊಂದಲಕ್ಕೆ ಸ್ಪಂದಿಸುತ್ತಿಲ್ಲ. ಘಟಕದ ಸಹಾಯವಾಣಿ ಸಂಖ್ಯೆ 22228805, 22271866, 22483145ಗೆ ಕರೆ ಮಾಡಿದರೂ ಪ್ರತಿಕ್ರಿಯಿಸುವವರಿಲ್ಲ. ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಕರೆ ಸ್ವೀಕರಿಸುತ್ತಿಲ್ಲ. ಎಲ್ಲದಕ್ಕೂ ಆಯುಕ್ತರೇ ಉತ್ತರ ನೀಡಬೇಕು ಎನ್ನುತ್ತಿದ್ದಾರೆ ಎಂದು ನೊಂದ ಅಭ್ಯರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಹೊಸ ಆದೇಶದಿಂದ ಇನ್ನಷ್ಟು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. ಜಿಲ್ಲಾ ಮಟ್ಟದಲ್ಲಿ ಕಡಿಮೆ ಇರುವ ಅರ್ಹರ ಸಂಖ್ಯೆ ಹೆಚ್ಚಾಗಲಿದೆ. ಹೊಸ ಆದೇಶದಂತೆ ಕನಿಷ್ಠ ಅಂಕ ನಿಗದಿಪಡಿಸದೆ ಅಭ್ಯರ್ಥಿಗಳ ಅಂಕ ಪ್ರಕಟಿಸಲಾಗುತ್ತದೆ.
– ಬಿ.ಕೆ.ಬಸವರಾಜ,
ನಿರ್ದೇಶಕ, ಪ್ರಾಥಮಿಕ ಶಿಕ್ಷಣ ಇಲಾಖೆ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.