ನಕಲಿ ವೈದ್ಯರ ಹೊಡೆತಕ್ಕೆ ಜನಪದ ವಿವಿ ವೈದ್ಯ ಕೋರ್ಸ್‌ ರದ್ದು!


Team Udayavani, Aug 6, 2018, 6:40 AM IST

ban06081807medn.jpg

ಹಾವೇರಿ: ನಕಲಿ ವೈದ್ಯರ ಸೃಷ್ಟಿಗೆ ಇಂಬು ನೀಡುತ್ತಿದೆ ಎಂಬ ಆರೋಪ ಹೊತ್ತಿದ್ದ ಕರ್ನಾಟಕ ಜಾನಪದ ವಿವಿ “ಜನಪದ ವೈದ್ಯ’ ಸರ್ಟಿಫಿಕೇಟ್‌ ಕೋರ್ಸ್‌ನ್ನು ಪ್ರಸಕ್ತ ಸಾಲಿನಿಂದ ಸಂಪೂರ್ಣ ಕೈ ಬಿಟ್ಟಿದೆ. 

ಈ ಮಹತ್ವದ ನಿರ್ಧಾರದಿಂದಾಗಿ “ಜನಪದ ವೈದ್ಯ’ ಕೋರ್ಸ್‌ ಪ್ರಮಾಣಪತ್ರ ದುರ್ಬಳಕೆ ಮಾಡಿಕೊಂಡು ವೈದ್ಯಕೀಯ ಸೇವೆ ನೀಡಲು ಮುಂದಾಗುವ ಭೀತಿ ದೂರವಾಗಿದೆ. ಜತೆಗೆ ಜನಪದ ವೈದ್ಯ ಕೋರ್ಸ್‌ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಸೃಷ್ಟಿಸಿ, ವಿದ್ಯಾರ್ಥಿಗಳಿಂದ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಅಧ್ಯಯನ ಕೇಂದ್ರಗಳು ಹಣ ವಸೂಲು ಮಾಡುವುದಕ್ಕೂ ಕಡಿವಾಣ ಬಿದ್ದಿದೆ.

ಈ ಕೋರ್ಸ್‌ನ ಪ್ರಮಾಣಪತ್ರ ದುರ್ಬಳಕೆ ಬಗ್ಗೆ ಆಯುಷ್‌ ಇಲಾಖೆ ಹಾಗೂ ಜನರಿಂದ ಕೋರ್ಸ್‌ ಬಗ್ಗೆ ವ್ಯಾಪಕವಾಗಿ ಆಪಾದನೆ ಕೇಳಿಬಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಜಾನಪದ ವಿಶ್ವವಿದ್ಯಾಲಯವು ಈ ಕೋರ್ಸ್‌ನ್ನು ಎಲ್ಲ ಅಧ್ಯಯನ ಕೇಂದ್ರಗಳಿಗೆ ಕೊಡದೆ, ವಿವಿಯ ಮುಖ್ಯ ಕ್ಯಾಂಪಸ್‌ ಹಾಗೂ ಬೀದರ್‌, ಜೋಯಿಡಾ ಹಾಗೂ ಮಂಡ್ಯದಲ್ಲಿರುವ ವಿವಿಯ ಅಧಿಕೃತ ಮೂರು ಅಧ್ಯಯನ ಕೇಂದ್ರಗಳಲ್ಲಿ ಮಾತ್ರ ಮುಂದುವರಿಸಿತ್ತು. ಆದರೆ, ಈ ವರ್ಷ ಈ ವಿವಾದಿತ ಕೋರ್ಸ್‌ನ್ನು ಸಂಪೂರ್ಣ ಕೈಬಿಟ್ಟಿದೆ.

ಏನು ವಿವಾದ?:
ಜಾನಪದ ವಿವಿಯಲ್ಲಿ ಒಂದು ವರ್ಷದ (9 ತಿಂಗಳು) “ಜನಪದ ವೈದ್ಯ’ ಎಂಬ ಸರ್ಟಿಫಿಕೇಟ್‌ ಕೋರ್ಸ್‌ ಇತ್ತು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಮೇಲೆ ಈ ಕೋರ್ಸ್‌ ಮಾಡಬಹುದಾಗಿತ್ತು. ಈ ಕೋರ್ಸ್‌ನ್ನು ವಿವಿ ರಾಜ್ಯಾದ್ಯಂತ ಇರುವ ಮಾನ್ಯತೆ ಪಡೆದ ಅಧ್ಯಯನ ಕೇಂದ್ರಗಳ ಮೂಲಕವೂ ಕೊಡುತ್ತಿತ್ತು. ಜನಪದ ವೈದ್ಯ ಪ್ರಮಾಣಪತ್ರ ದುರ್ಬಳಕೆ ಮಾಡಿಕೊಂಡು ನಕಲಿ ವೈದ್ಯರಾಗುವವರ ಸಂಖ್ಯೆ ಹಾಗೂ ತಮ್ಮ ನಕಲಿ ವೈದ್ಯಕೀಯಕ್ಕೆ ಇದನ್ನು ಅ ಧಿಕೃತ ಪ್ರಮಾಣ ಪತ್ರದ ರೀತಿಯಲ್ಲಿ ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು.

ಯಾವ ರೀತಿ ದುರ್ಬಳಕೆ?:
ಕರ್ನಾಟಕ ಜಾನಪದ ವಿವಿ “ಜನಪದ ವೈದ್ಯ’ ಸರ್ಟಿಫಿಕೇಟ್‌ ಕೋರ್ಸ್‌ ನಡೆಸಲು ಪರವಾನಗಿ ಪಡೆದ ಕೆಲ ಅಧ್ಯಯನ ಕೇಂದ್ರಗಳು ಈ ಕೋರ್ಸ್‌ ಮಾಡಿ ವೈದ್ಯಕೀಯ ವೃತ್ತಿ ಮಾಡಬಹುದೆಂದು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ಹೆಚ್ಚಿನ ಶುಲ್ಕ ಆಕರಿಸುತ್ತಿದ್ದವು. ಇದರ ಜತೆಗೆ ಈ ಕೋರ್ಸ್‌ನ ಪ್ರಮಾಣಪತ್ರ ಪಡೆದ ಕೆಲವರು ಈ ಪ್ರಮಾಣ ಪತ್ರ ಇಟ್ಟುಕೊಂಡು ಹೊಸದಾಗಿ ವೈದ್ಯಕೀಯ ವೃತ್ತಿ ಆರಂಭಿಸಿದ್ದರೆ, ಇನ್ನು ಕೆಲ ನಕಲಿ ವೈದ್ಯರು ಈ ಪ್ರಮಾಣಪತ್ರವನ್ನು ತಮ್ಮ ಅ ಧಿಕೃತ ಅರ್ಹತಾ ಪತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು.

ಆರೋಪ ಸಾಬೀತು:
ಜನಪದ ವೈದ್ಯ ಪ್ರಮಾಣಪತ್ರ ದುರ್ಬಳಕೆ ಹಾಗೂ ಈ ಕುರಿತು ಅಧ್ಯಯನ ಕೇಂದ್ರಗಳ ಮೇಲೆ ನಿಗಾವಹಿಸಿ ವರದಿ ನೀಡಲು ಪೊÅ| ಸಣ್ಣರಾಮ ಅಧ್ಯಕ್ಷತೆಯಲ್ಲಿ ಶೋಧಕ ಸಮಿತಿಯೊಂದನ್ನು ಸಹ ರಚಿಸಿತ್ತು. ಈ ಸಮಿತಿ ಅಧ್ಯಯನ ನಡೆಸಿ, ಈ ಆರೋಪ ಸತ್ಯವಾಗಿದೆ ಎಂದು ವರದಿ ನೀಡಿತ್ತು.

ಮುಚ್ಚಳಿಕೆ ಪತ್ರ:
ಕೋರ್ಸ್‌ ದುರ್ಬಳಕೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಿವಿ ಕೋರ್ಸ್‌ ಮಾಡಿದ ವಿದ್ಯಾರ್ಥಿಗಳಿಂದ “ಈ ಕೋರ್ಸ್‌ನ್ನು ಜ್ಞಾನಕ್ಕಾಗಿ ಪಡೆದುಕೊಂಡಿದ್ದೇನೆಯೇ ಹೊರತು ವೈದ್ಯಕೀಯ ವೃತ್ತಿಗಾಗಿ ಅಲ್ಲ’ ಎಂಬ ಮುಚ್ಚಳಿಕೆ ಪತ್ರ ಸಹ ಬರೆಸಿಕೊಳ್ಳುವ ನಿರ್ಧಾರ ಸಹ ಕೈಗೊಂಡಿತ್ತು. ಜತೆಗೆ ಪ್ರಮಾಣ ಪತ್ರದಲ್ಲಿಯೂ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖೀಸುವ ಬಗ್ಗೆ ತೀರ್ಮಾನ ಕೈಗೊಂಡಿತ್ತು. ಇಷ್ಟಾದರೂ ದುರ್ಬಳಕೆ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ವಿವಿ ಕೋರ್ಸ್‌ ಕೈಬಿಡುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದೆ.

ಜನಪದ ವೈದ್ಯ ಕೋರ್ಸ್‌ನ್ನು ವೈದ್ಯಕೀಯ ವೃತ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸತ್ಯಶೋಧನಾ ಸಮಿತಿಯ ಅಧ್ಯಯನದಿಂದ ಸಾಬೀತಾಗಿದೆ. ಕೋರ್ಸ್‌ ಗೊಂದಲಕ್ಕೆ ಎಡೆಮಾಡಿಕೊಟ್ಟಿದ್ದರಿಂದ ವಿವಿ ಜನಪದ ವೈದ್ಯ ಕೋರ್ಸ್‌ನ್ನು ಪ್ರಸಕ್ತ ಸಾಲಿನಿಂದ ಕೈಬಿಡಲಾಗಿದೆ.
– ಪ್ರೊ.ಡಿ.ಬಿ. ನಾಯಕ, ಕುಲಪತಿ, ಜಾನಪದ ವಿವಿ

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.