ಕಾಬೂಲ್‌ ಉಗ್ರರ ಗುಂಡಿಗೆ ಕಾರವಾರ ಯುವಕ ಬಲಿ


Team Udayavani, Aug 4, 2018, 6:00 AM IST

attack.jpg

ಕಾರವಾರ: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಉಗ್ರಗಾಮಿಗಳ ಗುಂಡೇಟಿಗೆ ಬಲಿಯಾದ ಪ್ಯಾಟ್ಸನ್‌ ರೊಡ್ರಿಗಸ್‌ (34), ಕಾರವಾರ ತಾಲೂಕಿನ ಕಡವಾಡ ಗ್ರಾಮ ನಿವಾಸಿ ಎಂದು ಖಚಿತಗೊಂಡಿದೆ.

ಪ್ಯಾಟ್ಸನ್‌, ವಿಶ್ವ ಪ್ರಸಿದ್ಧ ಆಹಾರ ಸರಬರಾಜು ಕಂಪನಿ ಸೊಡೆಕೊದಲ್ಲಿ ಬಾಣಸಿಗ ಹಾಗೂ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು. ಕಾಬೂಲ್‌ ಸಮೀಪದ ಮನೆಯಿಂದ ಕೆಲಸದ ಸ್ಥಳಕ್ಕೆ ಮಲೇಷ್ಯಾ ಹಾಗೂ ಮೆಕಡೋನಿಯಾದ ಮತ್ತೂಬ್ಬ ಯುವಕನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಹತ್ಯೆ ಮಾಡಲಾಗಿದೆ. 

ಶಂಕಿತ ಇಸ್ಲಾಮಿಕ್‌ ಉಗ್ರರು ಮೂವರನ್ನು ಕಾಬೂಲ್‌ ಪ್ರಾಂತ್ಯದ ಪೂರ್ವ ಭಾಗದ ಪೌಲ್‌ ಇ ಚಾರ್ಖಿ ಸರ್ಕಲ್‌ನಿಂದ ಅಪಹರಿಸಿ ದಕ್ಷಿಣ ಅಪಾ^ನಿಸ್ತಾನದ ಮುಸ್ಸಾಯಿ ಜಿಲ್ಲೆಯ ಪ್ರದೇಶದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಟೊಯೋಟ ಕೊರೋಲಾ ಕಾರಿನಲ್ಲಿ ಪ್ಯಾಟ್ಸನ್‌ ಮತ್ತು ಇತರ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಪ್ಯಾಟ್ಸನ್‌ ಮತ್ತಿಬ್ಬರು ಸಂಚರಿಸುತ್ತಿದ್ದ ವಾಹನದ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಪಹರಣಕಾರರಿಗಾಗಿ ಹುಡುಕಾಟ ನಡೆದಿದೆ. ಪ್ಯಾಟ್ಸನ್‌ ಮೃತದೇಹ ಪತ್ತೆಯಾದ ಸ್ಥಳದಿಂದ ಅಪಹರಣಕಾರರು ಪರಾರಿಯಾಗಿದ್ದಾರೆ.

ಸೊಡೆಕೊ ಅಫ್ಘಾನಿಸ್ತಾನದಲ್ಲಿ ವಿದೇಶಿಗರು, ಆಸ್ಪತ್ರೆಗಳು ಹಾಗೂ ಕಾರಾಗೃಹಗಳಿಗೆ ಆಹಾರ ಸರಬರಾಜು ಮಾಡುವ ಕಂಪನಿಯಾಗಿದೆ. ಇಂಗ್ಲೆಂಡ್‌ನ‌ ರಾಯಲ್‌ ಆಸ್ಕೋಟ್‌ ಮೂಲದ ಈ ಕಂಪನಿ ಅಮೆರಿಕದ ನೌಕಾದಳ ಸೈನಿಕರಿಗೂ ಆಹಾರ ಸರಬರಾಜು ಮಾಡುತ್ತದೆ. 

ಯಾರು ಈ ಪ್ಯಾಟ್ಸನ್‌?:
ಪ್ಯಾಟ್ಸನ್‌ ರೊಡ್ರಿಗಸ್‌ ಕಾರವಾರ ತಾಲೂಕು ಕಡವಾಡ ಗ್ರಾಮದ ಯುವಕ. ಇಲ್ಲಿನ ಸುಂಕೇರಿಯ ನಿರ್ಮಲ ರಾಣೆ ಕಾನ್ವೆಂಟ್‌ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದವರು. ಕಾರವಾರದಲ್ಲಿ ಕಾಲೇಜು ಕಲಿತು, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಮುಗಿಸಿ ಗಲ್ಫ್ ರಾಷ್ಟ್ರಗಳಲ್ಲಿ ದಶಕದಿಂದ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿಂದ ಎರಡು ವರ್ಷಗಳ ಹಿಂದಷ್ಟೇ ಅಪಾ^ನಿಸ್ತಾನದ ಕಾಬೂಲ್‌ನಲ್ಲಿ ಸೊಡೆಕೊÕà ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಕಾರವಾರಕ್ಕೆ ಎರಡು ತಿಂಗಳ ಹಿಂದಷ್ಟೇ ಬಂದು ತಾಯಿ, ಪತ್ನಿ ಹಾಗೂ ಮಗುವನ್ನು ಭೇಟಿಯಾಗಿ ಮರಳಿದ್ದರು. ತಾಯಿ ಕಡವಾಡದಲ್ಲಿ ವಾಸವಾಗಿದ್ದಾರೆ. ಪತ್ನಿ ಪಿಲ್ಲಾ ಹಾಗೂ ಮಗ ಕಾರವಾರ ನಗರದ ಕಾಜೂಭಾಗದಲ್ಲಿ ವಾಸವಿದ್ದಾರೆ. ಅಪಹರಣವಾಗುವ ಸ್ವಲ್ಪ ಹೊತ್ತಿನ ಮುಂಚೆ ಪ್ಯಾಟ್ಸನ್‌ ಮನೆಯವರೊಂದಿಗೆ ಮಾತನಾಡಿದ್ದರು.

ರವಿವಾರ ಮೃತದೇಹ ಕಡವಾಡಕ್ಕೆ:
ಪ್ಯಾಟ್ಸನ್‌ ರೊಡ್ರಿಗಸ್‌ರ ಮೃತದೇಹ ರವಿವಾರ ಕಡವಾಡ ಗ್ರಾಮ ತಲುಪುವ ಸಾಧ್ಯತೆಗಳಿವೆ. ಅಫ್ಘಾನಿಸ್ತಾನದ ಕಾನೂನು ಪ್ರಕ್ರಿಯೆಗಳು ಮುಗಿದ ನಂತರ ಬಾಣಸಿಗ ಪ್ಯಾಟ್ಸನ್‌ ಅವರ ಪಾರ್ಥೀವ ಶರೀರವನ್ನು ಕಾರವಾರಕ್ಕೆ ಕಳುಹಿಸಲು ಸೊಡೆಕೊ ಕಂಪನಿ ಪ್ರಯತ್ನ ನಡೆಸಿದೆ. ಈ ಸಂಬಂಧ ಭಾರತದ ರಾಯಭಾರ ಕಚೇರಿಯೊಂದಿಗೆ ಮಾತುಕತೆಗಳು ನಡೆಯುತ್ತಿವೆ.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.