ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 15 ಲಕ್ಷ ಡೀಲ್‌!​​​​​​​


Team Udayavani, Aug 5, 2018, 6:00 AM IST

ban05081806.jpg

ತುಮಕೂರು: ಗುಬ್ಬಿ ತಾಲೂಕಿನ ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 15 ಲಕ್ಷ ರೂ.ಗೆ ಒಪ್ಪಂದ ನಡೆದಿದೆ ಎನ್ನಲಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಈಗ 5 ವರ್ಷದ ಅವಧಿಗೆ ಜಾವಿದ್‌ ಪಾಷ ಅಧ್ಯಕ್ಷರಾಗಿದ್ದಾರೆ. ಅವರ ವಿರುದ್ಧ ಅವಿಶ್ವಾಸ ನಿರ್ಣಯ ತಂದು, ಅವರನ್ನು ಕೆಳಗಿಳಿಸಿ, ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡಿದ್ದಾರೆ. ಈ ಸಂಬಂಧ ಚಟುವಟಿಕೆಗಳು ಬಿರುಸುಗೊಂಡಿವೆ.

ಜಾವಿದ್‌ ಪಾಷ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಉಳಿದ 22 ತಿಂಗಳ ಅವಧಿಗೆ ತಲಾ 11 ತಿಂಗಳು ಅಧಿಕಾರ ನಡೆಸಲು ಇಬ್ಬರು ಸದಸ್ಯರ ನಡುವೆ ತೀರ್ಮಾನಿಸಲಾಗಿದೆ. ಈ ಪೈಕಿ, ಮೊದಲು ಅಧಿಕಾರ ನಡೆಸುವವರು 15 ಲಕ್ಷ ರೂ.ನೀಡಬೇಕು.ಈ ಬಗ್ಗೆ ದೇವಾಲಯದಲ್ಲಿ ಪ್ರಮಾಣ ಮಾಡಿ ಹಣ ನೀಡಲಾಗಿದೆ ಎಂಬ ಸಂಗತಿ ವೈರಲ್‌ ಆಗಿರುವ ವಿಡಿಯೋದಲ್ಲಿದೆ. ಹೀಗಾಗಿ, ಗ್ರಾಪಂ ಅಧ್ಯಕ್ಷ ಸ್ಥಾನ 15 ಲಕ್ಷಕ್ಕೆ ಮಾರಾಟವಾಗಿದೆ ಎಂದು ಮಾತು ಎಲ್ಲೆಡೆ ಕೇಳಿ ಬರುತ್ತಿದೆ.

ಹಾಲಿ ಅಧ್ಯಕ್ಷರಾಗಿರುವ ಜಾವಿದ್‌ ಪಾಷ ವಿರುದ್ಧ ಅವಿಶ್ವಾಸ ತಂದು, ಕೆಳಗಿಳಿಸುವುದು. ಉಳಿದ 22 ತಿಂಗಳ ಅವಧಿ ಪೈಕಿ 11 ತಿಂಗಳಿಗೆ ಗ್ರಾಪಂ ಸದಸ್ಯ ಗಿರೀಶ್‌ ಅಧ್ಯಕ್ಷರಾಗುವುದು. ಅದಕ್ಕೆ ಪ್ರತಿಯಾಗಿ 15 ಲಕ್ಷ ರೂ.ಗಳನ್ನು ನಂತರದ 11 ತಿಂಗಳಿಗೆ ಅಧ್ಯಕ್ಷರಾಗುವ ಮತ್ತೂಬ್ಬ ಸದಸ್ಯ ಶಿವಾನಂದ್‌ಗೆ ನೀಡುವುದು. ಬಳಿಕ, ಗಿರೀಶ್‌ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಉಳಿದ 11 ತಿಂಗಳ ಅವಧಿಗೆ ಇನ್ನೊಬ್ಬ ಸದಸ್ಯ ಶಿವಾನಂದ್‌ ಅಧ್ಯಕ್ಷರಾಗುವುದು. ಈ ವೇಳೆ, ಶಿವಾನಂದ್‌ ಅವರು ಗಿರೀಶ್‌ಗೆ 15 ಲಕ್ಷ ರೂ. ವಾಪಸ್‌ ನೀಡುವುದು ಎಂದು ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬಳಿಕ, ಗ್ರಾಮ ದೇವತೆಗೆ ಪೂಜೆ ಸಲ್ಲಿಸಲಾಗಿದೆ. ಗಿರೀಶ್‌ ಹಾಗೂ ಶಿವಾನಂದ್‌ ಪರಸ್ಪರ ಒಬ್ಬರಿಗೊಬ್ಬರು ಹಾರ ಬದಲಾಯಿಸಿಕೊಂಡಿದ್ದಾರೆ. ಈ ವೇಳೆ, ಉಭಯ ನಾಯಕರ ಬೆಂಬಲಿಗರು ಜಯಕಾರ ಮೊಳಗಿಸಿದ್ದಾರೆ. ಬಳಿಕ,
ಒಪ್ಪಂದದಂತೆ 15 ಲಕ್ಷ ರೂ.ಗಳಿದ್ದ ಬ್ಯಾಗ್‌ನ್ನು ಶಿವಾನಂದ್‌ಗೆ ಗಿರೀಶ್‌ ನೀಡಿದ್ದಾರೆ. ಶಿವಾನಂದ್‌ ಹಣ ಪಡೆದು ಅದನ್ನು ಎಣಿಸಿದ್ದಾರೆ. ಇದನ್ನು ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನನ್ನ ವಿರುದ್ಧ ಷಡ್ಯಂತ್ರ
ಈ ಸಂಬಂಧ “ಉದಯವಾಣಿ’ಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಕಡಬ ಗ್ರಾಪಂ ಅಧ್ಯಕ್ಷ ಜಾವಿದ್‌ ಪಾಷ, “ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಕೆಲವರು ಷಡ್ಯಂತ್ರ ರೂಪಿಸುತ್ತಿದ್ದಾರೆ. ಮೂರು ವರ್ಷದಲ್ಲಿ ಉತ್ತಮ ಆಡಳಿತ ನೀಡಿದ್ದೇನೆ. ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೆ, ವಿಶ್ವಾಸ ನಿರ್ಣಯ ಮಂಡಿಸುವ ಪ್ರಯತ್ನವನ್ನೂ ನಡೆಸಿದರು. ಆದರೆ, ಆ ರೀತಿ ಅವಿಶ್ವಾಸ ತಂದು ಕೆಳಗಿಳಿಸಲು ಬರುವುದಿಲ್ಲ. ಬಲವಾದ ಕಾರಣ ಬೇಕು. ಗ್ರಾಪಂನಲ್ಲಿ ಹಗರಣ ನಡೆದಿರಬಹುದು ಎಂದು ಭಾವಿಸಿ ಪಂಚಾಯತಿಯ ಲೆಕ್ಕಪತ್ರಗಳನ್ನು ಆಡಿಟ್‌ ಮಾಡಿಸುತ್ತಿದ್ದಾರೆ. ಆದರೆ, ನಾನು ಯಾವುದೇ ಹಗರಣ ಮಾಡಿಲ್ಲ. ಹಗರಣಗಳಿದ್ದರೆ ತೋರಿಸಲಿ, ಕಾನೂನಿಗೆ ತಲೆ ಬಾಗುತ್ತೇನೆ’ ಎಂದು ತಿಳಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.