ಆಡಳಿತ ವ್ಯವಸ್ಥೆಯಲ್ಲಿ ಡ್ರೋಣ್‌ ಬಳಕೆ​​​​​​​


Team Udayavani, Aug 3, 2018, 6:30 AM IST

2bnp-6.jpg

ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾನವರಹಿತ ವೈಮಾನಿಕ ಸಮೀಕ್ಷೆ “ಡ್ರೋಣ್‌’ ಬಳಕೆಗೆ ಚಾಲನೆ ದೊರಕಿದೆ. ಕೃಷಿ, ನಗರ ಯೋಜನೆ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಡ್ರೋಣ್‌ಗಳನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಹಾವೇರಿಯ ಕಸಬಾ ಹೋಬಳಿ, ಬಂಟ್ವಾಳ ಪಟ್ಟಣ ಮತ್ತು ಬೆಂಗಳೂರು ನಗರ ಸಂಚಾರ ನಿರ್ವಹಣೆಯಲ್ಲಿ ಮೊದಲ ಬಾರಿಗೆ ಡ್ರೋಣ್‌ ಬಳಕೆ ಪರಿಚಯಿಸಲಾಗುತ್ತಿದೆ. 

ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌ ಮತ್ತು ಶಿವಶಂಕರ ರೆಡ್ಡಿ ಗುರುವಾರ ಈ ಪ್ರಯೋಗಕ್ಕೆ ಚಾಲನೆ ನೀಡಿದರು.

ಹಾವೇರಿಯ ಕಸಬಾ ಹೋಬಳಿಯಲ್ಲಿ 200 ಚದರ ಕಿ.ಮೀ. (1 ಚದರ ಕಿ.ಮೀ. 10 ಸಾವಿರ ಎಕರೆ ಭೂಮಿಗೆ ಸಮ) ಕೃಷಿ ಭೂಮಿಯಲ್ಲಿ ಆರು ಡ್ರೋಣ್‌ಗಳ ಮೂಲಕ ಬೆಳೆಯ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಡ್ರೋಣ್‌ಗಳು ನಿತ್ಯ ಬೆಳಿಗ್ಗೆ 9.30ರಿಂದ 11.30 ಹಾಗೂ ಮಧ್ಯಾಹ್ನ 1.30ರಿಂದ 2.30ರವರೆಗೆ ಭೂಮಿ ಸಮೀಕ್ಷೆ ನಡೆಸಿ, ಚಿತ್ರಗಳನ್ನು ಸೆರೆಹಿಡಿಯಲಿವೆ. ಅವುಗಳನ್ನು ವಿಶ್ಲೇಷಿಸಿ, ಕೃಷಿ ಬೆಳವಣಿಗೆಗೆ ರೈತರಿಗೆ ಮಾರ್ಗದರ್ಶನ ಮಾಡಲಾಗುವುದು.

ಉತ್ಪಾದನೆ ಲೆಕ್ಕವೂ ಸಿಗಲಿದೆ; ಅಧಿಕಾರಿ
ಉದ್ದೇಶಿತ ವಿಸ್ತೀರ್ಣದಲ್ಲಿ ಯಾವ್ಯಾವ ಪ್ರಕಾರದ ಬೆಳೆ ಬೆಳೆಯಲಾಗಿದೆ, ಎಷ್ಟು ಪ್ರಮಾಣದಲ್ಲಿ ಬೆಳೆಯಲಾಗಿದೆ, ಅವುಗಳ ಸ್ಥಿತಿಗತಿ, ರೋಗಬಾಧೆ ಪತ್ತೆ ಮಾಡುವುದು ಸೇರಿದಂತೆ ಹಲವು ಮಾಹಿತಿಗಳನ್ನು ಈ ಡ್ರೋಣ್‌ಗಳು ಕಲೆಹಾಕಲಿವೆ. ಇದರಿಂದ ಬೆಳೆಗಳ ಸ್ಪಷ್ಟಚಿತ್ರಣ ದೊರೆಯುವುದರ ಜತೆಗೆ ಮುಂಚಿತವಾಗಿ ಕ್ರಮ ಕೈಗೊಳ್ಳಲು ಅನುಕೂಲ ಆಗುತ್ತದೆ. ಅಷ್ಟೇ ಅಲ್ಲ, ಪರೋಕ್ಷವಾಗಿ ಉತ್ಪಾದನೆ ಪ್ರಮಾಣ ಕೂಡ ತಿಳಿಯಬಹುದು. ಎರಡು ವಾರಗಳಲ್ಲಿ ಪ್ರಾಯೋಗಿಕ ಹಂತ ಪೂರ್ಣಗೊಳ್ಳಲಿದೆ ಎಂದು ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವಿಶೇಷ ನಿರ್ದೇಶಕ (ತಾಂತ್ರಿಕ) ಡಾ.ಎಚ್‌. ಹೊನ್ನೇಗೌಡ ತಿಳಿಸಿದರು.

ಅದೇ ರೀತಿ, ಬಂಟ್ವಾಳ ನಗರ ಯೋಜನೆಗೆ ಡ್ರೋಣ್‌ ಬಳಸಲಾಗುತ್ತಿದೆ. ಇದರಿಂದ ನಗರದ ಮಾಸ್ಟರ್‌ ಪ್ಲಾನ್‌, ನಿರ್ಮಾಣ ಪ್ರದೇಶ, ಜಲ ಮೂಲಗಳು, ಕೆರೆ-ಕುಂಟೆಗಳು, ರಸ್ತೆಗಳು, ಖರಾಬು ಜಮೀನು, ಕೃಷಿ ಜಮೀನು, ಜೌಗುಪ್ರದೇಶಗಳನ್ನು ಗುರುತಿಸಲಾಗುವುದು. ಅದನ್ನು ಆಧರಿಸಿ ನಗರ ನಿರ್ಮಾಣಕ್ಕೆ ಯೋಜನೆಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ರಾಜ್ಯಾದ್ಯಂತ ಸಮೀಕ್ಷೆ; ಸಚಿವ
ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಶಿವಶಂಕರ ರೆಡ್ಡಿ, ಇಡೀ ರಾಜ್ಯದಲ್ಲಿ ಭೂಹಿಡುವಳಿ ಎಷ್ಟಿದೆ? ಯಾವ್ಯಾವ ಸಂದರ್ಭದಲ್ಲಿ ಯಾವ ಬೆಳೆ ಬೆಳೆಯಲಾಗುತ್ತಿದೆ? ಮತ್ತಿತರ ಮಾಹಿತಿಗಳು ಅಂದಾಜಿನ ಮೇಲೆ ಪ್ರಮಾಣೀಕರಿಸುವ ವ್ಯವಸ್ಥೆ ಈಗಿದೆ. ಡ್ರೋಣ್‌ ಸಹಾಯದಿಂದ ನಿಖರ ಮಾಹಿತಿ ಲಭ್ಯವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಬೆಳೆ ಮತ್ತು ಭೂಮಿಯನ್ನು ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ. ಜಾರ್ಜ್‌ ಮಾತನಾಡಿ, ಸಕಾದಲ್ಲಿ ಕಾರ್ಮಿಕರು ಸಿಗುವುದು ಕಷ್ಟ. ಇದರಿಂದ ಬೆಳೆಗಳು ರೋಗಕ್ಕೆ ತುತ್ತಾಗಿ ರೈತರಿಗೆ ನಷ್ಟ ಉಂಟಾಗುವ ಸ್ಥಿತಿ ಹಲವು ಬಾರಿ ಬಂದಿದೆ. ಈ ನಿಟ್ಟಿನಲ್ಲಿ ಡ್ರೋಣ್‌ ಹೆಚ್ಚು ಸಹಕಾರಿ ಆಗಿದೆ ಎಂದು ತಿಳಿಸಿದರು.

ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಎಸ್‌. ನಟರಾಜ ಮತ್ತಿತರರು ಉಪಸ್ಥಿತರಿದ್ದರು.

ಸ್ಯಾಟಲೈಟ್‌ಗಿಂತ ನಿಖರ!
ಸ್ಯಾಟಲೈಟ್‌ಗಳು ಅಬ್ಬಬ್ಟಾ ಎಂದರೆ 30 ಸೆಂ.ಮೀ. ಅಂತರದಿಂದ ಚಿತ್ರಗಳನ್ನು ಸೆರೆಹಿಡಿದು ಕಳುಹಿಸುತ್ತವೆ. ಮೋಡಕವಿದ ವಾತಾವರಣದಲ್ಲಿ ಚಿತ್ರಗಳು ಅಸ್ಪಷ್ಟವಾಗಿರುತ್ತವೆ. ಆದರೆ, ಡ್ರೋಣ್‌ಗಳು ಕೇವಲ 2-4 ಸೆಂ.ಮೀ. ಅಂತರದಿಂದ ಚಿತ್ರಗಳನ್ನು ಸೆರೆಹಿಡಿಯುತ್ತವೆ. ಅಷ್ಟೇ ಅಲ್ಲ, “3ಡಿ’ಯಲ್ಲಿ ಅತ್ಯಧಿಕ ರೆಸೊಲ್ಯುಷನ್‌ನಲ್ಲಿ ನೋಡಬಹುದು. ಹಾಗಾಗಿ, ಡ್ರೋಣ್‌ ಹೆಚ್ಚು ನಿಖರ ಮಾಹಿತಿ ನೀಡುತ್ತದೆ ಎಂಬುದು ತಜ್ಞರ ವಾದ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.