ದರ ಕುಸಿತ: ಟೊಮೆಟೋ ರಸ್ತೆಗೆ ಚೆಲ್ಲಿ ಆಕ್ರೋಶ
Team Udayavani, Aug 1, 2018, 6:00 AM IST
ಕೊಪ್ಪಳ: ಜಿಲ್ಲೆಯಲ್ಲಿ ಟೊಮೆಟೋ ದರ ಏಕಾಏಕಿ ಕುಸಿತವಾಗಿದ್ದರಿಂದ ರೈತರು ಮಾರುಕಟ್ಟೆಗೆ ತಂದ ಟೊಮೆಟೋ ಬುಟ್ಟಿಗಳನ್ನು ರಸ್ತೆ ಮೇಲೆ ಚೆಲ್ಲಿ ಬರಿಗೈ ಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾರೆ. ನೀರಾವರಿ ಪ್ರದೇಶದ ರೈತರು ಮೆಕ್ಕೆಜೋಳ ಸೇರಿ ಇತರೆ ಬೆಳೆ ಬೆಳೆಯುವುದನ್ನು ಬಿಟ್ಟು ತರಕಾರಿ ಬೆಳೆದರೆ ಕೈ ತುಂಬ ಲಾಭ ದೊರೆಯಲಿದೆ ಎಂದು ಬದನೆಕಾಯಿ, ಹಿರೇಕಾಯಿ, ಟೊಮೆಟೋ, ಮೆಣಸಿನಕಾಯಿ ಸೇರಿ ಇತರೆ ತರಕಾರಿ ಬೆಳೆಯುತ್ತಿದ್ದಾರೆ. ಆದರೆ, ಟೊಮೆಟೋ ದರ ಭಾರಿ ಕುಸಿತ ಕಂಡಿದೆ. 3 ತಿಂಗಳಿಂದ ದರದಲ್ಲಿ ಸುಧಾರಣೆ ಕಾಣುತ್ತಿಲ್ಲ. ಕೊಪ್ಪಳ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಬುಟ್ಟಿಗೆ 10 ರೂ.ನಂತೆ ಖರೀದಿಸುತ್ತಿದ್ದಾರೆ. ಕಳೆದ ಬಾರಿ 300 ಹೆಕ್ಟೇರ್ ಪ್ರದೇಶದಲ್ಲಿ ರೈತರು ಟೊಮೆಟೋ ಬೆಳೆದಿದ್ದರು. ಆದರೆ ಈ ವರ್ಷ ಲಾಭ ಬರುತ್ತೆ ಎಂದು 500ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಹಾಗಾಗಿ ಏಕಾಏಕಿ ದರ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್