ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್


Team Udayavani, Aug 3, 2018, 6:15 AM IST

dk-shivakumar-22525.jpg

ಬೆಂಗಳೂರು: ಆದಾಯ ತೆರಿಗೆ ವಿಚಾರಣೆ ಸಂದರ್ಭದಲ್ಲಿ ಸುಳ್ಳು ಮಾಹಿತಿ ಹಾಗೂ ಸಾಕ್ಷ್ಯಾನಾಶ ಪಡಿಸಿದ ಆರೋಪ ಹೊತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಗುರುವಾರ ಸಚಿವ ಡಿ.ಕೆ.ಶಿವಕುಮಾರ್‌, ಉದ್ಯಮಿ ಸುನಿಲ್‌ ಕುಮಾರ್‌ ಶರ್ಮಾ, ಆಂಜನೇಯ ಮತ್ತು ರಾಜೇಂದ್ರ ಅವರುಗಳಿಗೆ ತಲಾ 50 ಸಾವಿರ ಬಾಂಡ್‌ ಶ್ಯೂರಿಟಿ ನೀಡುವಂತೆ ಸೂಚಿಸಿ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಸೆ.20ಕ್ಕೆ ವಿಚಾರಣೆ ಮುಂದೂಡಿದೆ.

ಆದಾಯ ತೆರಿಗೆ ಇಲಾಖೆ ವಿಚಾರಣೆ ವೇಳೆ ಸುಳ್ಳು ಮಾಹಿತಿ ಹಾಗೂ ಸಾûಾ$Â ನಾಶ ಆರೋಪದ ಮೇಲೆ ಐಟಿ ಅಧಿಕಾರಿಗಳು ಆರ್ಥಿಕ ಅಪರಾಧಗಳ‌ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್‌ ಆ.2ರಂದು ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಹೋದರ, ಸಂಸದ ಡಿ.ಕೆ.ಸುರೇಶ್‌ ಜತೆ ಆಗಮಿಸಿದ ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಇತರೆ ಆರೋಪಿಗಳು ನ್ಯಾಯಾಧೀಶರ ಎದುರು ಹಾಜರಾದರು.

ಈ ವೇಳೆ ಆರೋಪಿಗಳ ಪರ ವಕೀಲ ಬಿ.ವಿ.ಆಚಾರ್ಯ ವಾದ ಮಂಡಿಸಿ, ಶಿವಕುಮಾರ್‌ ವಿರುದ್ಧ ಐಟಿ ಅಧಿಕಾರಿಗಳು ದಾಖಲಿಸಿರುವ ದೂರಿಗೆ ಮೊದಲು ಸಕ್ಷಮ ಪ್ರಾಧಿಕಾರ ಹಾಗೂ ಆದಾಯ ತೆರಿಗೆ ಇಲಾಖೆಯ ಆಯುಕ್ತರಿಂದ ಪೂರ್ವಾನುಮತಿ ಪಡೆಯಬೇಕಿತ್ತು.

ಆದರೆ, ಐಟಿ ಅಧಿಕಾರಿಗಳು ಇಲಾಖೆಯ ನಿರ್ದೇಶಕರಿಂದ ಅನುಮತಿ ಪಡೆದು ಖಾಸಗಿ ದೂರು ದಾಖಲಿಸಿದ್ದಾರೆ. ಜತೆಗೆ ಪ್ರಕರಣದ ಮತ್ತೂಬ್ಬ ಆರೋಪಿ ಸಚಿನ್‌ ನಾರಾಯಣ್‌ ಪ್ರಕರಣ ರದ್ದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ಹೀಗಾಗಿ ಶಿವಕುಮಾರ್‌ ಹಾಗೂ ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

ವಾದ ಆಲಿಸಿದ ನ್ಯಾ ಎಂ.ಎಸ್‌.ಆಳ್ವಾ, ಶಿವಕುಮಾರ್‌ ಸೇರಿ ಐವರು ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್‌ ನೀಡುವಂತೆ ಷರತ್ತು ವಿಧಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದರು. ಇದೇ ವೇಳೆ ಮುಂದಿನ ವಿಚಾರಣೆ ವೇಳೆಗೆ ಹೈಕೋರ್ಟ್‌ನ ಅರ್ಜಿಯ ವಸ್ತುಸ್ಥಿತಿ ತಿಳಿಸುವಂತೆ ಆದೇಶಿಸಿ ಸೆ.20ಕ್ಕೆ ವಿಚಾರಣೆ ಮುಂದೂಡಿದರು.

2017ರಲ್ಲಿ ಶಿವಕುಮಾರ್‌ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ತಮ್ಮ ಆದಾಯ ಕುರಿತು ಮಾಹಿತಿ ನೀಡಲು ಐಟಿ ಅಧಿಕಾರಿಗಳು ಶಿವಕುಮಾರ್‌ಗೆ ಸಮನ್ಸ್‌ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾದ ಶಿವಕುಮಾರ್‌ ಹಾಗೂ ಇತರರು ಸುಳ್ಳು ಮಾಹಿತಿ ನೀಡಿರುವುದು ಕಂಡು ಬಂದಿದೆ. ಸಚಿವರು ವಿಚಾರಣೆ ಸಂದರ್ಭದಲ್ಲಿ ನೀಡಿರುವ ಹೇಳಿಕೆಗೂ, ಅವರ ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾದ ದಾಖಲೆಗಳು ತಾಳೆ ಆಗುತ್ತಿಲ್ಲ. ಈ ಮೂಲಕ ಸುಳ್ಳು ಮಾಹಿತಿ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದು, ಕೆಲ ಸಾಕ್ಷ್ಯಾಗಳನ್ನು ನಾಶ ಪಡಿಸಿದ್ದಾರೆ ಎಂದು ಆರೋಪಿಸಿರುವ ಐಟಿ ಅಧಿಕಾರಿಗಳು ಐಟಿ ಕಾಯ್ದೆ 277, 278, 193, 199, ಹಾಗೂ 120(ಬಿ) ಸೆಕ್ಷನ್‌ಗಳ ಅಡಿ ದೂರು ದಾಖಲಿಸಿದ್ದರು.

ನಾಲ್ಕು ಪ್ರಕರಣಗಳಲ್ಲೂ ರಿಲೀಫ್
ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಚಿವ ಶಿವಕುಮಾರ್‌ ಹಾಗೂ ಇತರರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಎರಡು ಆರ್ಥಿಕ ವರ್ಷಗಳಲ್ಲಿ ತೆರಿಗೆ ವಂಚನೆ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು, 3ನೇ ಪ್ರಕರಣ ತಮ್ಮ ಸಂಪೂರ್ಣ ವ್ಯವಹಾರದಲ್ಲಿ ತೆರಿಗೆ ಕುರಿತು ತಪ್ಪು ಮಾಹಿತಿ ನೀಡಿದ ಆರೋಪ. ಹಾಗೂ ಹವಾಲಾ ವ್ಯವಹಾರ ಮತ್ತು ಸುಳ್ಳು ಮಾಹಿತಿ ಹಾಗೂ ಸಾûಾ$Â ನಾಶ ಆರೋಪದಡಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದೀಗ ಎಲ್ಲ ಪ್ರಕರಣಗಳಲ್ಲಿಯೂ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.