ಶ್ವಾಸಕೋಶ ತೊಂದರೆಯಿಂದ ಹಸುಗೂಸು ಸಾವು
Team Udayavani, Jul 29, 2018, 6:15 AM IST
ಬೆಳಗಾವಿ: ಗೋಕಾಕ್ನ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸು ತೀವ್ರ ಶ್ವಾಸಕೋಶ ತೊಂದರೆಯಿಂದಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶನಿವಾರ ಬೆಳಗ್ಗೆ ಮೃತಪಟ್ಟಿದೆ.
ಹೆರಿಗೆ ನೋವಿನಿಂದಾಗಿ ಗೋಕಾಕ್ ಫಾಲ್ಸ್ನ ಸುರೇಖಾ ರವಿ ಲಂಕೆನ್ನವರ ಎಂಬುವರು ಗೋಕಾಕ್ ಖಾಸಗಿ ಆಸ್ಪತ್ರೆಗೆ ಶನಿವಾರ ಬೆಳಗಿನ ಜಾವ 3:30ಕ್ಕೆ ದಾಖಲಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದು, ಗೋಕಾಕ್ನ ವೈದ್ಯರು ಎಷ್ಟು ಕಷ್ಟಪಟ್ಟರೂ ಮಗುವಿನ ಶ್ವಾಸಕೋಶದಲ್ಲಿ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಸಂಬಂಧಿಕರು ಮಗುವನ್ನು ಆ್ಯಂಬುಲೆನ್ಸ್ ಮೂಲಕ ಬೆಳಗಾವಿಗೆ ಕರೆ ತಂದಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಸುಮಾರು ಒಂದೂವರೆ ಗಂಟೆಗಳ ಕಾಲ ಐಸಿಯುನಲ್ಲಿ ಇಟ್ಟರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆಯಿಂದಲೇ ತಾಯಿಗೆ ಹೆರಿಗೆ ನೋವಿತ್ತು. ಆದರೆ, ಚಂದ್ರಗ್ರಹಣದಿಂದಾಗಿ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಚಂದ್ರಗ್ರಹಣ ಮುಗಿದ ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬಗ್ಗೆ ನಿರ್ಧರಿಸಿದ್ದು, ಹೀಗಾಗಿ ಮಧ್ಯರಾತ್ರಿ 1:30ರ ಸುಮಾರಿಗೆ ಮೊದಲು ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ಗೋಕಾಕ್ನ ಖಾಸಗಿ ಆಸ್ಪತ್ರೆಗೆ 3:30ಕ್ಕೆ ಕರೆ ತಂದಿದ್ದಾಗಿ ಮಗುವಿನ ಸಂಬಂಧಿಕರು ವೈದ್ಯರ ಎದುರು ಹೇಳಿದ್ದಾರೆ. ಗೋಕಾಕ್ನಲ್ಲಿ ಇಬ್ಬರು ವೈದ್ಯರು ತಾಯಿಗೆ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಿದರು. ಆದರೆ, ಮಗು ಶ್ವಾಸಕೋಶದ ತೊಂದರೆಯಿಂದಾಗಿ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಬೆಳಗ್ಗೆ ಮಗುವನ್ನು ಆಸ್ಪತ್ರೆಗೆ ಕರೆ ತಂದಾಗ ತೀವ್ರ ತೊಂದರೆಯಲ್ಲಿತ್ತು. ಕೂಡಲೇ ಮಗುವನ್ನು ತುರ್ತು ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಐಸಿಯುನಲ್ಲಿ ಎಲ್ಲ ವ್ಯವಸ್ಥೆ ಮಾಡಿ ಎಷ್ಟೇ ಕಷ್ಟಪಟ್ಟರೂ ಮಗುವಿನ ಶ್ವಾಸಕೋಶದಲ್ಲಿ ಅಭಿವೃದ್ಧಿ ಕಾಣಲಿಲ್ಲ. ಹೀಗಾಗಿ ಮಗು ಮೃತಪಟ್ಟಿದೆ.
– ಡಾ| ಶಶಿಕಾಂತ ಮುರಗೋಡ, ಬೆಳಗಾವಿಯ ವೈದ್ಯ
ಬೆಳಗಿನ ಜಾವ 3:30ಕ್ಕೆ ತಾಯಿಯನ್ನು ಆಸ್ಪತ್ರೆಗೆ ಕರೆ ತಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆರಿಗೆಯಾಗಿದೆ. ಆದರೆ ಮಗು ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿತ್ತು. ಕೂಡಲೇ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಯಿತು. ನಂತರ ಸಂಬಂಧಿಕರು ಮಗುವನ್ನು ಬೆಳಗಾವಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
– ಡಾ| ಮಹಾಂತೇಶ ಕಡಾಡಿ, ವೈದ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು