ಉ.ಕ.ಅನ್ಯಾಯ ಸರಿಪಡಿಸುತ್ತೇವೆ
Team Udayavani, Jul 27, 2018, 6:55 AM IST
ಬೆಂಗಳೂರು: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವ್ಯತ್ಯಾಸ
ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೆಡಿಎಸ್ ದಕ್ಷಿಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಿರುವುದರಿಂದ ಸಮ್ಮಿಶ್ರ ಸರ್ಕಾರದಲ್ಲಿ ಆ ಭಾಗದ ಶಾಸಕರಿಗೆ ಹೆಚ್ಚಿನ ಅವಕಾಶ ದೊರೆತಿದೆ. ಕಾಂಗ್ರೆಸ್ನಿಂದ ಉ.ಕ. ಭಾಗದಿಂದಲೂ ಶಾಸಕರು ಆಯ್ಕೆಯಾಗಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಆಗಿರುವ ಅನ್ಯಾಯ ಸರಿಪಡಿಸುತ್ತೇವೆ’ ಎಂದರು.
ಪ್ರತ್ಯೇಕ ಕರ್ನಾಟಕ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, “ಜನರು ಮತ ಹಾಕುವುದಕ್ಕೂ ಸರ್ಕಾರ ಅಭಿವೃದ್ಧಿ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಅಧಿಕಾರಕ್ಕೆ ಬಂದ ಸರ್ಕಾರ
ಯಾವುದೇ ಪ್ರದೇಶ ಹಾಗೂ ಜನರನ್ನು ತಿರಸ್ಕಾರ ಮಾಡಬಾರದು’ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಗೆ ಕಿವಿ ಮಾತು ಹೇಳಿದರು.
ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ದೊರೆತಿಲ್ಲ. ಹಾಗಂತ ಕರಾವಳಿ ಅಭಿವೃದ್ಧಿ ಮಾಡುವುದಿಲ್ಲ ಎಂದು ಹೇಳಲಾಗುವುದಿಲ್ಲ ಎಂದರು.ಉ.ಕ.ಪ್ರತ್ಯೇಕ ರಾಜ್ಯದ ಕೂಗು ಆಗಾಗ ಕೇಳಿ ಬರುತ್ತಿದ್ದು, ಅದು ಸರಿಯಲ್ಲ. ಕೆಲ ರಾಜಕಾರಣಿಗಳಿಂದ ಜನರನ್ನು ಎತ್ತಿ ಕಟ್ಟುವ ಕೆಲಸ ಆಗುತ್ತಿದೆ.
– ಬಸವರಾಜ ಹೊರಟ್ಟಿ, ವಿ.ಪ. ಸಭಾಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ