ಮಹದಾಯಿಗಾಗಿ 3 ವರ್ಷದಲ್ಲಿ 1100 ಮನವಿ


Team Udayavani, Jul 21, 2018, 6:00 AM IST

mahadayi-water-dispute.jpg

ನರಗುಂದ: ಜೀವಜಲಕ್ಕಾಗಿ ಹೋರಾಟ ನಡೆಸುತ್ತಲೇ ಇರುವ ಮಹದಾಯಿ ಹೋರಾಟಗಾರರು ಕಳೆದ ಮೂರು ವರ್ಷದಿಂದ
ಇದುವರೆಗೆ ಸಲ್ಲಿಸಿರುವ ಮನವಿಗಳು ಒಂದಲ್ಲ ಎರಡಲ್ಲ. ಬರೋಬ್ಬರಿ 1,100ಕ್ಕೂ ಹೆಚ್ಚು. 

ತಹಶೀಲ್ದಾರರಿಂದ ರಾಜ್ಯಪಾಲರವರೆಗೆ, ಶಾಸಕರಿಂದ ಪ್ರಧಾನಿ-ರಾಷ್ಟ್ರಪತಿವರೆಗೂ ಸೇರಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಮುಖ ಅಧಿಕಾರಸ್ಥರಿಗೆ ಇಷ್ಟೊಂದು ಪ್ರಮಾಣದಲ್ಲಿ ಮನವಿ ಸಲ್ಲಿಸಿಯೂ ವಿವಾದ ಮಾತ್ರ ಇತ್ಯರ್ಥಗೊಂಡಿಲ್ಲ.

ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ರೈತರ ಹೋರಾಟದ ಹಿಂದೆ ಸಹಿಸಲಾಗದ ನೋವಾಗಿದ್ದು, ಕೇವಲ ನರಗುಂದ ದಿಂದ ಇಷ್ಟು ಮನವಿಗಳು ಸಲ್ಲಿಕೆಯಾಗಿವೆ. ಇನ್ನು ನಾಡಿನಾದ್ಯಂತ ಸಲ್ಲಿಕೆಯಾದ ಮನವಿಗಳು ಲೆಕ್ಕವಿಲ್ಲದಷ್ಟು ಎಂಬುದು ಗಮನಾರ್ಹ.

ಶಾಸಕರಿಗೆ 672 ಅರ್ಜಿ: ರಾಜ್ಯದ 224 ಶಾಸಕರಿಗೆ 3 ಬಾರಿ ಅಂದರೆ 672, 28 ಸಂಸದರಿಗೆ 5 ಬಾರಿ ಅಂದರೆ 140 ಸೇರಿ ಶಾಸಕರು-ಸಂಸದರಿಗೆ ಸಲ್ಲಿಸಿದ್ದು 812 ಮನವಿ ಪತ್ರ. ನರಗುಂದ ತಹಶೀಲ್ದಾರ್‌ಗೆ 50,ಗದಗ ಜಿಲ್ಲಾಧಿ ಕಾರಿಗೆ 40ಕ್ಕೂ ಮೇಲ್ಪಟ್ಟು ಮನವಿ ಸಲ್ಲಿಸಿದ ರೈತರು,  ಅಧಿಕಾರಗಳೇ ನೀವಾದರೂ ಸರ್ಕಾರಗಳಿಗೆ ನಮ್ಮ ಮೊರೆ ತಲುಪಿಸಿ ಎಂದು ಗೋಗರೆದಿದ್ದಾರೆ.

ದಯಾಮರಣಕ್ಕೆ 1500 ಅರ್ಜಿ: ಇನ್ನೊಂದೆಡೆ ಮಹದಾಯಿ ಹೋರಾಟಗಾರರು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಚಳವಳಿ ನಡೆಸಿದ್ದು, ಹೋರಾಟದ ಮತ್ತೂಂದು ಮೈಲಿಗಲ್ಲು. ಜು.16ರಂದು ದಯಾಮರಣ ಪತ್ರ ಚಳವಳಿಗೆ ಚಾಲನೆ ನೀಡಿ ಎಂದು 880 ಪತ್ರ ಅಂಚೆ ಮೂಲಕ ರವಾನಿಸಲಾಗಿದೆ. ಇದರ ಜತೆಗೆ ದಯಾಮರಣಕ್ಕೆ ಇಲ್ಲಿವರೆಗೂ 1500ಕ್ಕೂ ಹೆಚ್ಚು ಮನವಿ ಸಲ್ಲಿಸಿದ್ದಾರೆ. ಒಟ್ಟಾರೆ ರೈತರಿಂದ ಸಲ್ಲಿಕೆಯಾದ ಒಟ್ಟು ಮನವಿಗಳು 2 ಸಾವಿರ ಗಡಿದಾಟಿವೆ. ಇದು ಹೋರಾಟದ ಗಂಭೀರತೆಗೆ ಸಾಕ್ಷಿಯಾಗಿದೆ. ಜು.21ರ ರೈತ ಹುತಾತ್ಮ ದಿನಾಚರಣೆಯಂದು ಹೋರಾಟ 1102 ದಿನಕ್ಕೆ ತಲುಪಲಿದೆ.

ಮೂರು ವರ್ಷಗಳುದ್ದಕ್ಕೂ 2 ಸಾವಿರಕ್ಕೂ ಹೆಚ್ಚು ಮನವಿ ಸಲ್ಲಿಸಿದ್ದರೂ ರೈತರ ಬೇಡಿಕೆಗೆ ಬೆಲೆಯಿಲ್ಲ. ದೇಶದ ಅ ಧಿಕಾರ ಚುಕ್ಕಾಣಿ ಹಿಡಿದವರೆಲ್ಲರಿಗೂಮನವಿ ಸಲ್ಲಿಸಿ ನೀರಿಗಾಗಿ ಹಾತೊರೆದಿದ್ದೇವೆ. ಇನ್ನು  ಆ ನ್ಯಾಯ ದೇವತೆಯೇ ನಮ್ಮ
ಅಳಲು ಆಲಿಸಬೇಕು.

– ವೀರೇಶ ಸೊಬರದಮಠ ಸ್ವಾಮೀಜಿ, ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ

ಯಾರಿಗೆ, ಎಷ್ಟು ಮನವಿ ಸಲ್ಲಿಕೆ ?
12 ಪ್ರಧಾನಿ ನರೇಂದ್ರ ಮೋದಿ
05 ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ
03 ರಾಷ್ಟ್ರಪತಿ ರಾಮನಾಥ ಕೋವಿಂದ
02 ನ್ಯಾಯಾಧಿಕರಣ ಮುಖ್ಯಸ್ಥ ನ್ಯಾ.ಪಂಚಾಳ
03 ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ
02 ಎಐಸಿಸಿ ಹಿಂದಿನ ಅಧ್ಯಕ್ಷೆ ಸೋನಿಯಾ ಗಾಂ ಧಿ
30 ಮಾಜಿ ಸಿಎಂ ಸಿದ್ದರಾಮಯ್ಯ
10 ರಾಜ್ಯಪಾಲ ವಜುಬಾಯಿ ವಾಲಾ
16 ಸಿಎಂ ಕುಮಾರಸ್ವಾಮಿ

– ಸಿದ್ದಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.