ಸ್ಮಶಾನದಲ್ಲಿ ಉಪಾಹಾರ ಸೇವಿಸಿದ ಸತೀಶ
Team Udayavani, Jul 28, 2018, 6:30 AM IST
ಬೆಳಗಾವಿ: ಹಣ್ಣು ಹಂಪಲಗಳ ಉಪಯೋಗ ನಮಗೆ ಗೊತ್ತಾಗಬೇಕಿದೆ. ಕೆಲವು ದಿನಗಳ ಹಿಂದೆ ಜಡ್ಡಿಯಲ್ಲಿ ಸತ್ಕಾರ ಮಾಡುವಾಗ ನಿಂಬೆಹಣ್ಣು ಕೊಟ್ಟಿದ್ದರು. ಅದಕ್ಕೆ ಮಾಧ್ಯಮದಲ್ಲಿ ಬೇರೆ ಅರ್ಥ ನೀಡಲಾಯಿತು. ನಿಂಬೆ ಹಣ್ಣಿನ ವಾಸನೆ ತೆಗೆದುಕೊಳ್ಳುವಾಗ ಅಪಾರ್ಥ ಕಲ್ಪಿಸಲಾಗಿದೆ ಎಂದು ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ಮಾನವ ಬಂಧುತ್ವ ವೇದಿಕೆ ವತಿಯಿಂದ ಚಂದ್ರಗ್ರಹಣ ನಿಮಿತ್ತ ಶುಕ್ರವಾರ ಸದಾಶಿವ ನಗರದ ಸ್ಮಶಾನ ಭೂಮಿಯಲ್ಲಿ ನಡೆದ ಮೌಡ್ಯ ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಾಹಾರ ಸವಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದ ಬಗ್ಗೆ ಸುದ್ದಿ ಪ್ರಕಟವಾಗಿರುವ ಕುರಿತು ಹಾಸ್ಯಭರಿತವಾಗಿಯೇ ಸ್ಪಷ್ಟೀಕರಣ ನೀಡಿದರು. ನಿಂಬೆ ಹಣ್ಣಿನಲ್ಲಿ ಔಷಧೀಯ ಗುಣ ಇದೆ. ಗ್ಯಾಸ್ಟ್ರಿಕ್ ಹಾಗೂ ದೇಹದ ತೂಕ ಕಡಿಮೆ ಮಾಡಲು ಇದನ್ನು ಬಳಸಲಾಗುತ್ತದೆ. ವಾಹನದಲ್ಲಿದ್ದ ಲಿಂಬೆಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ವಾಸನೆ ನೋಡುವಾಗ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿದೆ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ