ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ
Team Udayavani, Jul 24, 2018, 6:00 AM IST
ಬೆಂಗಳೂರು: ಕಳೆದ ಕೆಲ ದಿನಗಳು ಅಬ್ಬರಿಸಿದ್ದ ಮಳೆ ಈಗ ಮರೆಯಾಗಿದ್ದು, ಕೇವಲ ಕರಾವಳಿ ಮತ್ತು ಮಲೆನಾಡಿಗೆ ಮಾತ್ರ ಸೀಮಿತವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ,
ಚಿಕ್ಕಮಗಳೂರಿನ ಅಲ್ಲಲ್ಲಿ ಮುಂದಿನ 48 ಗಂಟೆಗಳಲ್ಲಿ ಚದುರಿದಂತೆ ಮಳೆ ಬೀಳುವ ನಿರೀಕ್ಷೆಯಿದೆ.
ಉಳಿದಂತೆ ದಕ್ಷಿಣದ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಬರೀ ಮೋಡಕವಿದ ವಾತಾವರಣ ಅಥವಾ ಜಿಟಿಜಿಟಿ ಮಳೆ ಹನಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ಸೋಮವಾರ ಬೆಳಗ್ಗೆ ಉತ್ತರ ಕನ್ನಡದ ಕ್ಯಾಸಲ್ ರಾಕ್ನಲ್ಲಿ ಅತಿ ಹೆಚ್ಚು 100 ಮಿ.ಮೀ. ಮತ್ತು ತೀರ್ಥಹಳ್ಳಿಯ ಆಗುಂಬೆಯಲ್ಲಿ 90 ಮಿ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ 70 ಮಿ.ಮೀ., ಮಡಿಕೇರಿ, ಶೃಂಗೇರಿ 60 ಮಿ.ಮೀ. ಮಳೆಯಾಗಿದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಕೆಲ ಮನೆಗಳು ಕುಸಿದು ಹಾನಿಯಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಜಾವಳಿ, ಮಾಗುಂಡಿ, ಕಳಸ,ಹೊರನಾಡು, ಕೊಟ್ಟಿಗೆಹಾರದಲ್ಲಿ ಸತತ ಮಳೆಯಾಗುತ್ತಿದೆ. ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಮತ್ತೆ ಮಳೆ ಆರಂಭಗೊಂಡಿದ್ದು, ತುಂಗಾ ಹಾಗೂ ಮಾಲತಿ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ. ಆಗುಂಬೆ ಭಾಗದಲ್ಲಿ 2 ದಿನಗಳಿಂದ ಭಾರೀ ಗಾಳಿ-ಮಳೆಯಾಗುತ್ತಿದ್ದು
ಅಡಿಕೆ ತೋಟಗಳಿಗೆ ಅಪಾರ ಹಾನಿಯಾಗಿದೆ.
ರೈಲು ಹಳಿ ಮೇಲೆ ಭೂಕುಸಿತ: ಸಕಲೇಶಪುರ ತಾಲೂಕಿನ ಆಲುವಳ್ಳಿ ಸಮೀಪ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ಹಳಿಯ ಮೇಲೆ ಮಣ್ಣು ಕುಸಿದಿದ್ದನ್ನು ರೈಲ್ವೆ ಸಿಬ್ಬಂದಿ ಸತತ ಕಾರ್ಯಾಚರಣೆ ಮುಖಾಂತರ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ