ಸರ್ಕಾರದ ವಿರುದ್ಧ ಶೀಘ್ರದಲ್ಲೇ ಹೋರಾಟ: ಬಿಎಸ್ವೈ
Team Udayavani, Jul 23, 2018, 6:00 AM IST
ತೀರ್ಥಹಳ್ಳಿ: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಮೊದಲು ಮತದಾರರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ನಗರದಲ್ಲಿ ಮಾತನಾಡಿ, ಚುನಾವಣೆಗೂ ಮೊದಲು ರೈತರ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ಗಳ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಈಗ ಸಮ್ಮಿಶ್ರ ಸರ್ಕಾರದ ನೆಪವೊಡ್ಡಿ ಸಾಲಮನ್ನಾ ಮಾಡದೆ ರೈತರನ್ನು ವಂಚಿಸುತ್ತಿದ್ದಾರೆ. ಇದಕ್ಕೂ ಮೊದಲು ಆಡಳಿತ ನಡೆಸಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಾರೀ ಯೋಜನೆಗಳ ಶಂಕುಸ್ಥಾಪನೆ ಮಾಡುವುದನ್ನೇ ದೊಡ್ಡ ಸಾಧನೆ ಎಂದುಕೊಂಡಿತ್ತು. ಶಂಕುಸ್ಥಾಪನೆಗೊಂಡ ಯಾವ ಯೋಜನೆಗಳಿಗೂ ಇದುವರೆಗೂ ಹಣ ಬಿಡುಗಡೆಯಾಗದೇ ನನೆಗುದಿಗೆ ಬಿದ್ದಿದೆ. ಅಲ್ಲದೇ, ಸಂಧ್ಯಾಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನವನ್ನು ನೀಡಲು ಸಹ ಹಣವಿಲ್ಲದಷ್ಟು ಖಜಾನೆ ದಿವಾಳಿಯಾಗಿದೆ. ಈ ಎಲ್ಲ ಸಮಸ್ಯೆಗಳ ವಿರುದ್ಧ ಶೀಘ್ರದಲ್ಲಿಯೇ ಹೋರಾಟ ರೂಪಿಸಲಾಗುವುದು ಎಂದು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ