ಸೆ.22ರಂದು ಚಿಟ್ಟಾಣಿ ಸ್ಮೃತಿಭವನ ಲೋಕಾರ್ಪಣೆ; ನೆರವಿಗೆ ಮನವಿ


Team Udayavani, Aug 2, 2018, 12:19 PM IST

11.jpg

ಹೊನ್ನಾವರ: ಪದ್ಮಶ್ರೀ ಚಿಟ್ಟಾಣಿ ಯಕ್ಷಕಲಾ ಕೇಂದ್ರದ ಮೊದಲ ಹಂತ “ಚಿಟ್ಟಾಣಿ ಸ್ಮೃತಿಭವನ’ವನ್ನು ರಾಮಚಂದ್ರ ಹೆಗಡೆಯವರು ನಿಧನರಾಗಿ ವರ್ಷ ತುಂಬುವ ಸೆಪ್ಟೆಂಬರ್‌ 22ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಮಚಂದ್ರ ಹೆಗಡೆಯವರ ಧರ್ಮಪತ್ನಿ ಸುಶೀಲಾ ರಾಮಚಂದ್ರ ಹೆಗಡೆ ಮತ್ತು ಮಕ್ಕಳು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕೈದು ವರ್ಷಗಳ ಹಿಂದೆ ರಾಘವೇಶ್ವರ ಶ್ರೀಗಳು ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು. ಕಾರಣಾಂತರಗಳಿಂದ ಅಲ್ಲಿ ನಿರ್ಮಾಣ ಕಾರ್ಯ ಆರಂಭವಾಗಲೇ ಇಲ್ಲ. ನಿಧನದ 6 ತಿಂಗಳ ಮೊದಲು ಸ್ವತಃ ಚಿಟ್ಟಾಣಿಯವರು ತನ್ನ ಜೀವಿತಾವಧಿಯಲ್ಲಿ ಗಳಿಸಿದ ಪದಕ, ಪ್ರಶಸ್ತಿ, ನೆನಪಿನ ಕಾಣಿಕೆಗಳನ್ನು ಸಿಡಿ ಮತ್ತು ವೇಷಭೂಷಣಗಳನ್ನು ಸಂಗ್ರಹಿಸಿಡಲು ಮನೆಯ ಅಂಗಳದಲ್ಲಿ ಕಟ್ಟಡ ನಿರ್ಮಿಸಲು ಇಚ್ಚೆಪಟ್ಟು ರಾಘವೇಶ್ವರ ಶ್ರೀಗಳ ಮಂತ್ರಾಕ್ಷತೆ ಪಡೆದು ಆರಂಭಿಸಿದ್ದರು. ಕಂಬಗಳು ಮೇಲೇಳುತ್ತಿರುವಾಗಲೇ ಅವರು ವಿಧಿ ವಶರಾದರು. ಅವರ ಇಚ್ಚೆಯಂತೆ ಕಟ್ಟಡ ಕಾರ್ಯವನ್ನು ನನ್ನ ಅಧ್ಯಕ್ಷತೆಯಲ್ಲಿ ಮಕ್ಕಳು ಟ್ರಸ್ಟ್‌ ರಚಿಸಿಕೊಂಡು ಮುಂದುವರಿಸಿದ್ದಾರೆ. ಆರ್‌.ವಿ. ದೇಶಪಾಂಡೆಯವರು, ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರು, ಕೆನರಾ ಬ್ಯಾಂಕ್‌, ಮಾಜಿ ಶಾಸಕ ಮಂಕಾಳ ವೈದ್ಯ ಮೊದಲಾದವರು ಸುಮಾರು 20ಲಕ್ಷ ರೂಪಾಯಿ ನೀಡಿ ಈ ಕಾರ್ಯಕ್ಕೆ ನೆರವಾಗಿದ್ದಾರೆ.

ಹೆಚ್ಚಿನ ನೆರವು ಕೊಡುವುದಾಗಿ ಹೇಳಿದ್ದಾರೆ. 1ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯೆ ಮೊದಲ ಹಂತ ವಸ್ತು ಸಂಗ್ರಹಾಲಯವನ್ನು ಅವರ ಮೊದಲ ಪುಣ್ಯತಿಥಿ ಸೆಪ್ಟೆಂಬರ್‌ 22, 23 ಬರಲಿದ್ದು ಈ ಮುಹೂರ್ತದಲ್ಲಿ ಅವರ ಅಮೂಲ್ಯ ವಸ್ತುಗಳನ್ನು ನೂತನ ಕಟ್ಟಡದಲ್ಲಿಟ್ಟು ಸಾಂಕೇತಿಕ ಉದ್ಘಾಟಿಸಲಾಗುವುದು. ಮಹಡಿಯ ಮೇಲೆ ಯಕ್ಷಗಾನ ಅಧ್ಯಯನಕ್ಕೆ, ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡುವ ಆಸೆ ಇದೆ. ಆದ್ದರಿಂದ ಚಿಟ್ಟಾಣಿಯವರ ಅಭಿಮಾನಿಗಳು ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಚಿಟ್ಟಾಣಿಯವರ ಮಕ್ಕಳಾದ ನರಸಿಂಹ, ನಾರಾಯಣ, ಮಗಳು ಲಲಿತಾ, ಅಳಿಯ ಗಣಪತಿ ಹೆಗಡೆ, ಅಭಿಮಾನಿ ಡಾ| ಜಿ.ಎ.ಹೆಗಡೆ ಸೋಂದಾ ಇದ್ದರು.

ನೆರವಿಗೆ ಮನವಿ
ಸಹಾಯ ಮಾಡಬಯಸುವವರುಶ್ರೀಮತಿ ಸುಶೀಲಾ ರಾಮಚಂದ್ರ ಹೆಗಡೆ ಚಿಟ್ಟಾಣಿ, ಅಧ್ಯಕ್ಷರು, ಪದ್ಮಶ್ರೀ ಚಿಟ್ಟಾಣಿ ಯಕ್ಷಕಲಾ ಕೇಂದ್ರ ಟ್ರಸ್ಟ್‌ (ರಿ.), ಗುಡೇಕೇರಿ, ಹೇರಂಗಡಿ, ತಾ| ಹೊನ್ನಾವರ ಈ ವಿಳಾಸಕ್ಕೆ ಅಥವಾ ಹೊನ್ನಾವರ ಕೆನರಾ ಬ್ಯಾಂಕ್‌ ಶಾಖೆ ಉಳಿತಾಯ ಖಾತೆ ನಂಬರ್‌ 1067101039835  MDTA ನಂಬರ್‌ :AKS@0001067 ಜಮಾ ಮಾಡಿ ತಿಳಿಸಬಹುದು. 9482932306 ಸಂಪರ್ಕಿಸಬಹುದು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.