ಮಗ ಮಾಡಿದ ತಪ್ಪುತಿದ್ದಿಕೊಳ್ಳಲು ಹೇಳಿ


Team Udayavani, Aug 4, 2018, 6:00 AM IST

bsy-aa-800.jpg

ಬೆಂಗಳೂರು: ನಾನು ಅಧಿಕಾರ ಸಿಗದೆ ಹತಾಶೆ ಭಾವನೆಯಿಂದ ಮಾತನಾಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

ಉದಯವಾಣಿಗೆ ದೇವೇಗೌಡರು ನೀಡಿದ್ದ ಸಂದರ್ಶನದಲ್ಲಿ ಉತ್ತರ ಕರ್ನಾಟಕ ಭಾಗದ ಹೋರಾಟಗಾರರಿಗೆ ಯಡಿಯೂರಪ್ಪ ಕುಮ್ಮಕ್ಕು ನೀಡುತ್ತಿದ್ದಾರೆಂದು ಹೇಳಿದ್ದ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ದೇವೇಗೌಡರು ವಿನಾ ಕಾರಣ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ದೇವೇಗೌಡರಿಗೆ ಮೂರು ಪ್ರಶ್ನೆಗಳನ್ನು ಹಾಕಿರುವ ಯಡಿಯೂರಪ್ಪ ಇದಕ್ಕೆ ಉತ್ತರಿಸಲಿ ಎಂದೂ ಆಗ್ರಹಿಸಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ಏನು ಎಂದು ಹುಬ್ಬಳ್ಳಿಯಲ್ಲಿ ಹೇಳಿದವರ್ಯಾರು? ಚನ್ನಪಟ್ಟಣದಲ್ಲಿ ಜಾತಿ ಮತ್ತು ಹಣದ ಆಮಿಷಕ್ಕೆ ಬಲಿಯಾಗಿ ಮತ ಹಾಕಿದಿರಿ ಎಂದು ಹೇಳಿದವರು ಯಾರು? ಉತ್ತರ ಕರ್ನಾಟಕದಿಂದ ರಾಜ್ಯಕ್ಕೆ ಬರುವ ಆದಾಯ ಏನು ಎಂದು ಪ್ರಶ್ನಿಸಿದವರು ಯಾರು? ಈ ಎಲ್ಲ ಪ್ರಶ್ನೆಗಳಿಗೆ ದೇವೇಗೌಡರು ಉತ್ತರ ನೀಡಲಿ ಎಂದು ಒತ್ತಾಯಿಸಿದರು.

ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ನೀಡಿದ ಬೇಜವಾಬ್ದಾರಿ ಹೇಳಿಕೆಗಳಿಂದ ಉತ್ತರ ಕರ್ನಾಟಕ ಹೊತ್ತಿಕೊಂಡು ಉರಿಯುತ್ತಿದೆ. ಮಗ ಮಾಡಿದ ತಪ್ಪು ತಿದ್ದಿಕೊಳ್ಳಲು ಹೇಳ್ಳೋದು ಬಿಟ್ಟು  ಈ ರೀತಿ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಬಿಎಸ್‌ವೈ ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ಅಧಿಕಾರದ ಹಪಹಪಿಯಿಲ್ಲ. ನಾವು ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ನಮ್ಮ ಹೊಣೆಗಾರಿಕೆ ಸಮರ್ಥವಾಗಿ ನಿರ್ವಹಿಸುತ್ತೇವೆ. ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಆ ಭಾಗದ ಹೋರಾಟಗಾರರು ಹಾಗೂ ಮಠಾಧೀಶರು ಧರಣಿ ಕುಳಿತಿದ್ದಾಗ ಮುಖ್ಯಮಂತ್ರಿ ಸ್ಥಳಕ್ಕೆ ಹೋಗಿ ಸಮಾಧಾನ ಮಾಡಬೇಕಿತ್ತು. ಆದರೆ, ಆ ಕೆಲಸ ನಾನು ಮಾಡಿದ್ದೇನೆ. ಇದು ತಪ್ಪೇ ಎಂದರು. ಮುಖ್ಯಮಂತ್ರಿಯವರ ಗೊಂದಲದ ಹೇಳಿಕೆಗಳು ಹಾಗೂ ತೀರ್ಮಾನಗಳು ಎಲ್ಲ ಅವಾಂತರಕ್ಕೂ ಕಾರಣ. ಆದರೆ, ನನ್ನ ಮೇಲೆ  ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.