ಮಿನಿ ಸಮರದಲ್ಲೂ ಮೈತ್ರಿ ಮುಂದುವರಿಯುತ್ತಾ?


Team Udayavani, Aug 3, 2018, 6:45 AM IST

bjp-congress-jds-nk.jpg

ಬೆಂಗಳೂರು:”ಮಿನಿ ಸಮರ’ ಎಂದೇ ಬಿಂಬಿತವಾಗಿರುವ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳಾಪಟ್ಟಿ ಹೊರ ಬೀಳುತ್ತಿದ್ದಂತೆಯೇ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ.

ಲೋಕಸಭೆ ಚುನಾವಣೆಗೆ ತಳಮಟ್ಟದಲ್ಲಿ ಶಕ್ತಿ ತುಂಬುವ ಈ ಚುನಾವಣೆ ಬಗ್ಗೆ ಪ್ರಮುಖವಾಗಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ.ಜತೆಗೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಕಾಂಗ್ರೆಸ್‌-ಜೆಡಿಎಸ್‌ ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ಪ್ರಾರಂಭಗೊಂಡಿವೆ.

ಆದರೆ, ಎರಡೂ ಪಕ್ಷಗಳ ಸ್ಥಳೀಯ ನಾಯಕರು ಮೈತ್ರಿಗೆ ವಿರೋಧವಿದ್ದು “ಫ್ರೆಂಡ್ಲಿ’ ಫೈಟ್‌ ಸೂಕ್ತ ಎಂಬ ಅಭಿಪ್ರಾಯ ಹೊಂದಿದ್ದಾರೆ  ಎನ್ನಲಾಗಿದೆ.

ಚುನಾವಣೆ ವೇಳಾಪಟ್ಟಿ ಬಿಡುಗಡೆಯಾಗುತ್ತಲೇ ಕೆಲವು ಜಿಲ್ಲಾ ಕಾಂಗ್ರೆಸ್‌ ನಾಯಕರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜತೆ ದೂರವಾಣಿಯಲ್ಲಿ ಚರ್ಚಿಸಿದ್ದು, ಮೈತ್ರಿ ಬೇಡ ಎಂದು ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.

ಆದರೆ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ತೀರ್ಮಾನ ಆಗಿರುವುದರಿಂದ ಸಮ್ಮಿಶ್ರ ಸರ್ಕಾರ ಇರುವುದರಿಂದ ಮೈತ್ರಿ ಬೇಡ ಎಂದರೆ ಕಷ್ಟವಾಗಬಹುದು. ಆದರೂ ಹೈಕಮಾಂಡ್‌ ಬಳಿ ಚರ್ಚಿಸಲಾಗುವುದು ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಶುಕ್ರವಾರದಿಂದ ಕಾಂಗ್ರೆಸ್‌ ಪಕ್ಷವು ಲೋಕಸಭೆ ಕ್ಷೇತ್ರಾವಾರು ಚುನಾವಣಾ ಸಿದ್ಧತೆ ಪೂರ್ವಭಾವಿ ಸಭೆ ನಿಗದಿಯಾಗಿದ್ದು ಅಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವನಾ ತಯಾರಿ ಬಗ್ಗೆಯೂ ಚರ್ಚೆ ನಡೆಯಲಿದೆ.

ಸಂಸತ್‌ ಅಧಿವೇಶನ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಶನಿವಾರ ನಗರಕ್ಕೆ ಆಗಮಿಸಲಿದ್ದು ,  ನಂತರ ಜಿಲ್ಲಾವಾರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್‌-ಜೆಡಿಎಸ್‌ ಜತೆ ಮೈತ್ರಿಯಾಗದಿದ್ದರೂ ಜೆಡಿಎಸ್‌- ಬಿಎಸ್‌ಪಿ ಮೈತ್ರಿಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ಪ್ರತಿಪಕ್ಷ ಬಿಜೆಪಿ ಸಹ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ತಲೆಕಡಿಸಿಕೊಳ್ಳದೆ ವಿಧಾನಸಭೆ ಕ್ಷೇತ್ರಾವಾರು ಸಭೆ ನಡೆಸಿ ತತಕ್ಷಣದಿಂದ ಸಿದ್ಧತೆ ಆರಂಭಿಸಲು ನಿರ್ಧರಿಸಿದೆ. ಆಗಸ್ಟ್‌ 9 ರಿಂದ ಮೂರು ತಂಡಗಳಲ್ಲಿ ಬಿಜೆಪಿ ರಾಜ್ಯ ಪ್ರವಾಸಕ್ಕೆ ತೀರ್ಮಾನಿಸಲಾಗಿದ್ದು ಅದು  ಸ್ಥಳೀಯ ಸಂಸ್ಥೆಗಳ ಪ್ರಚಾರ ಸಭೆಗಳಾಗುವ ಸಾಧ್ಯತೆಯಿದೆ.

ಈ ಮಧ್ಯೆ, ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ಮಾಡಲಿದೆ.  ಈಗಿನಿಂದಲೇ ಚುನಾವಣೆ ತಯಾರಿ ಆರಂಭಿಸಲಿದ್ದೇವೆ ಎಂದು ಹೇಳಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ನಾನು ತಲೆಕಡಿಸಿಕೊಳ್ಳುವುದಿಲ್ಲ. ಅದರ ಬಗ್ಗೆ ನಮಗೆ ಆಸಕ್ತಿಯೂ ಇಲ್ಲ. ನಮ್ಮ ಹೋರಾಟ ನಮ್ಮದು ಎಂದುತಿಳಿಸಿದರು.

ಎಫೆಕ್ಟ್ ಕೊಡುತ್ತಾ?
ಉತ್ತರ ಕರ್ನಾಟಕ ಕುರಿತ ಹೇಳಿಕೆ ವಿವಾದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಫೆಕ್ಟ್ ನೀಡಲಿದೆಯಾ? ಎಂಬ ಬಗ್ಗೆಯೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಆತಂಕವಿದೆ.ಆದರೆ, ಕುಮಾರಸ್ವಾಮಿಯವರು ಹೋರಾಟಗಾರರ ಜತೆ ಸಭೆ ನಡೆಸಿ ಬೆಳಗಾವಿ ಎರಡನೇ ರಾಜಧಾನಿ ಮಾಡುವುದು, ಸುವರ್ಣಸೌಧಕ್ಕೆ ಕೆಲವು ಇಲಾಖೆಗಳ ಸ್ಥಳಾಂತರ ಸೇರಿದಂತೆ ಭರವಸೆ ನೀಡಿರುವುದು. ಬಂದ್‌ ಕರೆ ವಿಫ‌ಲವಾಗಿರುವುದರಿಂದ ಅಂತಹ ಸಮಸ್ಯೆಯಾಗದು ಎಂಬುದು ಎರಡೂ ಪಕ್ಷಗಳ ನಾಯಕರು ಹೇಳುತ್ತಾರೆ.

ಸಂಪುಟ ವಿಸ್ತರಣೆ ಮುಂದಕ್ಕೆ ?
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಷಾಢ ಮಾಸದ ನಂತರ ನಿಗದಿಯಾಗಿದ್ದ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕ ಬಹುತೇಕ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕಕ್ಕೆ ಕೈ ಹಾಕಿದರೆ ಅತೃಪ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಟಸ್ಥವಾಗುವ ಸಾಧ್ಯತೆ ಇರುವುದರಿಂದ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಅದಕ್ಕೆ ಕೈ ಹಾಕಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.