ಕೈಗೆ ಕಟ್ಟುವ ದಾರಕ್ಕೆ ನಿಜವಾಗಿಯೂ ಶಕ್ತಿ ಇದೆಯಾ?:ಭಗವಾನ್ ವ್ಯಂಗ್ಯ
Team Udayavani, Jul 26, 2018, 3:46 PM IST
ಮೈಸೂರು : ಹಿಂದುಗಳ ಕೆಲ ಆಚರಣೆಗಳನ್ನು ಮೌಢ್ಯ ಎನ್ನುವ ಮೂಲಕ ವಿಚಾರವಾದಿ ಪ್ರೊಫೆಸರ್ ಕೆ.ಎಸ್.ಭಗವಾನ್ ಅವರು ಮತ್ತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವು ರಾಜಕಾರಣಿಗಳು ಕೈಗೆ ದಾರ ಕಟ್ಟಿಕೊಳ್ಳುತ್ತಿದ್ದಾರೆ. ಕೈಗೆ ಕಟ್ಟಿಕೊಳ್ಳುವ ದಾರಗಳಿಗೆ ನಿಜವಾಗಿಯೂ ಶಕ್ತಿ ಇದೆಯಾ? ಶಕ್ತಿ ಇದ್ದರೆ ಗಡಿಗೆ ಹೋಗಲಿ. ಅಲ್ಲಿ ದಾರ ಪ್ರದರ್ಶಿಸಿದರೆ ವೈರಿಗಳು ಓಡಿ ಹೋಗುತ್ತಾರಾ ಎಂದು ಪ್ರಶ್ನಿಸಿದರು.
ದೇಶವನ್ನು ಇಂದು ಪಂಚಾಂಗ ಆಳುತ್ತಿದೆ. ಮೌಢ್ಯಗಳು ತುಂಬಿ ಹೋಗಿವೆ. ಮೊದಲು ಇದನ್ನು ತಡೆಯಬೇಕಾಗಿದೆ. ಹೋಮ, ಹವನ ಮಾಡುವುದರಿಂದ ಎಲ್ಲವೂ ಸಾಧ್ಯ ಅಂತಾದರೆ , ಶತ್ರುಗಳು ಓಡಿ ಹೋಗುತ್ತಾರೆ ಅಂತಾದರೆ ನಾನು ಮೊದಲು ಅದನ್ನು ಮಾಡಲು ಆರಂಭಿಸುತ್ತೇನೆ ಎಂದರು.
ಮಿಲಿಟರಿಗೆ ಯಾಕೆ ಸುಮ್ಮನೆ ಖರ್ಚು ಮಾಡುವುದು. ಆ ಹಣವನ್ನು ಯಾಗ ಮಾಡಲು ವಿನಿಯೋಗಿಸಲಿ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ