ತುಂಬಿದ ತುಂಗಭದ್ರಾ : 30 ಟಿಎಂಸಿ ನೀರು ಆಂಧ್ರ ಪಾಲು!


Team Udayavani, Aug 6, 2018, 6:15 AM IST

tungabhadra-reservoir.jpg

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ 30 ಟಿಎಂಸಿ ಅಡಿಗೂ ಅಧಿಕ ನೀರನ್ನು ವ್ಯರ್ಥವಾಗಿ ನದಿಪಾತ್ರಗಳಿಗೆ ಹರಿಬಿಡಲಾಗಿದ್ದು, ಆಂಧ್ರದ ಪಾಲಾಗಿದೆ. 

ರಾಜ್ಯ ಸರ್ಕಾರ ಜಲಾಶಯದ ಹೂಳಿನ ಬಗ್ಗೆ ಪರ್ಯಾಯ ವ್ಯವಸ್ಥೆ ಮಾಡಿದ್ದರೆ ವ್ಯರ್ಥ ಹರಿಯುವ ನೀರನ್ನು ಹಿಡಿದಿಡಬಹುದಿತ್ತು ಎನ್ನುವ ಚರ್ಚೆ ಅಚ್ಚುಕಟ್ಟು ಪ್ರದೇಶದ ರೈತಾಪಿ ವಲಯದಲ್ಲಿ ಶುರುವಾಗಿದೆ. ಆದರೆ ಸರ್ಕಾರದ ಆಮೆಗತಿ ಓಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕಾವೇರಿ ವಿಷಯ ಸರ್ಕಾರದ ಗಮನ ಸೆಳೆದಷ್ಟು ತುಂಗಭದ್ರಾ ಸೆಳೆದಿಲ್ಲ. ಸರ್ಕಾರದ ಆಮೆಗತಿ ಯೋಜನೆಗಳಿಗೆ ಜಲಾಶಯದಲ್ಲಿ ಸಂಗ್ರಹವಾಗಬೇಕಾದ ನೀರನ್ನು ಹಿಡಿದಿಟ್ಟುಕೊಳ್ಳಲು ವಿಫಲವಾಗುತ್ತಿದೆ. ತುಂಗಭದ್ರಾ ಜಲಾಶಯ 133 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ ಆರು ದಶಕದಿಂದ 33 ಟಿಎಂಸಿ ಅಡಿಗೂ ಅಧಿಕ ಹೂಳು ತುಂಬಿಕೊಂಡಿದೆ. ಪ್ರತಿ ವರ್ಷವೂ 0.50 ಟಿಎಂಸಿ ಅಡಿ ಹೂಳು ಜಲಾಶಯದ ಒಡಲಲ್ಲಿ ಶೇಖರಣೆಯಾಗುತ್ತಿದೆ ಎಂದು ತಾಂತ್ರಿಕ ವರದಿಯೇ ಹೇಳುತ್ತಿದೆ. ಹಾಗಾಗಿ ಡ್ಯಾಂನಲ್ಲಿ ನೀರು ಸಂಗ್ರಹಣೆ ಸಾಮರ್ಥ್ಯ ವರ್ಷದಿಂದ ವರ್ಷಕ್ಕೆ ಕ್ಷೀಣವಾಗುತ್ತಿದೆ.

ಡ್ಯಾಂ ಪ್ರಸಕ್ತ 100 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯಕ್ಕೆ ಬಂದು ತಲುಪಿದೆ. ಹೂಳಿನ ಬಗ್ಗೆ ಈ ಭಾಗದಲ್ಲಿ ಹಲವು ಹೋರಾಟ ನಡೆದರೂ ಸರ್ಕಾರ ಕಣ್ತೆರೆದು ನೋಡುತ್ತಿಲ್ಲ.ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಹೂಳಿನ ಬಗ್ಗೆ ಗ್ಲೋಬಲ್‌ ಟೆಂಡರ್‌ ಕರೆದು ಒಂದು ಹೆಜ್ಜೆ ಮುಂದಿಟ್ಟು ಕೊನೆಗೂ ಹೂಳೆತ್ತುವುದು ಅಸಾಧ್ಯ, ಹೂಳಿನ ಬದಲು ನವಲಿ ಬಳಿ 33 ಸಾವಿರ ಎಕರೆ ಪ್ರದೇಶದಲ್ಲಿ ಸಮಾನಾಂತರ ಜಲಾಶಯ ನಿರ್ಮಿಸಿದರೆ 30 ಟಿಎಂಸಿ ನೀರನ್ನು ಸಂಗ್ರಹಿಸಲು ಸಾಧ್ಯವಿದೆ ಎನ್ನುವ ಮಾತನ್ನಾಡಿತ್ತು. ನವಲಿ ಸಮಾನಾಂತರ ಜಲಾಶಯದ ಸಾಧಕ ಬಾಧಕದ ಅಧ್ಯಯನ ಸಮಿತಿ ರಚನೆಯ ಮಾತನ್ನಾಡಿ ಸುಮ್ಮನಾಯಿತು. ಮೈತ್ರಿ ಸರ್ಕಾರವೂ ಪ್ರಸ್ತಾಪ ಮಾಡಲಿಲ್ಲ.

ವ್ಯರ್ಥವಾಗಿ ಹರಿದ 30 ಟಿಎಂಸಿ ನೀರು:
ಈ ವರ್ಷ ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಬಹುತೇಕ ಜಲಾಶಯಗಳು ಮೈದುಂಬಿಕೊಂಡಿವೆ. ತುಂಗಭದ್ರಾ ಜಲಾಶಯವೂ ಭರ್ತಿಯಾಗಿದೆ. ಆದರೆ ವ್ಯರ್ಥ ನೀರನ್ನು ಮುಖ್ಯ ಗೇಟ್‌ಗಳ ಮೂಲಕ ನದಿ ಪಾತ್ರಗಳಿಗೆ ಹರಿಬಿಡಲಾಗಿದೆ. ಜು.16ರಿಂದ ಗೇಟುಗಳ ಮೂಲಕ ನೀರು ಹರಿಬಿಡಲಾಗಿದ್ದು, ಕೇವಲ 20 ದಿನದಲ್ಲಿ ನದಿ ಪಾತ್ರಗಳಿಗೆ ಬರೊಬ್ಬರಿ 30 ಟಿಎಂಸಿ ಅಡಿಗೂ ಅಧಿಕ ನೀರು ಆಂಧ್ರಕ್ಕೆ ಹರಿದು ಹೋಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಪ್ರತಿದಿನ 16 ಸಾವಿರ ಕ್ಯೂಸೆಕ್‌ನಷ್ಟು ಒಳ ಹರಿವಿದೆ. ಹೆಚ್ಚುವರಿ ನೀರನ್ನು ಡ್ಯಾಂನಿಂದ ನದಿ ಪಾತ್ರಗಳಿಗೆ ಹರಿಬಿಡಲಾಗಿದೆ. 20 ದಿನದಲ್ಲಿ 30 ಟಿಎಂಸಿಗೂ ಅಧಿಕ ನೀರು ನದಿಪಾತ್ರಗಳಿಗೆ ಹರಿಬಿಡಲಾಗಿದೆ.
– ಶಂಕರಗೌಡ ಪಾಟೀಲ, ತುಂಗಭದ್ರಾ ಡ್ಯಾಂ ಸಿಇ

ತುಂಗಭದ್ರಾ ಜಲಾಶಯದಿಂದ ಪ್ರತಿ ದಿನವೂ ವ್ಯರ್ಥವಾಗಿ ನದಿ ಪಾತ್ರಗಳಿಗೆ ನೀರು ಹರಿಬಿಡುತ್ತಿರುವುದನ್ನು ನೋಡಿದರೆ ನಮಗೆ ನೋವೆನಿಸುತ್ತದೆ. ಈ ಭಾಗದ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು. ಕನಿಷ್ಠ ವ್ಯರ್ಥವಾಗಿ ಹರಿಯುವ ನೀರನ್ನಾದರೂ ಕೆರೆಗಳಿಗೆ ತುಂಬಿಸುವ ಕೆಲಸ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ.
– ವಿಠ್ಠಪ್ಪ ಗೋರಂಟಿ, ತುಂಗಭದ್ರಾ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ

– ದತ್ತು ಕಮ್ಮಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.