ಮಿನಿ ಸಮರದಲ್ಲೂ ಮೈತ್ರಿ ಮುಂದುವರಿಯುತ್ತಾ?


Team Udayavani, Aug 3, 2018, 6:45 AM IST

bjp-congress-jds-nk.jpg

ಬೆಂಗಳೂರು:”ಮಿನಿ ಸಮರ’ ಎಂದೇ ಬಿಂಬಿತವಾಗಿರುವ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳಾಪಟ್ಟಿ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.

ಲೋಕಸಭೆ ಚುನಾವಣೆಗೆ ತಳಮಟ್ಟದಲ್ಲಿ ಶಕ್ತಿ ತುಂಬುವ ಈ ಚುನಾವಣೆ ಬಗ್ಗೆ ಪ್ರಮುಖವಾಗಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ.ಜತೆಗೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಕಾಂಗ್ರೆಸ್‌-ಜೆಡಿಎಸ್‌ ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ಪ್ರಾರಂಭಗೊಂಡಿವೆ.

ಆದರೆ, ಎರಡೂ ಪಕ್ಷಗಳ ಸ್ಥಳೀಯ ನಾಯಕರು ಮೈತ್ರಿಗೆ ವಿರೋಧವಿದ್ದು “ಫ್ರೆಂಡ್ಲಿ’ ಫೈಟ್‌ ಸೂಕ್ತ ಎಂಬ ಅಭಿಪ್ರಾಯ ಹೊಂದಿದ್ದಾರೆ  ಎನ್ನಲಾಗಿದೆ.

ಚುನಾವಣೆ ವೇಳಾಪಟ್ಟಿ ಬಿಡುಗಡೆಯಾಗುತ್ತಲೇ ಕೆಲವು ಜಿಲ್ಲಾ ಕಾಂಗ್ರೆಸ್‌ ನಾಯಕರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜತೆ ದೂರವಾಣಿಯಲ್ಲಿ ಚರ್ಚಿಸಿದ್ದು, ಮೈತ್ರಿ ಬೇಡ ಎಂದು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.

ಆದರೆ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ತೀರ್ಮಾನ ಆಗಿರುವುದರಿಂದ ಸಮ್ಮಿಶ್ರ ಸರ್ಕಾರ ಇರುವುದರಿಂದ ಮೈತ್ರಿ ಬೇಡ ಎಂದರೆ ಕಷ್ಟವಾಗಬಹುದು. ಆದರೂ ಹೈಕಮಾಂಡ್‌ ಬಳಿ ಚರ್ಚಿಸಲಾಗುವುದು ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಶುಕ್ರವಾರದಿಂದ ಕಾಂಗ್ರೆಸ್‌ ಪಕ್ಷವು ಲೋಕಸಭೆ ಕ್ಷೇತ್ರಾವಾರು ಚುನಾವಣಾ ಸಿದ್ಧತೆ ಪೂರ್ವಭಾವಿ ಸಭೆ ನಿಗದಿಯಾಗಿದ್ದು ಅಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವನಾ ತಯಾರಿ ಬಗ್ಗೆಯೂ ಚರ್ಚೆ ನಡೆಯಲಿದೆ.

ಸಂಸತ್‌ ಅಧಿವೇಶನ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಶನಿವಾರ ನಗರಕ್ಕೆ ಆಗಮಿಸಲಿದ್ದು ,  ನಂತರ ಜಿಲ್ಲಾವಾರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಜತೆ ಮೈತ್ರಿಯಾಗದಿದ್ದರೂ ಜೆಡಿಎಸ್‌- ಬಿಎಸ್‌ಪಿ ಮೈತ್ರಿಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ಪ್ರತಿಪಕ್ಷ ಬಿಜೆಪಿ ಸಹ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ತಲೆಕಡಿಸಿಕೊಳ್ಳದೆ ವಿಧಾನಸಭೆ ಕ್ಷೇತ್ರಾವಾರು ಸಭೆ ನಡೆಸಿ ತತಕ್ಷಣದಿಂದ ಸಿದ್ಧತೆ ಆರಂಭಿಸಲು ನಿರ್ಧರಿಸಿದೆ. ಆಗಸ್ಟ್‌ 9 ರಿಂದ ಮೂರು ತಂಡಗಳಲ್ಲಿ ಬಿಜೆಪಿ ರಾಜ್ಯ ಪ್ರವಾಸಕ್ಕೆ ತೀರ್ಮಾನಿಸಲಾಗಿದ್ದು ಅದು  ಸ್ಥಳೀಯ ಸಂಸ್ಥೆಗಳ ಪ್ರಚಾರ ಸಭೆಗಳಾಗುವ ಸಾಧ್ಯತೆಯಿದೆ.

ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲಿದೆ.  ಈಗಿನಿಂದಲೇ ಚುನಾವಣೆ ತಯಾರಿ ಆರಂಭಿಸಲಿದ್ದೇವೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ನಾನು ತಲೆಕಡಿಸಿಕೊಳ್ಳುವುದಿಲ್ಲ. ಅದರ ಬಗ್ಗೆ ನಮಗೆ ಆಸಕ್ತಿಯೂ ಇಲ್ಲ. ನಮ್ಮ ಹೋರಾಟ ನಮ್ಮದು ಎಂದುತಿಳಿಸಿದರು.

ಎಫೆಕ್ಟ್ ಕೊಡುತ್ತಾ?
ಉತ್ತರ ಕರ್ನಾಟಕ ಕುರಿತ ಹೇಳಿಕೆ ವಿವಾದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಫೆಕ್ಟ್ ನೀಡಲಿದೆಯಾ? ಎಂಬ ಬಗ್ಗೆಯೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಆತಂಕವಿದೆ.ಆದರೆ, ಕುಮಾರಸ್ವಾಮಿಯವರು ಹೋರಾಟಗಾರರ ಜತೆ ಸಭೆ ನಡೆಸಿ ಬೆಳಗಾವಿ ಎರಡನೇ ರಾಜಧಾನಿ ಮಾಡುವುದು, ಸುವರ್ಣಸೌಧಕ್ಕೆ ಕೆಲವು ಇಲಾಖೆಗಳ ಸ್ಥಳಾಂತರ ಸೇರಿದಂತೆ ಭರವಸೆ ನೀಡಿರುವುದು. ಬಂದ್‌ ಕರೆ ವಿಫ‌ಲವಾಗಿರುವುದರಿಂದ ಅಂತಹ ಸಮಸ್ಯೆಯಾಗದು ಎಂಬುದು ಎರಡೂ ಪಕ್ಷಗಳ ನಾಯಕರು ಹೇಳುತ್ತಾರೆ.

ಸಂಪುಟ ವಿಸ್ತರಣೆ ಮುಂದಕ್ಕೆ ?
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಷಾಢ ಮಾಸದ ನಂತರ ನಿಗದಿಯಾಗಿದ್ದ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕ ಬಹುತೇಕ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕಕ್ಕೆ ಕೈ ಹಾಕಿದರೆ ಅತೃಪ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಟಸ್ಥವಾಗುವ ಸಾಧ್ಯತೆ ಇರುವುದರಿಂದ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಅದಕ್ಕೆ ಕೈ ಹಾಕಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.