ಉತ್ತರದ ಉರಿಯಲ್ಲಿ ಯಾರ ಬೇಳೆ ಎಷ್ಟು ಬೇಯುತ್ತದೆ?


Team Udayavani, Aug 2, 2018, 6:00 AM IST

bjp-congress-jds-nk.jpg

ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕೂಗು ಈಗ ರಾಜ್ಯ ರಾಜಕೀಯ ಕಣದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರತ್ಯೇಕ ರಾಜ್ಯದ ಹೋರಾಟಕ್ಕೂ ವೇದಿಕೆ ಕಲ್ಪಿಸಿಕೊಟ್ಟಿದೆ. ಇದೆಲ್ಲ ದರ ಹಿಂದೆ ಪ್ರತಿಯೊಂದು ಪಕ್ಷಕ್ಕೂ ತನ್ನದೇ ಆದ ರಾಜಕೀಯ ಲೆಕ್ಕಾಚಾರ ಅಡಗಿದೆ.

ಬಿಜೆಪಿ
ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ಸಮುದಾಯ ಹೆಚ್ಚಾಗಿ ಇರುವುದರಿಂದ ಒಂದು ರೀತಿಯಲ್ಲಿ ಅದು ಬಿಜೆಪಿ ಭದ್ರಕೋಟೆ.ಆ ಕೋಟೆ ಕಾಯ್ದುಕೊಳ್ಳುವುದು ಬಿಜೆಪಿಗೆ ಅನಿವಾರ್ಯ.ಹೀಗಾಗಿ, ಆ ಭಾಗದ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಆರೋಪ ಕೇಳಿಬಂದಾಕ್ಷಣ ಅಲ್ಲಿನ ನಾಯಕರ ಜತೆ ಬಿಜೆಪಿ ನಿಲ್ಲುತ್ತದೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಪ್ರವಾಸವನ್ನೂ ಆ ಭಾಗದಲ್ಲೇ ಆಯೋಜಿಸಲಾಗಿದೆ.  ಪ್ರತ್ಯೇಕ ರಾಜ್ಯಕ್ಕೆ ಬಿಜೆಪಿ ಬೆಂಬಲ ಇಲ್ಲವಾದರೂ ಆ ಭಾಗದ ನ್ಯಾಯಯುತ ಬೇಡಿಕೆಗಳು ಹಾಗೂ ಅಭಿವೃದ್ಧಿಗೆ ಒತ್ತಾಯದ ವಿಚಾರದಲ್ಲಿ ಅಲ್ಲಿನ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದೆ.

ಕಾಂಗ್ರೆಸ್‌
ಲಿಂಗಾಯಿತ ಪ್ರತ್ಯೇ ಧರ್ಮ ವಿಚಾರದಲ್ಲಿ ಸ್ವಲ್ಪ ಮಟ್ಟಿನ ಹಿನ್ನೆಡೆಯುಂಟಾಗಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಆ ಭಾಗದಲ್ಲಿ  ಕಡಿಮೆ ಸ್ಥಾನ ಗಳಿಸಿತು. ಹೀಗಾಗಿ, ಕಾಂಗ್ರೆಸ್‌ಗೆ  ಸ್ವಂತ ಶಕ್ತಿಯಲ್ಲಿ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.  ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಾಗಲೆಲ್ಲಾ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಹೀಗಾಗಿ, ಕಾಂಗ್ರೆಸ್‌ಗೆ ಆ ಭಾಗದ ಮಹತ್ವ ಗೊತ್ತಿದೆ. ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದಿರುವುದರಿಂದ ಅತಿ ಹೆಚ್ಚು ಆತಂಕಗೊಂಡಿರುವುದು ಕಾಂಗ್ರೆಸ್‌. ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷವಾದ್ದರಿಂದ ಮುಖ್ಯಮಂತ್ರಿಯವರ ತೀರ್ಮಾನ, ಹೇಳಿಕೆ, ಇಡೀ ಸರ್ಕಾರದ್ದು ಎಂಬ ಭಾವನೆ ವ್ಯಕ್ತವಾದರೆ ಕಷ್ಟ. ಪ್ರತಿಪಕ್ಷ ಬಿಜೆಪಿ ಇದೇ ಅಸ್ತ್ರವಾಗಿಸಿಕೊಳ್ಳಬಹುದು ಎಂಬ ಭಯ ಕಾಂಗ್ರೆಸ್‌ಗೆ ಇದೆ. ಹೀಗಾಗಿಯೇ ಡ್ಯಾಮೇಜ್‌ ಕಂಟ್ರೋಲ್‌ಗೆ ಸಾಕಷ್ಟು ಹರಸಾಹಸ ಮಾಡುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ಗಾಂಧಿ ನೀಡಿರುವ ಟಾರ್ಗೆಟ್‌ ತಲುಪಲು ಆ ಭಾಗದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಪಡಯಲೇಬೇಕಾದ ಅನಿವಾರ್ಯತೆಯಲ್ಲಿದೆ.

ಜೆಡಿಎಸ್‌
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ಗೆ ಹೇಳಿಕೊಳ್ಳುವಂತ ನೆಲೆ ಇಲ್ಲ. ಆರು ವಿಧಾನಸಭೆ ಕ್ಷೇತ್ರಗಳನ್ನು ಇತ್ತೀಚಿನ ಚುನಾವಣೆಯಲ್ಲಿ ಗೆದ್ದಿದೆ. ಲೋಕಸಭೆ ಕ್ಷೇತ್ರಗಳಲ್ಲಿ ಯಾವೊಬ್ಬ ಜೆಡಿಎಸ್‌ ಸಂಸದ ಇಲ್ಲ. ಹೀಗಾಗಿ,ಈ ವಿವಾದದಿಂದ ಜೆಡಿಎಸ್‌ಗೆ ಆಗುವ ನಷ್ಟ ತೀರಾ ಕಡಿಮೆ. ಮುಂದೆ ಭವಿಷ್ಯದಲ್ಲಿ ಹೊಡೆತ ಬೀಳಬಹುದಾದರೂ ತಕ್ಷಣಕ್ಕೆ ಅಂತಹ ನಷ್ಟವಾಗದು. ಆದರೂ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಖುದ್ದು ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡುವ ಜತೆಗೆ, ಆ ಭಾಗದ ಹೋರಾಟಗಾರರ ಜತೆ ಸಭೆ ನಡೆಸಿ ಬೆಳಗಾವಿ ಎರಡನೇ ರಾಜಧಾನಿ ಮಾಡುವ ಭರವಸೆ ನೀಡಿದ್ದಾರೆ. ಆ ಭಾಗದ ಅಭಿವೃದ್ಧಿಗೆ ಸ್ಪಂದಿಸುವ ನಿರಂತರ ಪ್ರವಾಸ ಮಾಡಿ ಸಮಸ್ಯೆ ಅರಿತು ಕೆಲಸ ಮಾಡುವ ವಾಗಾœನ ಸಹ ನೀಡಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.