ವಿಧಾನಸೌಧ, ವಿಕಾಸಸೌಧ ಬೇಕಾಬಿಟ್ಟಿ ಪ್ರವೇಶಕ್ಕೆ ಬ್ರೇಕ್


Team Udayavani, Jul 25, 2018, 6:00 AM IST

41.jpg

ಬೆಂಗಳೂರು: ಅನಗತ್ಯ ವ್ಯಕ್ತಿಗಳ ಪ್ರವೇಶ, ಬೇಕಾಬಿಟ್ಟಿ ಓಡಾಟದ ಹಿನ್ನೆಲೆಯಲ್ಲಿ ವಿಧಾನಸೌಧ-ವಿಕಾಸಸೌಧ ಅತಿ ಭದ್ರತಾ ವಲಯ (ಹೈ ಸೆಕ್ಯುರಿಟಿ ಝೋನ್‌) ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ವಿಧಾನಸೌಧ- ವಿಕಾಸಸೌಧ ಪ್ರವೇಶಕ್ಕೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸುವುದು ಇದರ ಉದ್ದೇಶವಾಗಿದೆ. ಮುಖ್ಯಮಂತ್ರಿಗಳು, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುವವರಿಗೆ ನಿಗದಿತ ಸಮಯ ಮೀಸಲಿಟ್ಟು, ಪ್ರತ್ಯೇಕ ಪಾಸ್‌ ನೀಡುವ ಬಗ್ಗೆ ಚಿಂತನೆ ನಡೆದಿದೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ನಗರ ಪೊಲೀಸ್‌ ಆಯುಕ್ತರು, ವಾರ್ತಾ ಇಲಾಖೆ ಆಯುಕ್ತರನ್ನು ಒಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇತ್ತೀಚೆಗೆ, ಕೆಲವು ವ್ಯಕ್ತಿಗಳು ಸಚಿವರನ್ನು ಭೇಟಿ ಮಾಡಿಸುವುದಾಗಿ ಜನರನ್ನು ಕರೆತರುವುದು. ಶಿಫಾರಸು ಪತ್ರ ಕೊಡಿಸುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳ ಹೆಸರಿನಲ್ಲಿ ಹಣ ಪಡೆಯುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಮಾಧ್ಯಮಗಳಿಗೂ ಕೆಲವೊಂದು ನಿರ್ಬಂಧ ಹೇರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ಪತ್ರಿಕಾಗೋಷ್ಠಿ ನಡೆಸುವಾಗ ಸಮ್ಮೇಳನ ಸಭಾಂಗಣದಲ್ಲಿ ಸಮಯ ನಿಗದಿ ಮಾಡಿ ಪತ್ರಿಕಾಗೋಷ್ಠಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಒಂದೊಮ್ಮೆ ಮಾಧ್ಯಮಗಳು ಸಚಿವರಿಂದ ಅಥವಾ ಅಧಿಕಾರಿಗಳಿಂದ ಸ್ಪಷ್ಟನೆ, ವಿವರ ಬಯಸಿದಲ್ಲಿ ಸಂಬಂಧಪಟ್ಟವರು ಲಭ್ಯತೆ ಇದ್ದರೆ ಸಮ್ಮೇಳನ ಸಭಾಂಗಣದಲ್ಲೇ ಬಂದು ಮಾಹಿತಿ ನೀಡುವ ವ್ಯವಸ್ಥೆ ಜಾರಿಗೂ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ, ಮುಖ್ಯಮಂತ್ರಿ ಕುಮಾರ ಸ್ವಾಮಿ ಯವರು ಪ್ರತಿಕ್ರಿಯಿಸಿ, “”ವಿಧಾನಸೌಧ- ವಿಕಾಸ ಸೌಧಕ್ಕೆ ಕೆಲವು ದಳ್ಳಾಳಿಗಳು ಪ್ರವೇಶ ಪಡೆಯುತ್ತಿದ್ದಾರೆ. ಈ ದೃಶಗಳು ಸಿಸಿ ಟಿವಿಗಳಲ್ಲಿ ರೆಕಾರ್ಡ್‌ ಆಗಿವೆ. ಇದರಿಂದ
ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ತೊಡಕು ಉಂಟಾಗುತ್ತಿದೆ ಎಂದರು.

ಕಾನೂನು ಬಾಹಿರ ಚಟುವಟಿಕೆಗಳು
ನಡೆಯುತ್ತಿರುವ ಬಗ್ಗೆ ಹಾಗೂ ಸಚಿವರಿಂದ ಕೆಲಸ ಮಾಡಿಸಿ  ಕೊಡುವುದಾಗಿ ಹಣ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಹೀಗಾಗಿ, ಪ್ರವೇಶಕ್ಕೆ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ವಿಧಾನಸೌಧ- ವಿಕಾಸ ಸೌಧಕ್ಕೆ ಭದ್ರತೆಯೂ ಅಗತ್ಯವಾದ್ದರಿಂದ ಅತಿ ಭದ್ರತಾ ವಲಯ ಎಂದು ಘೋಷಿಸುವ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಚರ್ಚೆ ನಡೆದಿದೆ” ಎಂದಿದ್ದಾರೆ.

ಕಾರ್ಯಕರ್ತರ ಪ್ರವೇಶ ಜಾಸ್ತಿ: ಮೂಲಗಳ ಪ್ರಕಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆ ವೇಳೆ ವಿಧಾನಸೌಧಕ್ಕೆ ಆಗಮಿಸುತ್ತಿದ್ದು, ಮುಖ್ಯಮಂತ್ರಿ ಸೇರಿ ದಂತೆ ಸಚಿವರು ದೈನಂದಿನ ಕೆಲಸ ಕಾರ್ಯ ಮಾಡಲು ಬಿಡುತ್ತಿಲ್ಲ. ಶಿಫಾರಸು ಪತ್ರ, ನೆರವು ಮತ್ತಿತರ ಸಹಾಯ ಕೇಳಿ ಬರುವುದು. ಕಚೇರಿಗಳ ಮುಂದೆ ಜಮಾವಣೆಗೊಳ್ಳುವುದು ಹೆಚ್ಚಾಗುತ್ತಿದೆ. ಹೀಗಾಗಿ, ಇದನ್ನು ನಿಯಂತ್ರಿಸಲು ಅತಿ ಭದ್ರತಾ ವಲಯ ಎಂದು ಘೋಷಿಸಲು ನಿರ್ಧರಿಸಲಾಗಿದೆ.

ಹೊಸ ಕ್ರಮವೇನಲ್ಲ: ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಈ ವ್ಯವಸ್ಥೆ ಇದೆ. ಅಲ್ಲಿನ ಸಚಿವಾಲಯದಲ್ಲಿ ಬೆಳಗಿನ ವೇಳೆ ಸಾರ್ವಜನಿಕರು ಸೇರಿದಂತೆ ರಾಜಕಾರಣಿಗಳ ಬೆಂಬಲಿಗರಿಗೆ ಪ್ರವೇಶ ಇಲ್ಲ. ಮುಖ್ಯಮಂತ್ರಿ ಹಾಗೂ ಸಚಿವರನ್ನು ನಿಗದಿತ ಸಮಯದಲ್ಲಿ ಮಾತ್ರ ಸಾರ್ವಜನಿಕರ ಭೇಟಿಗೆ ಅವಕಾಶವಿದೆ. 

ಮಾಧ್ಯಮಕ್ಕೂ ನಿರ್ಬಂಧ?
ಈ ಮಧ್ಯೆ ಮಾಧ್ಯಮದವರನ್ನು ಬಿಡದಂತೆ ವಿಧಾನ ಸೌಧ ಡಿಸಿಪಿಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ನಗರ ಪೊಲೀಸ್‌ ಆಯುಕ್ತರು ಸೂಚಿಸಿದ್ದಾರೆ. ಈ ಕುರಿತು ಮೌಖೀಕ ಆದೇಶ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಮಂಗಳವಾರ ವಿಧಾನಸೌಧದ ಸಿಎಂ ಕಚೇರಿ ಬಳಿ ಮಾಧ್ಯಮದವರು ತೆರಳಲು ಹೋದಾಗ ಪೊಲೀಸರಿಂದ ತಡೆಯುವ ಪ್ರಯತ್ನ ನಡೆಯಿತು. ಹೀಗಾಗಿ, ಮಾಧ್ಯಮದವರು ಹಾಗೂ ಪೊಲೀಸರ ನಡುವೆ ಮಾತಿನ ಘರ್ಷಣೆಯೂ ನಡೆಯಿತು. ನಂತರ ಸಿಎಂ ಕುಮಾರಸ್ವಾಮಿಯವರೇ ಈ ಬಗ್ಗೆ ಸ್ಪಷ್ಟನೆ ನೀಡಿದರು. ಮಾಧ್ಯಮಗಳಿಗೆ ನಿರ್ಬಂಧ ಹೇರಿಲ್ಲ. ಮಾಧ್ಯಮಗಳು ವಿಧಾನಸೌಧದಲ್ಲಿ ಎಲ್ಲೆಡೆ ಸುತ್ತಾಡಿ, ಒಂದೊಂದು ಬಾರಿ ಒಬ್ಬೊಬ್ಬರು ಬಂದು ಪ್ರತಿಕ್ರಿಯೆ ಕೇಳುತ್ತಿದ್ದಾರೆ. ಹೀಗಾಗಿ, ಮಾಧ್ಯಮಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಅಲ್ಲೇ ಎಲ್ಲ ಮಾಹಿತಿ ಸಿಗುವ ವ್ಯವಸ್ಥೆ ಮಾಡಲಿದ್ದೇನೆ ಎಂದು ತಿಳಿಸಿದರು.

ಸದ್ಯದ ವ್ಯವಸ್ಥೆಯೇನು?
ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ವರೆಗೆ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಅವಕಾಶ ಇದೆ. ಮುಂದೆಯೂ ಆ ವ್ಯವಸ್ಥೆ ಇರಲಿದೆ.

ನಿರ್ಬಂಧ ಯಾರ್ಯಾರಿಗೆ?
ಬೆಳಗ್ಗೆ 10.30 ರಿಂದ 3 ಗಂಟೆ ತನಕ ಸಾರ್ವಜನಿಕರು, ರಾಜಕಾರಣಿಗಳು, ಶಾಸಕರು, ಸಚಿವರ ಬೆಂಬಲಿಗರು.

ಮಾಧ್ಯಮಗಳ ನಿಯಂತ್ರಣ
ಕುರಿತಂತೆ ಸಿಎಂ ಏನು ಹೇಳುತ್ತಾರೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ. ಅವರು ನಮ್ಮ ಮುಖ್ಯಸ್ಥರು. ಅವರು ಹೇಳಿದಂತೆ ನಾವು ನಡೆಯಬೇಕಾಗುತ್ತದೆ.
● ಸಿ.ಎಸ್‌.ಪುಟ್ಟರಾಜು, ಸಣ್ಣ ನೀರಾವರಿ ಸಚಿವ

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.