ಮಂಡ್ಯದ ಜಲಯೋಧ ಕಾಮೇಗೌಡರಿಗೆ ಲಕ್ಷಣ್ಮ ನಮನ


Team Udayavani, Jul 31, 2018, 6:00 AM IST

kamegowda.jpg

ಮಂಡ್ಯ: ಕಾಮೇಗೌಡರ ಜಲಸಂರಕ್ಷಣಾ ಕಾರ್ಯ ಈಗ ದೇಶಾದ್ಯಂತ ಸುದ್ದಿ ಮಾಡುತ್ತಿದೆ.ಬೇಸಿಗೆಯಲ್ಲಿ ತಮ್ಮೂರಿನ ಜನ -ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸ್ವಂತ ಖರ್ಚಲ್ಲಿ 14 ಚೆಕ್‌ ಡ್ಯಾಂಗಳನ್ನು ನಿರ್ಮಿಸಿದ ಜಲಯೋಧ ಈಗ ಟ್ವೀಟ್‌ ಲೋಕದ ಕಣ್ಮಣಿ.

ಯಾವುದೇ ಫ‌ಲಾಪೇಕ್ಷೆಯಿಲ್ಲದೆ, ಸ್ವಂತ ದುಡಿಮೆಯ 15 ಲಕ್ಷ ರೂ. ವ್ಯಯಿಸಿ ನೀರಿನ ಹೊಂಡಗಳನ್ನು ರಚಿಸಿದ
ಮಂಡ್ಯದ ಮಳವಳ್ಳಿಯ ದಾಸನದೊಡ್ಡಿ ಗ್ರಾಮದ ಈ ಕುರಿಗಾಹಿಯನ್ನು ಹಿರಿಯ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌
ಗುರುತಿಸಿದ್ದಾರೆ. ಜಲಸಂರಕ್ಷಣೆ ಮಾಡುತ್ತಿರುವ ಕಾಮೇಗೌಡರಿಗೆ ಪ್ರಣಾಮಗಳು ಎಂದು ಲಕ್ಷ್ಮಣ್‌ ಶ್ಲಾಘಿಸಿ ಟ್ವೀಟ್‌ ಮಾಡಿದ್ದಾರೆ.

ಕಾಮೇಗೌಡರ ಜನೋಪಯೋಗಿ ಕಾರ್ಯಕ್ಕೆ ಈ ಹಿಂದೆಯೇ ಹತ್ತು ಹಲವು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿದ್ದವು. ರಾಜ್ಯದ ಜನರಿಗೆ ಇವರ ಕಾರ್ಯ ಪರಿಚಿತವಾಗಿತ್ತು. ಇದೀಗ ವಿ.ವಿ.ಎಸ್‌. ಲಕ್ಷ್ಮಣ್‌ರಂತಹ ಕ್ರಿಕೆಟ್‌ ದಿಗ್ಗಜರ ಟ್ವೀಟ್‌ನಿಂದಾಗಿ ಕಾಮೇಗೌಡರ ಖ್ಯಾತಿ ರಾಷ್ಟ್ರ ಮಟ್ಟಕ್ಕೆ ಪಸರಿಸಿದೆ.

ಕಾಮೇಗೌಡರ ಪರಿಚಯ: ಪರಿಸರ ಸಂರಕ್ಷಣೆಯಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಪೋಷಣೆಯೊಂದಿಗೆ
ಅಂತರ್ಜಲ ವೃದ್ಧಿಗಾಗಿ 14 ಚೆಕ್‌ ಡ್ಯಾಂಗಳನ್ನು ನಿರ್ಮಿಸಿದ ದಾಸನದೊಡ್ಡಿ ಗ್ರಾಮದ ಕಲ್ಮೆನೆ ಕಾಮೇಗೌಡರ ಸಾಧನೆ ದೇಶಕ್ಕೆ ಮಾದರಿಯಾಗಿದೆ.

ತಾಲೂಕಿನ ದಾಸನದೊಡ್ಡಿ ಕಾಮೇಗೌಡರು ತಮ್ಮ 80ರ ಇಳಿ ವಯಸ್ಸಿನಲ್ಲೂ ಸಹ ಕಳೆದ 50 ವರ್ಷಗಳಿಂದ
ಪಾಲಿಸಿಕೊಂಡ ಬಂದ ಪರಿಸರ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಯ ಕಾರ್ಯಕ್ರಮಗಳನ್ನು ಯಾರ ಸಹಾಯ ಮತ್ತು ನೆರವಿಲ್ಲದೇ ಏಕಾಂಗಿಯಾಗಿಯೇ ಮುಂದುವರಿಸಿಕೊಂಡು ಬಂದು ಪರಿಸರ ಬೆಳವಣಿಗೆಗೆ ಹೊಸ ಅಧ್ಯಾಯವನ್ನೇ ಸೃಷ್ಟಿ ಮಾಡಿದ್ದಾರೆ.

ಕಾಮೇಗೌಡರು ಮಾಡುವ ಸಾಮಾಜಿಕ ಸೇವೆಗೆ ವೃದ್ಧಾಪ್ಯ ಅಡ್ಡಿಯಾಗಿಲ್ಲ. ಸಮಾಜ ಸೇವೆಯೇ ದೇಶ ಸೇವೆ ಎಂದು ಭಾವಿಸಿ ಕಾಯಕ ಮಾಡುವ ಇವರು,ದಾಸನದೊಡ್ಡಿ ನೀಲಿವೆಂಕಟೆಗೌಡರ 10 ಮಕ್ಕಳಲ್ಲಿ ಕೊನೆಯ ಮಗ. ಪತ್ನಿ ಕೆಂಪಮ್ಮ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಬ್ಬರು ಮಕ್ಕಳಿಗೆ ಪಿತ್ರಾರ್ಜಿತವಾಗಿ ಬಂದ ಎರಡು ಎಕರೆ ಜಮೀನನ್ನು ಹಂಚಿ ತಾವು ನಿರಾಧಾರಿಗಳಾಗಿ ಮಕ್ಕಳ ಮನೆಯಲ್ಲೇ ಆಶ್ರಯ ಪಡೆದಿದ್ದಾರೆ. ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ. ಈ ಹಣದಿಂದಲೇ ಸಸಿಗಳ ಖರೀದಿಸಿ ನೆಡುವುದು, ಪೋಷಣೆ ಮಾಡುವುದೇ ಇವರ ಕಾಯಕವಾಗಿದೆ.

ಲಕ್ಷ್ಮಣ್‌ ಟ್ವೀಟ್‌ನಲ್ಲೇನಿದೆ?
ಕರ್ನಾಟಕದ ಮಂಡ್ಯ ಜಿಲ್ಲೆಯ 82 ವರ್ಷದ ಕಾಮೇಗೌಡರು ಬೇಸಿಗೆಯಲ್ಲೂ ತುಂಬಿರುವಂತಹ 14 ನೀರು ಹೊಂಡ
ಗಳನ್ನು ನಿರ್ಮಿಸಿದ್ದಾರೆ. ಸ್ವತಃ ತಾವೇ ಇದರ ನಿರ್ವಹಣೆಯನ್ನೂ ಮಾಡುತ್ತಿದ್ದು, ಇದಕ್ಕಾಗಿ ತಾವು ಗಳಿಸಿದ 15 ಲಕ್ಷ ರೂ. ವ್ಯಯಿಸಿದ್ದಾರೆ. ಇವರಿಗೆ ಪ್ರಣಾಮಗಳು

ಉಡುಪಿ ಶಿಕ್ಷಕರನ್ನೂ ಶ್ಲಾಘಿಸಿದ್ದ ಕ್ರಿಕೆಟಿಗ
ಸಾಮಾಜಿಕ ಜಾಲತಾಣ ಟ್ವೀಟರ್‌ ಅನ್ನು ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಉತ್ತಮ ಕಾರ್ಯಕ್ಕಾಗಿ ಬಳಸುತ್ತಿದ್ದಾರೆ. ದೇಶದ ವಿವಿಧ ಮೂಲೆಗಳ ತೆರೆಮರೆಯ ಸಾಧಕರ ಕಾರ್ಯಗಳನ್ನು ಗುರುತಿಸಿ, ಅವರಿಗೆ ಅಭಿನಂದನೆ ಸಲ್ಲಿಸಿ ಲಕ್ಷ್ಮಣ್‌
ಆಗಾಗ್ಗೆ ಟ್ವೀಟ್‌ ಮಾಡುತ್ತಿರುತ್ತಾರೆ. ದಿನಗಳ ಹಿಂದಷ್ಟೇ, ಇನ್ನೊಬ್ಬ ಕನ್ನಡಿಗರನ್ನು ಗುರುತಿಸಿದ್ದರು ಲಕ್ಷ್ಮಣ್‌. ಮಕ್ಕಳು ಶಾಲೆ ತೊರೆಯುವುದನ್ನು ತಪ್ಪಿಸಲು, ಸ್ವತಃ ನಿತ್ಯ ಬಸ್‌ ಚಲಾಯಿಸಿಕೊಂಡು ಮಕ್ಕಳನ್ನು ಶಾಲೆಗೆ ಕರೆತರುವ ಉಡುಪಿ
ಜಿಲ್ಲೆಯ ಬ್ರಹ್ಮಾವರದ ಬರಾಲಿ ಗ್ರಾಮದ ಶಿಕ್ಷಕ ರಾಜಾರಾಮ್‌ ಅವರನ್ನು ತಮ್ಮ ಟ್ವೀಟ್‌ ಮೂಲಕ ಲಕ್ಷ್ಮಣ್‌ ಅಭಿನಂದಿಸಿದ್ದರು.

– ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.