ಚಂದ್ರ ಗ್ರಹಣದ ಎಫೆಕ್ಟ್! ವಿಧಾನಸೌಧ, ವಿಕಾಸಸೌಧ ಖಾಲಿ, ಖಾಲಿ
Team Udayavani, Jul 27, 2018, 1:37 PM IST
ಬೆಂಗಳೂರು:ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳ ಬಾಗಿಲುಗಳು ಇಂದು ಸಂಜೆಯಿಂದ ಮುಚ್ಚಲಿದೆ, ಮತ್ತೊಂದೆಡೆ ವಿಧಾನಸೌಧ, ವಿಕಾಸಸೌಧ ಕೂಡಾ ಖಾಲಿ, ಖಾಲಿ ಇದ್ದು ಬಿಕೋ ಎನ್ನುತ್ತಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.
ವಿಧಾನಸೌಧದಲ್ಲಿ ಬಹುತೇಕ ಸಚಿವರು, ಶಾಸಕರ ಕೊಠಡಿಗಳು ಖಾಲಿ, ಖಾಲಿಯಾಗಿದೆ. ವಿಧಾನಸೌಧದ ಪಾರ್ಕಿಂಗ್ ಸ್ಥಳದಲ್ಲಿಯೂ ವಾಹನಗಳಿಲ್ಲದೆ ಬಿಕೋ ಎನ್ನುತ್ತಿದೆ.
ವಿಧಾನಸೌಧ, ವಿಕಾಸೌಧದಲ್ಲಿನ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೈರು ಹಾಜರಾಗಿದ್ದಾರೆ. ಸಚಿವರು, ಶಾಸಕರು ದೇವಾಲಯಕ್ಕೆ ಭೇಟಿ ಕೊಟ್ಟು ದೇವರ ಮೊರೆ ಹೋಗಿದ್ದಾರೆ.
ಕೇತುಗ್ರಸ್ಥ ಚಂದ್ರಗ್ರಹಣದಿಂದ ಕೆಲವು ರಾಶಿಯವರಿಗೆ ಕೆಡುಕು ಉಂಟಾಗಲಿದೆ ಎಂಬ ಜ್ಯೋತಿಷಿಗಳ ಹೇಳಿಕೆಯಿಂದ ಆತಂಕಗೊಂಡಿರುವ ರಾಜಕೀಯ ನಾಯಕರು ಗುಟ್ಟಾಗಿ ಹೋಮ, ಹವನ ಪೂಜೆಯಲ್ಲಿ ತೊಡಗಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಗುರುವಾರ ತಿರುಪತಿಗೆ ಭೇಟಿ ನೀಡಿದೆ. ಸಚಿವ ಎಚ್.ಡಿ.ರೇವಣ್ಣ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಆಯೋಜಿಸಿದ್ದಾರೆ.
ಶತಮಾನದ ದೀರ್ಘಾವಧಿ ಚಂದ್ರಗ್ರಹಣ ಶುಕ್ರವಾರ ರಾತ್ರಿ 11.45ಕ್ಕೆ ಆರಂಭವಾಗಲಿದೆ. 1ಗಂಟೆಯಿಂದ 2.43ರವರೆಗೆ ಸಂಪೂರ್ಣ ಗ್ರಹಣ ಗೋಚರಿಸಲಿದೆ. ಮುಂಜಾನೆ 3.49ಕ್ಕೆ ಗ್ರಹಣ ಮೋಕ್ಷ ಕಾಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ