ತುಂಬಿದ ತುಂಗಭದ್ರಾ : 30 ಟಿಎಂಸಿ ನೀರು ಆಂಧ್ರ ಪಾಲು!


Team Udayavani, Aug 6, 2018, 6:15 AM IST

tungabhadra-reservoir.jpg

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ 30 ಟಿಎಂಸಿ ಅಡಿಗೂ ಅಧಿಕ ನೀರನ್ನು ವ್ಯರ್ಥವಾಗಿ ನದಿಪಾತ್ರಗಳಿಗೆ ಹರಿಬಿಡಲಾಗಿದ್ದು, ಆಂಧ್ರದ ಪಾಲಾಗಿದೆ. 

ರಾಜ್ಯ ಸರ್ಕಾರ ಜಲಾಶಯದ ಹೂಳಿನ ಬಗ್ಗೆ ಪರ್ಯಾಯ ವ್ಯವಸ್ಥೆ ಮಾಡಿದ್ದರೆ ವ್ಯರ್ಥ ಹರಿಯುವ ನೀರನ್ನು ಹಿಡಿದಿಡಬಹುದಿತ್ತು ಎನ್ನುವ ಚರ್ಚೆ ಅಚ್ಚುಕಟ್ಟು ಪ್ರದೇಶದ ರೈತಾಪಿ ವಲಯದಲ್ಲಿ ಶುರುವಾಗಿದೆ. ಆದರೆ ಸರ್ಕಾರದ ಆಮೆಗತಿ ಓಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕಾವೇರಿ ವಿಷಯ ಸರ್ಕಾರದ ಗಮನ ಸೆಳೆದಷ್ಟು ತುಂಗಭದ್ರಾ ಸೆಳೆದಿಲ್ಲ. ಸರ್ಕಾರದ ಆಮೆಗತಿ ಯೋಜನೆಗಳಿಗೆ ಜಲಾಶಯದಲ್ಲಿ ಸಂಗ್ರಹವಾಗಬೇಕಾದ ನೀರನ್ನು ಹಿಡಿದಿಟ್ಟುಕೊಳ್ಳಲು ವಿಫಲವಾಗುತ್ತಿದೆ. ತುಂಗಭದ್ರಾ ಜಲಾಶಯ 133 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ ಆರು ದಶಕದಿಂದ 33 ಟಿಎಂಸಿ ಅಡಿಗೂ ಅಧಿಕ ಹೂಳು ತುಂಬಿಕೊಂಡಿದೆ. ಪ್ರತಿ ವರ್ಷವೂ 0.50 ಟಿಎಂಸಿ ಅಡಿ ಹೂಳು ಜಲಾಶಯದ ಒಡಲಲ್ಲಿ ಶೇಖರಣೆಯಾಗುತ್ತಿದೆ ಎಂದು ತಾಂತ್ರಿಕ ವರದಿಯೇ ಹೇಳುತ್ತಿದೆ. ಹಾಗಾಗಿ ಡ್ಯಾಂನಲ್ಲಿ ನೀರು ಸಂಗ್ರಹಣೆ ಸಾಮರ್ಥ್ಯ ವರ್ಷದಿಂದ ವರ್ಷಕ್ಕೆ ಕ್ಷೀಣವಾಗುತ್ತಿದೆ.

ಡ್ಯಾಂ ಪ್ರಸಕ್ತ 100 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯಕ್ಕೆ ಬಂದು ತಲುಪಿದೆ. ಹೂಳಿನ ಬಗ್ಗೆ ಈ ಭಾಗದಲ್ಲಿ ಹಲವು ಹೋರಾಟ ನಡೆದರೂ ಸರ್ಕಾರ ಕಣ್ತೆರೆದು ನೋಡುತ್ತಿಲ್ಲ.ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಹೂಳಿನ ಬಗ್ಗೆ ಗ್ಲೋಬಲ್‌ ಟೆಂಡರ್‌ ಕರೆದು ಒಂದು ಹೆಜ್ಜೆ ಮುಂದಿಟ್ಟು ಕೊನೆಗೂ ಹೂಳೆತ್ತುವುದು ಅಸಾಧ್ಯ, ಹೂಳಿನ ಬದಲು ನವಲಿ ಬಳಿ 33 ಸಾವಿರ ಎಕರೆ ಪ್ರದೇಶದಲ್ಲಿ ಸಮಾನಾಂತರ ಜಲಾಶಯ ನಿರ್ಮಿಸಿದರೆ 30 ಟಿಎಂಸಿ ನೀರನ್ನು ಸಂಗ್ರಹಿಸಲು ಸಾಧ್ಯವಿದೆ ಎನ್ನುವ ಮಾತನ್ನಾಡಿತ್ತು. ನವಲಿ ಸಮಾನಾಂತರ ಜಲಾಶಯದ ಸಾಧಕ ಬಾಧಕದ ಅಧ್ಯಯನ ಸಮಿತಿ ರಚನೆಯ ಮಾತನ್ನಾಡಿ ಸುಮ್ಮನಾಯಿತು. ಮೈತ್ರಿ ಸರ್ಕಾರವೂ ಪ್ರಸ್ತಾಪ ಮಾಡಲಿಲ್ಲ.

ವ್ಯರ್ಥವಾಗಿ ಹರಿದ 30 ಟಿಎಂಸಿ ನೀರು:
ಈ ವರ್ಷ ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬಹುತೇಕ ಜಲಾಶಯಗಳು ಮೈದುಂಬಿಕೊಂಡಿವೆ. ತುಂಗಭದ್ರಾ ಜಲಾಶಯವೂ ಭರ್ತಿಯಾಗಿದೆ. ಆದರೆ ವ್ಯರ್ಥ ನೀರನ್ನು ಮುಖ್ಯ ಗೇಟ್‌ಗಳ ಮೂಲಕ ನದಿ ಪಾತ್ರಗಳಿಗೆ ಹರಿಬಿಡಲಾಗಿದೆ. ಜು.16ರಿಂದ ಗೇಟುಗಳ ಮೂಲಕ ನೀರು ಹರಿಬಿಡಲಾಗಿದ್ದು, ಕೇವಲ 20 ದಿನದಲ್ಲಿ ನದಿ ಪಾತ್ರಗಳಿಗೆ ಬರೊಬ್ಬರಿ 30 ಟಿಎಂಸಿ ಅಡಿಗೂ ಅಧಿಕ ನೀರು ಆಂಧ್ರಕ್ಕೆ ಹರಿದು ಹೋಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಪ್ರತಿದಿನ 16 ಸಾವಿರ ಕ್ಯೂಸೆಕ್‌ನಷ್ಟು ಒಳ ಹರಿವಿದೆ. ಹೆಚ್ಚುವರಿ ನೀರನ್ನು ಡ್ಯಾಂನಿಂದ ನದಿ ಪಾತ್ರಗಳಿಗೆ ಹರಿಬಿಡಲಾಗಿದೆ. 20 ದಿನದಲ್ಲಿ 30 ಟಿಎಂಸಿಗೂ ಅಧಿಕ ನೀರು ನದಿಪಾತ್ರಗಳಿಗೆ ಹರಿಬಿಡಲಾಗಿದೆ.
– ಶಂಕರಗೌಡ ಪಾಟೀಲ, ತುಂಗಭದ್ರಾ ಡ್ಯಾಂ ಸಿಇ

ತುಂಗಭದ್ರಾ ಜಲಾಶಯದಿಂದ ಪ್ರತಿ ದಿನವೂ ವ್ಯರ್ಥವಾಗಿ ನದಿ ಪಾತ್ರಗಳಿಗೆ ನೀರು ಹರಿಬಿಡುತ್ತಿರುವುದನ್ನು ನೋಡಿದರೆ ನಮಗೆ ನೋವೆನಿಸುತ್ತದೆ. ಈ ಭಾಗದ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು. ಕನಿಷ್ಠ ವ್ಯರ್ಥವಾಗಿ ಹರಿಯುವ ನೀರನ್ನಾದರೂ ಕೆರೆಗಳಿಗೆ ತುಂಬಿಸುವ ಕೆಲಸ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ.
– ವಿಠ್ಠಪ್ಪ ಗೋರಂಟಿ, ತುಂಗಭದ್ರಾ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ

– ದತ್ತು ಕಮ್ಮಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.