ಕಾಗೋಡು ರಾಜಕೀಯ ನಿವೃತ್ತಿ
Team Udayavani, Aug 1, 2018, 6:00 AM IST
ಬೆಂಗಳೂರು: ರಾಜ್ಯದ ಸಮಾಜವಾದಿ ಹೋರಾಟಗಾರರ ಪೈಕಿ ಮುಂಚೂಣಿಯಲ್ಲಿರುವ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ತಮ್ಮ ಸುದೀರ್ಘ 57 ವರ್ಷಗಳ ರಾಜಕೀಯ ಜೀವನಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. “ಚುನಾವಣ ರಾಜಕೀಯ ಸಾಕಾಗಿದೆ. ಹೀಗಾಗಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಷ್ಟು ವರ್ಷ ಹೋರಾಟ ಮಾಡಿದ್ದು ಸಾಕು. ನನಗೂ ವಯಸ್ಸಾಗಿದೆ. ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಹೋರಾಟ ನಡೆಸಿದ್ದೇನೆ. ಇನ್ಮುಂದೆ ಹೋರಾಟ ಸಾಧ್ಯವಿಲ್ಲ ಎಂದರು.
ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಮೊದಲಿಗೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಕಾಗೋಡು ತಿಮ್ಮಪ್ಪ ಅನಂತರ ಕಂದಾಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಹಿಂದೆ ವೀರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪ ಅವಧಿಯಲ್ಲಿ ಗೃಹ ಮಂಡಳಿ ಅಧ್ಯಕ್ಷರಾಗಿ, ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಸಮಾಜ ಕಲ್ಯಾಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ