ರೈತರ ಭೂಸ್ವಾಧೀನಕ್ಕೆ ಹೊಸ ನೀತಿ


Team Udayavani, Aug 7, 2018, 6:15 AM IST

dkk.jpg

ಬೆಂಗಳೂರು: ನೀರಾವರಿ ಯೋಜನೆಗಳಿಗೆ ಅಲ್ಪ ಕಾಲಾವಧಿಗೆ ಬೇಕಾದ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಬದಲು ಅವರಿಗೆ ಬೆಳೆ ಪರಿಹಾರ ನೀಡಿ ಬೇಕಾದಷ್ಟು ಅವಧಿಗೆ ಮಾತ್ರ ಪಡೆದುಕೊಳ್ಳುವ ಹೊಸ ಭೂಸ್ವಾಧೀನ ನೀತಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆದಿದೆ.

ನೀರಾವರಿ ಯೋಜನೆಗಳಿಗೆ ಭೂಸ್ವಾಧೀನವೇ ದೊಡ್ಡ ಅಡ್ಡಿಯಾಗಿದ್ದು, ಸರ್ಕಾರಕ್ಕೆ ಹೊರೆಯಾಗುವುದರ ಜತೆಗೆ ಭೂಸ್ವಾಧೀನ ವಿಳಂಬವಾಗಿ ಯೋಜನಾ ವೆಚ್ಚವೂ ಹೆಚ್ಚುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಾಧ್ಯವಾದ ಕಡೆ ಭೂಮಿಯ ಮಾಲಿಕತ್ವವನ್ನು ರೈತರಿಗೇ ನೀಡಿ ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಅದನ್ನು ಬಳಸಿಕೊಳ್ಳುವುದು ಇದರ ಉದ್ದೇಶ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಹೊಸ ನೀತಿ ಜಾರಿಗೊಳಿಸುವ ಕುರಿತಂತೆ ರೈತರು, ಸಾರ್ವಜನಿಕರು ಮತ್ತು ತಜ್ಞರ ಸಲಹೆ ಕೇಳಲಾಗಿದೆ. ಅವರಿಂದ ಬರುವ ಸಲಹೆಗಳನ್ನು ಪರಿಗಣಿಸಿ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಪಾವಗಡದ ಸೋಲಾರ್‌ ವಿದ್ಯುತ್‌ ಯೋಜನೆಗೆ ಇದೇ ರೀತಿಯಲ್ಲಿ ರೈತರಿಂದ ಭೂಮಿ ಪಡೆದುಕೊಳ್ಳಲಾಗಿದೆ. ಅದರಲ್ಲಿ ಸ್ವಲ್ಪ ಮಾರ್ಪಾಟು ಮಾಡಿ ನೀರಾವರಿ ಯೋಜನೆಗಳಲ್ಲೂ ಭೂಸ್ವಾಧೀನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ರೈತರ ಸಹಮತದಿಂದಲೇ ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಏನಿದು ಹೊಸ ಚಿಂತನೆ?:
ಎತ್ತಿನಹೊಳೆ ಯೋಜನೆಯಡಿ ಕೊರಟಗೆರೆ ಮತ್ತು ದೇವನಹಳ್ಳಿ ತಾಲೂಕಿನ 5427 ಎಕರೆ ಪ್ರದೇಶದಲ್ಲಿ ಬೈರಗೊಂಡಲು ಜಲಾಶಯ ನಿರ್ಮಿಸಲಾಗುತ್ತದೆ. ಈ ಯೋಜನೆಯಡಾ ಮಳೆಗಾಲದ ಮೂರು ತಿಂಗಳು ಮಾತ್ರ ನೀರನ್ನು ಬಯಲು ಸೀಮೆ ಜಿಲ್ಲೆಯ ಕೆರೆಗಳಿಗೆ ಪೂರೈಸಲಾಗುತ್ತದೆ. ಅಂದರೆ ಜಲಾಶಯದಲ್ಲಿ ಮೂರು ತಿಂಗಳು ಮಾತ್ರ ನೀರು ಇರಲಿದ್ದು, ಉಳಿದ ಒಂಬತ್ತು ತಿಂಗಳು ಖಾಲಿ ಇರುತ್ತದೆ. ಅದೇರೀತಿ ಆಲಮಟ್ಟಿ ಎಣೆಕಟ್ಟೆ ಎತ್ತರವನ್ನು 524 .256 ಮೀಟರ್‌ಗೆ ಎತ್ತರಿಸಿದ ಬಳಿಕ ಶಾಶ್ವತ ಮುಳುಗಡೆ ಪ್ರದೇಶ ಮತ್ತು ತಾತ್ಕಾಲಿಕ ಮುಳುಗಡೆ ಪ್ರದೇಶ ಎಂದು ಎರಡು ಹಂತಗಳಿರುತ್ತವೆ. 

ತಾತ್ಕಾಲಿಕ ಮುಳುಗಡೆ ಪ್ರದೇಶದಲ್ಲಿ ಮೂರು ಅಥವಾ ನಾಲ್ಕು ತಿಂಗಳು ಮಾತ್ರ ನೀರು ನಿಲ್ಲುತ್ತದೆ. ಉಳಿದ ಅವಧಿಯಲ್ಲಿ ಭೂಮಿ ಖಾಲಿ ಇರುತ್ತದೆ. ಈ ರೀತಿ ತಾತ್ಕಾಲಿಕವಾಗಿ ಮುಳುಗಡೆಯಾಗುವ ಭೂಮಿಯಲ್ಲಿ ಒಂಬತ್ತು ತಿಂಗಳು ರೈತರು ಕೃಷಿ ಚಟುವಟಿಕೆ ಹಮ್ಮಿಕೊಳ್ಳಬಹುದು ಎಂಬುದು ಸಚಿವ ಡಿ.ಕೆ.ಶಿವಕುಮಾರ್‌ ಅವರ ಅಭಿಪ್ರಾಯ.

ಇಂತಹ ಭೂಮಿಯನ್ನು ರೈತರಿಂದ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳುವ ಬದಲು ಭೂಮಿಯ ಹಕ್ಕನ್ನು ಅವರಿಗೇ ಬಿಟ್ಟುಕೊಟ್ಟು ಮೂರು ತಿಂಗಳು ಮಾತ್ರ ಅವರಿಂದ ಭೂಮಿ ಪಡೆದು ಆ ಅವಧಿಗೆ ಬೆಳೆ ಪರಿಹಾರ ನೀಡುವುದು ಹೊಸ ನೀತಿಯ ಅಂಶ. ಇದರಿಂದ ಭೂಮಿ ರೈತರಿಗೇ ಉಳಿಯುವಂತಾಗುತ್ತದೆ. ಸರ್ಕಾರ ಭೂಸ್ವಾಧೀನಕ್ಕೆ ಮಾಡಬೇಕಾದ ಹೊರೆಯೂ ಕಡಿಮೆಯಾಗುತ್ತದೆ. ಅಲ್ಲದೆ, ಅಗತ್ಯ ಭೂಮಿಯನ್ನು ತ್ವರಿತವಾಗಿ ಬಳಸಿಕೊಂಡು ಯೋಜನೆ ಜಾರಿಗೊಳಿಸಲು ಅನುಕೂಲವಾಗುತ್ತದೆ. ನೀರಾವರಿಗೆ ಸಂಬಂಧಿಸಿದಂತೆ ಸಾಧ್ಯವಿರುವ ಎಲ್ಲಾ ಕಡೆ ಈ ನೀತಿ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಸ್ಥಳೀಯ ರೈತರ ಅಭಿಪ್ರಾಯ ಪಡೆದು ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಹಾಗೆಂದು ರೈತರು ಇದಕ್ಕೆ ಒಪ್ಪಲೇ ಬೇಕು ಎಂದೇನಿಲ್ಲ. ಭೂಸ್ವಾಧೀನ ಮತ್ತು ತಾತ್ಕಾಲಿಕವಾಗಿ ಭೂಮಿ ಪಡೆಯುವ ಎರಡೂ ಆಯ್ಕೆಗಳನ್ನು ಅವರ ಮುಂದಿಡಲಾಗುವುದು. ರೈತರು ತಮಗೆ ಯಾವುದು ಅನುಕೂಲವೋ ಅದಕ್ಕೆ ಸಮ್ಮತಿಸಬಹುದು. ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಖಂಡಿತ ಎಂಬುದು ಮನವರಿಕೆಯಾಗುವಾಗ ರೈತರು ಭೂಮಿಯ ಹಕ್ಕು ತಮಗೆ ಬೇಕು ಎಂಬ ಭಾವನಾತ್ಮಕ ಕಾರಣಗಳಿಗಾಗಿ ಹೊಸ ನೀತಿಗೆ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂದರು.

ಕುಡಿವ ನೀರಿನ ನಾಲೆಗಳಿಗೆ ಮೋಟರ್‌ ಪಂಪ್‌ ಹಾಕಿ ನೀರು ತೆಗೆಯುವಂತಿಲ್ಲ
ಕುಡಿಯುವ ನೀರಿನ ಉದ್ದೇಶದಿಂದ ನೀರು ಪೂರೈಕೆಯಾಗುತ್ತಿರುವ ನಾಲೆಗಳಿಗೆ ರೈತರು ಮೋಟರ್‌ ಪಂಪ್‌ ಹಾಕಿ ನೀರು ಮೇಲೆತ್ತದಂತೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗುವುದು. ಜಲ ಸಂಪನ್ಮೂಲ ಮತ್ತು ಇಂಧನ ಇಲಾಖೆ ಸೇರಿ ಅಂತಹ ನಾಲೆಗಳ ಪಕ್ಕ ವಿದ್ಯುತ್‌ ಸಂಪರ್ಕ ಕಲ್ಪಿಸದಂತೆ ನೋಡಿಕೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ಹರಿಸುವ ನಾಲೆಗಳಿಗೆ ನೇರವಾಗಿ ಮೋಟರ್‌ ಪಂಪ್‌ ಹಾಕಿ ನೀರು ತೆಗೆಯಬಾರದು ಎಂಬ ನಿಯಮ ಇದ್ದರೂ ಅದು ಜಾರಿಯಾಗುತ್ತಿಲ್ಲ. ಆದರೆ, ಕುಡಿಯುವ ನೀರು ಪೂರೈಸುವ ನಾಲೆಗಳ ವಿಚಾರದಲ್ಲಿ ಈ ರೀತಿಯ ಮೃದು ಧೋರಣೆ ಸಾಧ್ಯವಿಲ್ಲ. ಹೀಗಾಗಿ ಅಂತಹ ನಾಲೆಗಳಿರುವ ಪ್ರದೇಶದಲ್ಲಿ ಮೋಟರ್‌ ಪಂಪ್‌ಗ್ಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸದಂತೆ ಇಂಧನ ಇಲಾಖೆ ಜತೆ ಚರ್ಚಿಸಲಾಗುವುದು. ಜತೆಗೆ ಜಲ ಸಂಪನ್ಮೂಲ ಇಲಾಖೆ ಮೂಲಕವೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಎತ್ತಿನಹೊಳೆ ಯೋಜನೆಯಲ್ಲಿ ಈ ನಿಯಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.