ಚಾಮರಾಜೇಶ್ವರ ರಥೋತ್ಸವಕ್ಕೆ ಈ ಬಾರಿಯೂ ವಿಘ್ನ


Team Udayavani, Jul 26, 2018, 6:45 AM IST

ban26071807medn.jpg

ಚಾಮರಾಜನಗರ: ಪ್ರತಿ ವರ್ಷ ಆಷಾಢದ ಪೂರ್ವಾಷಾಢ ನಕ್ಷತ್ರದ ದಿನ ನಗರದ ಐತಿಹಾಸಿಕ ಚಾಮರಾಜೇಶ್ವರ ರಥೋತ್ಸವ ನಡೆಯುತ್ತಿತ್ತು. ಅದರಂತೆ ಗುರುವಾರ ಈ ಬಾರಿಯ ರಥೋತ್ಸವ ನಡೆಯಬೇಕಿತ್ತು.ನೂತನ ರಥ ನಿರ್ಮಾಣವಾಗದ ಕಾರಣ ಸತತ ಎರಡನೇ ವರ್ಷ ರಥೋತ್ಸವ ನಡೆಯುತ್ತಿಲ್ಲ. ಇದು ಭಕ್ತಾದಿಗಳಿಗೆ ಹಾಗೂ ನವದಂಪತಿಗಳಿಗೆ ನಿರಾಸೆ ಮೂಡಿಸಿದೆ.

2017ರ ಫೆ. 19ರ ನಡುರಾತ್ರಿ ಸಮಯದಲ್ಲಿ ಕಿಡಿಗೇಡಿಯೊಬ್ಬ ನಗರದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿ ರಥ ಭಾಗಶಃ ಸುಟ್ಟುಹೋಗಿತ್ತು. 

ನಿರ್ಲಕ್ಷ್ಯ: ಸುಟ್ಟು ಹೋದ ರಥ ಬಳಸುವುದು ಶಾಸ್ತ್ರ  ಸಮ್ಮತವಲ್ಲ ಎಂದು ಅರ್ಚಕ ವೃಂದ ತಿಳಿಸಿತು. ಮೊದಲೇ ರಥ ಶಿಥಿಲವಾಗಿತ್ತು. ರಥವಿಲ್ಲದ ಕಾರಣ 2017ರ ಆಷಾಢ ರಥೋತ್ಸವ ನಡೆಯಲಿಲ್ಲ. ಆ ವೇಳೆ ಮುಂದಿನ ವರ್ಷವಾದರೂ ಹೊಸ ರಥ ನಿರ್ಮಾಣವಾಗುವುದೆಂದು ಜನ ನಿರೀಕ್ಷಿಸಿದ್ದರು. ಆದರೆ, ಜನತೆಯ ನಿರೀಕ್ಷೆ ಹುಸಿಯಾಗಿದೆ.

ಸಂಪ್ರೋಕ್ಷಣೆ ನೆಪ: ಇದಕ್ಕೆ ದೇವಾಲಯದ ಆಡಳಿತ ವರ್ಗ ಕೊಡುವ ಕಾರಣವೇ ಬೇರೆ. ಪ್ರಸ್ತುತ ಚಾಮರಾಜೇಶ್ವರ ದೇವಸ್ಥಾನದ ನವೀಕರಣ ನಡೆಯುತ್ತಿದ್ದು, ದೇಗುಲ ಸಂಪ್ರೋಕ್ಷಣೆಯಾಗದೇ ರಥೋತ್ಸವ ನಡೆಸುವಂತಿಲ್ಲ. ಸಂಪ್ರೋಕ್ಷಣೆಯಾಗಿದ್ದರೆ ಚಿಕ್ಕರಥವನ್ನಾದರೂ ಬಳಸಿಕೊಂಡು ರಥೋತ್ಸವ ನಡೆಸಬಹುದಿತ್ತು ಎನ್ನುತ್ತಾರೆ. ಆದರೆ, ಸಂಪ್ರೋಕ್ಷಣೆ ನಡೆಯದಿದ್ದರೂ ದೇವಾಲಯದಲ್ಲಿ ದೈನಿಕ ಪೂಜಾ ವಿಧಿ ವಿಧಾನಗಳು ಅದೇ ಗುಡಿಯೊಳಗೆ ನಡೆಯು ತ್ತಲೇ ಇವೆ. ಹಾಗಾಗಿ ರಥೋತ್ಸವ ಮಾಡದಿರಲು ಇದು ಕಾರಣವಲ್ಲ ಎನ್ನುತ್ತಾರೆ ಭಕ್ತಾದಿಗಳು.

ಕರೆಯದ ಮರುಟೆಂಡರ್‌: ಕಳೆದ ವರ್ಷವೇ ನೂತನ ರಥ ನಿರ್ಮಾಣಕ್ಕೆ 1.20 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿತ್ತು. ಜಿಲ್ಲಾಡಳಿತ ಈ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿತ್ತು. ಲೋಕೋಪಯೋಗಿ ಇಲಾಖೆ ನೂತನ ರಥ ನಿರ್ಮಿಸಲು ಟೆಂಡರ್‌ ಕರೆದಿತ್ತು.ಆದರೆ ಕಾರಣಾಂತರಗಳಿಂದ ಟೆಂಡರ್‌ ರದ್ದಾಗಿತ್ತು. 

ನವ ದಂಪತಿಗಳಿಗೆ ನಿರಾಸೆ: ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನವ ದಂಪತಿಗಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಆಷಾಢ ಮಾಸದ ಪೂರ್ವಾಷಾಢದಲ್ಲಿ ನಡೆಯುವ ಈ ಜಾತ್ರೆಗೆ ಮದುವೆಯಾದ ಬಳಿಕ ಆಷಾಢದಲ್ಲಿ ತವರನ್ನು ಸೇರಿರುವ ಪತ್ನಿಯನ್ನು ನೋಡಲು ಪತಿಗೆ ಇದು ಅವಕಾಶ. ಜತೆಗೆ ನವದಂಪತಿಗಳು ಈ ಜಾತ್ರೆಗೆ ಆಗಮಿಸಿ,ರಥಕ್ಕೆ ಹಣ್ಣು ಜವನ ಎಸೆದು ಇಷ್ಟಾರ್ಥ ಪ್ರಾರ್ಥಿಸುವುದು ಪ್ರತೀತಿ. ಆದರೆ, ರಥೋತ್ಸವ ರದ್ದಾಗಿರುವುದು ನವದಂಪತಿಗಳಿಗೆ ನಿರಾಸೆ ಮೂಡಿಸಿದೆ.

ದೇವಾಲಯದ ಜೀರ್ಣೋದಾಟಛಿರ ಕಾಮಗಾರಿಪ್ರಗತಿಯಲ್ಲಿದೆ. ದೇವಾಲಯಕ್ಕೆ  ಸಂಪ್ರೋಕ್ಷಣೆ ನಡೆಯಬೇಕಾಗಿದೆ. ಹಾಗಾಗಿ ರಥೋತ್ಸವ ನಡೆಯುತ್ತಿಲ್ಲ. ನೂತನ ರಥ ನಿರ್ಮಾಣಕ್ಕೆ ಇನ್ನೊಂದು ವಾರದಲ್ಲಿ ಮತ್ತೆ ಟೆಂಡರ್‌ ಕರೆಯಲಾಗುತ್ತದೆ.
– ಮಂಜೇಶ್‌,
ಕಾರ್ಯನಿರ್ವಾಹಕ ಅಧಿಕಾರಿ, ಚಾಮರಾಜೇಶ್ವರ
ದೇವಾಲಯ

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.