3ನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ
Team Udayavani, Jul 22, 2018, 6:00 AM IST
ಬೆಂಗಳೂರು: ಟೋಲ್ ಸಂಗ್ರಹ ಮುಕ್ತಿಗೆ ಒತ್ತಾಯಿಸಿ ಅಖೀಲ ಭಾರತ ಮೋಟಾರು ಟ್ರಾನ್ಸ್ಪೊàರ್ಟ್ ಕಾಂಗ್ರೆಸ್ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಆರಂಭವಾಗಿರುವ ಸರಕು ಸಾಗಣೆದಾರರ ಮುಷ್ಕರ ಭಾನುವಾರ ಮೂರನೇ ದಿನಕ್ಕೆ ಕಾಲಿಡಲಿದ್ದು, ರಾಜ್ಯದಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚಿನ ವ್ಯತ್ಯಯ ಕಂಡುಬಂದಿಲ್ಲ.
ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ಸರಕು ಸಾಗಣೆದಾರರು ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಬಿಜೆಪಿ ಮುಖಂಡರಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.
ಹಾಲು, ತರಕಾರಿ, ಔಷಧ, ದಿನಪತ್ರಿಕೆ ಇತರೆ ಅಗತ್ಯ ವಸ್ತುಗಳ ಪೂರೈಕೆಗೆ ವಿನಾಯ್ತಿ ನೀಡಿರುವುದರಿಂದ ಸಾರ್ವಜನಿಕರಿಗೆ ಮುಷ್ಕರದ ಬಿಸಿ ಹೆಚ್ಚಾಗಿ ತಟ್ಟಿದಂತಿಲ್ಲ. ರಾಜ್ಯದ ಹಲವೆಡೆ ಲಾರಿಗಳ ಸಂಚಾರ ಸ್ವಲ್ಪ ಪ್ರಮಾಣದಲ್ಲಿ ಸ್ಥಗಿತಗೊಂಡಂತಿದೆ. ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದ ಮೂಲಕ ಹಾದು ಹೋಗುವ ಅನ್ಯರಾಜ್ಯಗಳ ಲಾರಿಗಳ ಸಂಖ್ಯೆಯಲ್ಲೂ ತುಸು ಇಳಿಕೆಯಾದಂತೆ ಕಂಡುಬಂದಿದೆ.
ಮುಷ್ಕರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಬಹುತೇಕ ಸರಕು ಸಾಗಣೆ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಸರಕು ಸಾಗಣೆದಾರರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿ ಸದ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಹಾಗೂ ಕೇಂದ್ರ ಸಚಿವರಾಗಿರುವ ರಾಜ್ಯ ಸಂಸದರಿಗೆ ಮನವಿ ಸಲ್ಲಿಸಲಾಗುವುದು. ಈವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಮಾತುಕತೆಗೆ ಆಹ್ವಾನಿಸಿಲ್ಲ. ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುವವರೆಗೆ ಹೋರಾಟ ನಡೆಸಲಾಗುವುದು ಎಂದು ಅಖೀಲ ಭಾರತ ಮೋಟಾರು ಟ್ರಾನ್ಸ್ಪೊàರ್ಟ್ ಕಾಂಗ್ರೆಸ್ನ ದಕ್ಷಿಣ ವಲಯದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಷಣ್ಮುಖಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ