ಆಂಜನೇಯ ದೇಗುಲ ಇಂದು ಸ್ವಾಧೀನ


Team Udayavani, Jul 23, 2018, 6:45 AM IST

sri-anjaneya-temple.jpg

ಗಂಗಾವತಿ: ಐತಿಹಾಸಿಕ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ಪಡೆದಿದ್ದು, ಆಡಳಿತಾಧಿಕಾರಿ ಚಂದ್ರಮೌಳಿ ಹಾಗೂ ತಹಶೀಲ್ದಾರ್‌ ಎಲ್‌.ಡಿ. ಚಂದ್ರಕಾಂತ ಸೇರಿ ಕಂದಾಯ ಇಲಾಖೆಯ ಅಧಿಕಾರಿಗಳು ಜು.23ರಂದು ಬೆಟ್ಟಕ್ಕೆ ತೆರಳಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮಹಾಂತ ವಿದ್ಯಾದಾಸ ಬಾಬಾ ಅವರನ್ನು ದೇವಾಲಯದ ಟ್ರಸ್ಟ್‌ ಕಮಿಟಿ ಪದಚ್ಯುತಿಗೊಳಿಸಿದ ನಂತರ ಸ್ಥಳೀಯ ಅರ್ಚಕರೇ ಪೂಜಾ ಕಾರ್ಯ, ಧಾರ್ಮಿಕ ಕಾರ್ಯ ಕೈಗೊಳ್ಳುತ್ತಿದ್ದರು. ಬಾಬಾ ಬೆಂಗಲಿಗರು ಮತ್ತು ಅಂಜನಿ ಪರ್ವತ ಟ್ರಸ್ಟ್‌ ಕಮಿಟಿ ನಡುವೆ ಆಗಾಗ ಸಂಘರ್ಷ ನಡೆದು ಕಾನೂನು ಸುವ್ಯಸ್ಥೆ ಹದಗೆಟ್ಟ ಪರಿಣಾಮ ಪೊಲೀಸ್‌ ಹಾಗೂ ಕಂದಾಯ ಇಲಾಖೆಯ ಪತ್ರಗಳನ್ನಾಧರಿಸಿ ಜಿಲ್ಲಾಧಿಕಾರಿ ಸರಕಾರದ ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಅರ್ಚಕರಾಗಿದ್ದ ತುಳಸಿದಾಸ ಬಾಬಾ ಅಕ್ರಮ ಕಾರ್ಯವೆಸಗುತ್ತಿದ್ದಾರೆ ಎಂಬ ಕಾರಣಕ್ಕಾಗಿ ಟ್ರಸ್ಟ್‌ 10 ವರ್ಷಗಳ ಹಿಂದೆ ಮಹಾಂತ ವಿದ್ಯಾದಾಸ ಬಾಬಾ ಅವರನ್ನು ಅರ್ಚಕರನ್ನಾಗಿ ನೇಮಿಸಿತ್ತು. ಹಲವು ವಿಷಯಗಳಲ್ಲಿ ಟ್ರಸ್ಟ್‌ ಹಾಗೂ ಬಾಬಾ ನಡುವೆ ಭಿನ್ನಾಭಿಪ್ರಾಯ ಉಂಟಾಗಿ, ಬಾಬಾ ಅವರು ರಾಜಮನೆತನ ನೇತೃತ್ವದ ಟ್ರಸ್ಟ್‌ನ್ನು ನಿರ್ಲಕ್ಷÂ ಮಾಡಿದ್ದರಿಂದ ಸಂಘರ್ಷ ಉಂಟಾಗಿತ್ತು. ಬಾಬಾಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದರಿಂದ ಟ್ರಸ್ಟ್‌ನ ಕಮೀಟಿ ಪೊಲೀಸ್‌ ನೆರವಿನಿಂದ ಅವರನ್ನು ಬೆಟ್ಟದಿಂದ ಕೆಳಗಿಳಿಸಿದ್ದರು. ಬಾಬಾ ಅವರನ್ನು ಬೆಂಬಲಿಗರು ಪುನಃ ಸಂಸ್ಕೃತ ಪಾಠಶಾಲೆಯಲ್ಲಿ ಉಳಿಸಿದ್ದರು. ಎರಡು ಬಾರಿ ಬಾಬಾ ಬೆಂಬಲಿಗರು ಮತ್ತು ಟ್ರಸ್ಟ್‌ ಪದಾಧಿಕಾರಿಗಳ ನಡುವೆ ಸಂಧಾನ ಸಭೆ ಜರುಗಿದರೂ ಸಮಸ್ಯೆ ಬಗೆಹರಿದಿರಲಿಲ್ಲ. ಸಂಘರ್ಷದಿಂದ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಹಿನ್ನೆಲೆಯಲ್ಲಿ ದೇವಾಲಯವನ್ನುಸರಕಾರದ ಸುಪರ್ದಿಗೆ ಪಡೆಯುವಂತೆ ವರದಿ ಆಧರಿಸಿ ಜಿಲ್ಲಾಧಿಕಾರಿಗಳು ಸರಕಾರದ ವಶಕ್ಕೆ ಪಡೆದಿದ್ದಾರೆ.

ಅಂಜನಾದ್ರಿ ಬೆಟ್ಟದಲ್ಲಿ ನಿರಂತರ ದಾಸೋಹ ಮತ್ತು ಪೂಜಾ ಕಾರ್ಯ ಕೈಗೊಳ್ಳಲು ಸರಕಾರದ ಅಧೀನದಲ್ಲಿ ಟ್ರಸ್ಟ್‌ ರಚಿಸಿ ಭಕ್ತರು ನೀಡುವ ದೇಣಿಗೆಯಲ್ಲಿ ದಾಸೋಹ ಸೇರಿ ಮೂಲಸೌಕರ್ಯ ಕಲ್ಪಿಸಲು ಸೂಕ್ತ ನಿಯಮ ರೂಪಿಸಬೇಕು.
– ತಿಪ್ಪೇರುದ್ರಸ್ವಾಮಿ, ಅಂಜನಾದ್ರಿಬೆಟ್ಟದ ಭಕ್ತರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.