ಬೆಳೆ ಸಮೀಕ್ಷೆ: ಪ್ರಥಮ ಬಾರಿಗೆ ಡ್ರೋಣ್‌ ಬಳಕೆ


Team Udayavani, Aug 2, 2018, 6:00 AM IST

survey-using-drone.jpg

ಹಾವೇರಿ: ಯಾವ ಕ್ಷೇತ್ರದಲ್ಲಿ ಯಾವ ಬೆಳೆ ಇದೆ? ಯಾವ ಪ್ರಮಾಣದಲ್ಲಿದೆ? ಅವುಗಳ ಆರೋಗ್ಯ ಹೇಗಿದೆ? ಬೆಳೆ ವಿಸ್ತೀರ್ಣವೆಷ್ಟು? ಹೀಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಕಲೆ ಹಾಕಲು ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನದ ಡ್ರೋಣ್‌ ಬಳಸಿ ಸಮೀಕ್ಷೆ ಮಾಡಲು ನಿರ್ಧರಿಸಿದೆ.

ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಕೃಷಿ ಕ್ಷೇತ್ರದಲ್ಲಿ ಮಾನವ ರಹಿತ ವೈಮಾನಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಡ್ರೋಣ್‌ ತಂತ್ರಜ್ಞಾನ ಬಳಸುತ್ತಿದೆ. ಜಿಲ್ಲೆಯಲ್ಲಿ ಬೆಳೆಗಳ ಬಗ್ಗೆ ಅಸ್ಪಷ್ಟ ಮಾಹಿತಿ, ಅಂಕಿ-ಅಂಶಗಳ ಕೊರತೆ, ಬೆಳೆ ವಿಮೆ ವಿತರಣೆಯಲ್ಲಿನ ಗೊಂದಲ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಯೋಗಿಕ ವೈಮಾನಿಕ ಮಾನವ ರಹಿತ ಸಮೀಕ್ಷೆಗೆ ಹಾವೇರಿ ತಾಲೂಕನ್ನು ಆಯ್ದುಕೊಂಡಿದೆ. ಈ ವೈಮಾನಿಕ ಸಮೀಕ್ಷೆಗೆ ಆ.2ರಂದು ಚಾಲನೆ ಸಿಗಲಿದೆ.

ಹಾವೇರಿ ತಾಲೂಕಿನ ಕಸಬಾ ಹೋಬಳಿಯಲ್ಲಿನ 200 ಚದರ ಕಿ.ಮೀ. ಪ್ರದೇಶದಲ್ಲಿನ ಬೆಳೆಗಳ ವಿಧ, ಅವುಗಳ ಪ್ರದೇಶ ವಿಸ್ತೀರ್ಣ, ಬೆಳೆ ಆರೋಗ್ಯ ಹಾಗೂ ಇಳುವರಿಯ ಪ್ರಾಥಮಿಕ ವರದಿ ಬಗ್ಗೆ 3 ತಿಂಗಳ ಕಾಲ ಮುಂಗಾರು ಋತುವಿನಲ್ಲಿ ಡ್ರೋಣ್‌ ಕಾರ್ಯಾಚರಣೆ ಮೂಲಕ ಸಮೀಕ್ಷೆ ನಡೆಯಲಿದೆ. ಇದು ಆರಂಭದಿಂದ ಬೆಳೆ ಕಟಾವಿನ ತನಕ 3 ಹಂತದಲ್ಲಿ ಸಮೀಕ್ಷೆ ನಡೆಸಲಿದೆ. ಸಮೀಕ್ಷೆಯಲ್ಲಿ ತ್ರಿಡಿ ಚಿತ್ರಗಳನ್ನು ಸೆಳೆಯುವ ಮೂಲಕ ಬೆಳೆಗಳ ಸ್ಥಿತಿಗತಿ, ನೆರೆ, ಬರ, ಕೀಟಬಾಧೆ ಹೀಗೆ ಇನ್ನಿತರ ಸಮಗ್ರ ಮಾಹಿತಿ ದಾಖಲಾಗಿ ಬೆಳೆ ನಷ್ಟ ಪರಿಹಾರ, ಬೆಳೆವಿಮೆ ಹೀಗೆ ಇನ್ನಿತರ ಸೌಲಭ್ಯ ನೀಡಲು ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಮೂರು ವಿಭಾಗ: ಈ ರೀತಿಯ ತಂತ್ರಜ್ಞಾನ ಬಳಸಿಕೊಂಡು ಸಮೀಕ್ಷೆ ಮಾಡಲು ಕೃಷಿ, ನಗರಾಭಿವೃದ್ಧಿ ಹಾಗೂ ಪೊಲೀಸ್‌ ನಾಗರಿಕ ಕಾರ್ಯಾಚರಣೆ ವಿಭಾಗ ಆಯ್ದುಕೊಂಡಿದೆ. ಕೃಷಿಗಾಗಿ ಹಾವೇರಿ ಜಿಲ್ಲೆಯಲ್ಲಿ ಆಯ್ದುಕೊಂಡರೆ, ನಗರಾಭಿವೃದ್ಧಿ ಸಮೀಕ್ಷೆಗಾಗಿ ಬಂಟ್ವಾಳ ಪಟ್ಟಣ, ಪೊಲೀಸ್‌ ನಾಗರಿಕ ಕಾರ್ಯಾಚರಣೆಗಾಗಿ ಬೆಂಗಳೂರು ನಗರವನ್ನು ಆಯ್ದುಕೊಂಡಿದೆ.

ನಗರಾಭಿವೃದ್ಧಿ ವಿಭಾಗದಲ್ಲಿ ಡ್ರೋಣ್‌ ತಂತ್ರಜ್ಞಾನವನ್ನು ಪಟ್ಟಣದ ವಿಸ್ತ್ರತ ನಕ್ಷೆ, ಆಸ್ತಿ ತೆರಿಗೆ ಸೇರಿದಂತೆ ಇನ್ನಿತರ ಮಾಹಿತಿ ಕಲೆ ಹಾಕಲು ಬಳಸಲಾಗುತ್ತಿದೆ. ಇನ್ನು ಪೊಲೀಸ್‌ ನಾಗರೀಕ ಕಾರ್ಯಾಚರಣೆಯಲ್ಲಿ ಜನದಟ್ಟಣೆ ಸ್ಥಳ, ಕಾರ್ಯಕ್ರಮ, ಸೂಕ್ಷ್ಮಪ್ರದೇಶಗಳಲ್ಲಿನ ಚಲನವಲನ ನಿಗಾ ವಹಿಸಲು ಬಳಸಲು ನಿರ್ಧರಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಾನವರಹಿತ ವೈಮಾನಿಕ ವ್ಯವಸ್ಥೆ ಅಥವಾ ಡ್ರೋಣ್‌ ತಂತ್ರಜ್ಞಾನ ಹೆಚ್ಚು ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಡಾ|ಕೆ. ಕಸ್ತೂರಿರಂಗನ್‌ ಅಧ್ಯಕ್ಷತೆಯಲ್ಲಿ ಸ್ಥಾಪಿಸಿರುವ ಕರ್ನಾಟಕ ಜ್ಞಾನ ಆಯೋಗದ ಶಿಫಾರಸಿನನ್ವಯ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು ಸಂಬಂಧಿ ತ ಇಲಾಖೆಗಳ ಸಹಯೋಗದೊಂದಿಗೆ ಈ ನವೀನ ಡ್ರೋಣ್‌ ಆಧಾರಿತ ಯೋಜನೆ ಕೈಗೊಂಡಿದೆ. ದೆಹಲಿಯ ಡ್ರೋಣ್‌ ಕಂಪನಿ ಆಮ್ನಿಪ್ರಸೆಂಟ್‌ ರೊಬೋಟ್‌ ಟೆಕ್ನಾಲಜಿಸ್‌ ಮೂಲಕ ಇದನ್ನು ಅನುಷ್ಠಾನಗೊಳಿಸಲಾಗುತ್ತಿದ್ದು,ಇದಕ್ಕಾಗಿ ಸರ್ಕಾರ 2.50 ಕೋಟಿ ರೂ. ಅನುದಾನ ನೀಡಿದೆ.

ಬೆಳೆಯ ಸಮಗ್ರ ಮಾಹಿತಿ ಸಮೀಕ್ಷೆ ಮೂಲಕ ದಾಖಲಾಗಿ, ಬೆಳೆ ಪರಿಹಾರ, ವಿಮೆ ಸಮರ್ಪಕ ವಿತರಣೆ ಹಾಗೂ ಇನ್ನಿತರ ಅಗತ್ಯ ಸೌಲಭ್ಯ ಪಡೆಯಲು ಸಮೀಕ್ಷೆ ಸಹಕಾರಿಯಾಗಲಿದೆ.
– ಸದಾಶಿವ,ಜಂಟಿ ನಿರ್ದೇಶಕರು,ಕೃಷಿ ಇಲಾಖೆ.

ಇಂದು ಚಾಲನೆ
ಮಾನವರಹಿತ ವೈಮಾನಿಕ ವ್ಯವಸ್ಥೆ ಪ್ರಾಯೋಗಿಕ ಯೋಜನೆ ಉದ್ಘಾಟನಾ ಸಮಾರಂಭ ಆ. 2ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆಯಲಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.