ಕಾಬೂಲ್‌ ಉಗ್ರರ ಗುಂಡಿಗೆ ಕಾರವಾರ ಯುವಕ ಬಲಿ


Team Udayavani, Aug 4, 2018, 6:00 AM IST

attack.jpg

ಕಾರವಾರ: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿ ಉಗ್ರಗಾಮಿಗಳ ಗುಂಡೇಟಿಗೆ ಬಲಿಯಾದ ಪ್ಯಾಟ್ಸನ್‌ ರೊಡ್ರಿಗಸ್‌ (34), ಕಾರವಾರ ತಾಲೂಕಿನ ಕಡವಾಡ ಗ್ರಾಮ ನಿವಾಸಿ ಎಂದು ಖಚಿತಗೊಂಡಿದೆ.

ಪ್ಯಾಟ್ಸನ್‌, ವಿಶ್ವ ಪ್ರಸಿದ್ಧ ಆಹಾರ ಸರಬರಾಜು ಕಂಪನಿ ಸೊಡೆಕೊದಲ್ಲಿ ಬಾಣಸಿಗ ಹಾಗೂ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು. ಕಾಬೂಲ್‌ ಸಮೀಪದ ಮನೆಯಿಂದ ಕೆಲಸದ ಸ್ಥಳಕ್ಕೆ ಮಲೇಷ್ಯಾ ಹಾಗೂ ಮೆಕಡೋನಿಯಾದ ಮತ್ತೂಬ್ಬ ಯುವಕನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಹತ್ಯೆ ಮಾಡಲಾಗಿದೆ. 

ಶಂಕಿತ ಇಸ್ಲಾಮಿಕ್‌ ಉಗ್ರರು ಮೂವರನ್ನು ಕಾಬೂಲ್‌ ಪ್ರಾಂತ್ಯದ ಪೂರ್ವ ಭಾಗದ ಪೌಲ್‌ ಇ ಚಾರ್ಖಿ ಸರ್ಕಲ್‌ನಿಂದ ಅಪಹರಿಸಿ ದಕ್ಷಿಣ ಅಪಾ^ನಿಸ್ತಾನದ ಮುಸ್ಸಾಯಿ ಜಿಲ್ಲೆಯ ಪ್ರದೇಶದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಟೊಯೋಟ ಕೊರೋಲಾ ಕಾರಿನಲ್ಲಿ ಪ್ಯಾಟ್ಸನ್‌ ಮತ್ತು ಇತರ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಪ್ಯಾಟ್ಸನ್‌ ಮತ್ತಿಬ್ಬರು ಸಂಚರಿಸುತ್ತಿದ್ದ ವಾಹನದ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಪಹರಣಕಾರರಿಗಾಗಿ ಹುಡುಕಾಟ ನಡೆದಿದೆ. ಪ್ಯಾಟ್ಸನ್‌ ಮೃತದೇಹ ಪತ್ತೆಯಾದ ಸ್ಥಳದಿಂದ ಅಪಹರಣಕಾರರು ಪರಾರಿಯಾಗಿದ್ದಾರೆ.

ಸೊಡೆಕೊ ಅಫ್ಘಾನಿಸ್ತಾನದಲ್ಲಿ ವಿದೇಶಿಗರು, ಆಸ್ಪತ್ರೆಗಳು ಹಾಗೂ ಕಾರಾಗೃಹಗಳಿಗೆ ಆಹಾರ ಸರಬರಾಜು ಮಾಡುವ ಕಂಪನಿಯಾಗಿದೆ. ಇಂಗ್ಲೆಂಡ್‌ನ‌ ರಾಯಲ್‌ ಆಸ್ಕೋಟ್‌ ಮೂಲದ ಈ ಕಂಪನಿ ಅಮೆರಿಕದ ನೌಕಾದಳ ಸೈನಿಕರಿಗೂ ಆಹಾರ ಸರಬರಾಜು ಮಾಡುತ್ತದೆ. 

ಯಾರು ಈ ಪ್ಯಾಟ್ಸನ್‌?:
ಪ್ಯಾಟ್ಸನ್‌ ರೊಡ್ರಿಗಸ್‌ ಕಾರವಾರ ತಾಲೂಕು ಕಡವಾಡ ಗ್ರಾಮದ ಯುವಕ. ಇಲ್ಲಿನ ಸುಂಕೇರಿಯ ನಿರ್ಮಲ ರಾಣೆ ಕಾನ್ವೆಂಟ್‌ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪಡೆದವರು. ಕಾರವಾರದಲ್ಲಿ ಕಾಲೇಜು ಕಲಿತು, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಮುಗಿಸಿ ಗಲ್ಫ್ ರಾಷ್ಟ್ರಗಳಲ್ಲಿ ದಶಕದಿಂದ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿಂದ ಎರಡು ವರ್ಷಗಳ ಹಿಂದಷ್ಟೇ ಅಪಾ^ನಿಸ್ತಾನದ ಕಾಬೂಲ್‌ನಲ್ಲಿ ಸೊಡೆಕೊÕà ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಕಾರವಾರಕ್ಕೆ ಎರಡು ತಿಂಗಳ ಹಿಂದಷ್ಟೇ ಬಂದು ತಾಯಿ, ಪತ್ನಿ ಹಾಗೂ ಮಗುವನ್ನು ಭೇಟಿಯಾಗಿ ಮರಳಿದ್ದರು. ತಾಯಿ ಕಡವಾಡದಲ್ಲಿ ವಾಸವಾಗಿದ್ದಾರೆ. ಪತ್ನಿ ಪಿಲ್ಲಾ ಹಾಗೂ ಮಗ ಕಾರವಾರ ನಗರದ ಕಾಜೂಭಾಗದಲ್ಲಿ ವಾಸವಿದ್ದಾರೆ. ಅಪಹರಣವಾಗುವ ಸ್ವಲ್ಪ ಹೊತ್ತಿನ ಮುಂಚೆ ಪ್ಯಾಟ್ಸನ್‌ ಮನೆಯವರೊಂದಿಗೆ ಮಾತನಾಡಿದ್ದರು.

ರವಿವಾರ ಮೃತದೇಹ ಕಡವಾಡಕ್ಕೆ:
ಪ್ಯಾಟ್ಸನ್‌ ರೊಡ್ರಿಗಸ್‌ರ ಮೃತದೇಹ ರವಿವಾರ ಕಡವಾಡ ಗ್ರಾಮ ತಲುಪುವ ಸಾಧ್ಯತೆಗಳಿವೆ. ಅಫ್ಘಾನಿಸ್ತಾನದ ಕಾನೂನು ಪ್ರಕ್ರಿಯೆಗಳು ಮುಗಿದ ನಂತರ ಬಾಣಸಿಗ ಪ್ಯಾಟ್ಸನ್‌ ಅವರ ಪಾರ್ಥೀವ ಶರೀರವನ್ನು ಕಾರವಾರಕ್ಕೆ ಕಳುಹಿಸಲು ಸೊಡೆಕೊ ಕಂಪನಿ ಪ್ರಯತ್ನ ನಡೆಸಿದೆ. ಈ ಸಂಬಂಧ ಭಾರತದ ರಾಯಭಾರ ಕಚೇರಿಯೊಂದಿಗೆ ಮಾತುಕತೆಗಳು ನಡೆಯುತ್ತಿವೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.