ಶಿಕ್ಷಕರ ವರ್ಗಾವಣೆ ತೊಡಕು: ಮಾಹಿತಿ ಪಡೆದ ಸಚಿವ ಮಹೇಶ್
Team Udayavani, Jul 31, 2018, 6:40 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆಯಲ್ಲಿ ಉಂಟಾಗಿರುವ ಕಾನೂನಿನ ತೊಡಕು ಹಾಗೂ ಪದವೀಧರ ಶಿಕ್ಷಕರ ನೇಮಕಾತಿ ಗೊಂದಲದ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಸೋಮವಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಶಿಕ್ಷಣ ಇಲಾಖೆ ಅಧಿಕಾರಿಗಳ ದಿಢೀರ್ ಸಭೆ ನಡೆಸಿದ ಅವರು, 10 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಗೊಂದಲದ ಬಗ್ಗೆ ಮಾಹಿತಿ ಪಡೆದು, ಆದಷ್ಟು ಬೇಗ ನೇಮಕಾತಿ ಪೂರ್ಣಗೊಳಿಸುವ ಬಗ್ಗೆಯೂ ಸೂಚನೆ ನೀಡಿದ್ದಾರೆ. ನೇಮಕಾತಿ ವೇಳಾಪಟ್ಟಿಯಂತೆ ಪದವೀಧರ ಶಿಕ್ಷಕರ 1:2 ಅನುಪಾತದ ಕೌನ್ಸೆಲಿಂಗ್ ಜುಲೈ 29ರಿಂದ ಆರಂಭವಾಗಬೇಕಿತ್ತು. ಜಿಲ್ಲಾ ಮಟ್ಟದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಿದೆಯೇ, ಇಲ್ಲವೋ ಎಂಬುದರ ಮಾಹಿತಿ ಆಯುಕ್ತರ ಮೂಲಕ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಕರ ವರ್ಗಾವಣೆ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣಾ ಹಂತ ದಲ್ಲಿದ್ದು, ಯಾವಾಗ ಇತ್ಯರ್ಥವಾಗಬಹುದು, ವರ್ಗಾವಣೆಯನ್ನು ಗೊಂದಲವಿಲ್ಲದೇ ಹೇಗೆ ಮಾಡಬಹುದು ಎಂಬುದರ ಬಗ್ಗೆಯೂ ವಿವರ ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ