ಏನಿದು ರಕ್ತಚಂದಿರ ವಿಸ್ಮಯ; ಇನ್ನು 104 ವರ್ಷ ಕಾಯಬೇಕು!


Team Udayavani, Jul 27, 2018, 1:46 PM IST

lunar-new.jpg

ಬೆಂಗಳೂರು:ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರಗ್ರಹಣ ಶುಕ್ರವಾರ ರಾತ್ರಿ ಸಂಭವಿಸಲಿದ್ದು, ವಿದ್ಯಮಾನ ವೀಕ್ಷಣೆಗಾಗಿ ಜನಸಾಮಾನ್ಯರು ಸೇರಿದಂತೆ ವಿಜ್ಞಾನಿಗಳು ಕೂಡಾ ಕಾತುರರಾಗಿದ್ದಾರೆ. ಯಾಕೆಂದರೆ ಇಂದು ರಾತ್ರಿಯ ರಕ್ತವರ್ಣದ ಚಂದಿರನ ದರ್ಶನ ತಪ್ಪಿಸಿಕೊಂಡರೆ, ಇನ್ನು 104 ವರ್ಷ ಕಾಯಬೇಕು!

ಖಗ್ರಾಹ ಚಂದ್ರಗ್ರಹಣ ಇನ್ನು 2123ರಲ್ಲಿ ಸಂಭವಿಸಲಿದೆ. ರಾತ್ರಿ 11.43ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 2.43ನಿಮಿಷಕ್ಕೆ ಗ್ರಹಣ ಪೂರ್ಣತೆ, ಬೆಳಗಿನ ಜಾವ 3.49ಕ್ಕೆ ಗ್ರಹಣ ಮೋಕ್ಷ ಕಾಲ. ಈ ಅತ್ಯಪರೂಪದ ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿ ವೀಕ್ಷಿಸಬಹುದಾಗಿದೆ. ಯಾವುದೇ ರೀತಿಯ ಹಾನಿಯಾಗುವುದಿಲ್ಲ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ ಖಗ್ರಾಹ ಚಂದ್ರಗ್ರಹಣದಿಂದ ಪ್ರಳಯ ಸಂಭವಿಸುತ್ತದೆ ಎಂಬುದು ಸತ್ಯಕ್ಕೆ ದೂರ ಎಂಬುದಾಗಿ ವಿಜ್ಞಾನಿಗಳ ಸ್ಪಷ್ಟನೆ. ಭಾರತವೂ ಸೇರಿದಂತೆ ಆಫ್ರಿಕಾ, ಯುರೋಪ್, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಅಮೆರಿಕದಲ್ಲಿ ಬ್ಲಡ್ ಮೂನ್ ಕಾಣಿಸಲಿದೆ.

ರಕ್ತವರ್ಣ ಚಂದ್ರ ದರ್ಶನದ ಜೊತೆಗೆ ಶುಕ್ರವಾರ ಸುಮಾರು 15 ವರ್ಷಗಳ ಬಳಿಕ ಮಂಗಳ ಗ್ರಹವೂ ಕೂಡಾ ಭೂಮಿಯ ಅತ್ಯಂತ ಸಮೀಪಕ್ಕೆ ಬರಲಿದೆ. ಇದರಿಂದ ಮಂಗಳ ಗ್ರಹ ಹೆಚ್ಚು ಪ್ರಕಾಶಮಾನವಾಗಿ ಗೋಚರಿಸಲಿದೆ.

ಚಂದ್ರಗ್ರಹಣದ ಕುರಿತಾಗಿ ಜನರು ಹೆಚ್ಚು ಗಾಬರಿಗೊಳಗಾಗೋದು ಬೇಡ ಎಂಬುದು ಹಲವು ತಜ್ಞರ ಅಭಿಮತ. ಗರ್ಭಿಣಿ ಸ್ತ್ರೀಯರು ಕೂಡಾ ಯಾವುದೇ ಆತಂಕಕ್ಕೆ ಒಳಗಾಗಬಾರದು. ಚಂದ್ರಗ್ರಹಣಕ್ಕೂ, ಹೆರಿಗೆಗೂ ಯಾವುದೇ ಸಂಬಂಧವಿಲ್ಲ.

ಏನಿದು ರಕ್ತಚಂದಿರ:

ಗ್ರಹಣದ ವೇಳೆ ಸೂರ್ಯನ ಬೆಳಕು ಚಂದ್ರನ ಮೇಲೆ ನೇರವಾಗಿ ಬೀಳದೆ ಚದುರಿದಂತೆ ಬೀಳುತ್ತದೆ. ಚಂದ್ರನ ಮೇಲೆ ಬಿದ್ದ ಅಲ್ಪ ಸ್ವಲ್ಪ ಬೆಳಕು ಪರೋಕ್ಷವಾಗಿ ಭೂಮಿಗೆ ಪ್ರತಿಫಲನಗೊಳ್ಳುತ್ತದೆ. ಭೂಮಿಯ ವಾತಾವರಣದಿಂದ ಚಂದ್ರ ಕೆಂಪು ಬಣ್ಣಲ್ಲೆ ತಿರುಗಿದಂತೆ ಗೋಚರಿಸಲಿದೆ.

ವೀಕ್ಷಣೆಗೆ ಅವಕಾಶ:

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಲ್ಲಿ ರಾತ್ರಿ 11.30ರಿಂದ 3.30ರ ವರೆಗೆ ಈ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ದೂರದರ್ಶಕ ಮತ್ತು ದುರ್ಬೀನುಗಳ ವ್ಯವಸ್ಥೆ ಮಾಡಲಾಗಿದೆ ಎಂದು ನಿರ್ದೇಶಕ ಡಾಣ ಕೆ.ವಿ. ರಾವ್‌ ತಿಳಿಸಿದ್ದಾರೆ. ಉಡುಪಿ ಪರ್ಕಳದ ಸ್ವಾಗತ್‌ ಹೊಟೇಲ್‌ ಬಳಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.