ರೈತರ ಭೂಸ್ವಾಧೀನಕ್ಕೆ ಹೊಸ ನೀತಿ


Team Udayavani, Aug 7, 2018, 6:15 AM IST

dkk.jpg

ಬೆಂಗಳೂರು: ನೀರಾವರಿ ಯೋಜನೆಗಳಿಗೆ ಅಲ್ಪ ಕಾಲಾವಧಿಗೆ ಬೇಕಾದ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಬದಲು ಅವರಿಗೆ ಬೆಳೆ ಪರಿಹಾರ ನೀಡಿ ಬೇಕಾದಷ್ಟು ಅವಧಿಗೆ ಮಾತ್ರ ಪಡೆದುಕೊಳ್ಳುವ ಹೊಸ ಭೂಸ್ವಾಧೀನ ನೀತಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆದಿದೆ.

ನೀರಾವರಿ ಯೋಜನೆಗಳಿಗೆ ಭೂಸ್ವಾಧೀನವೇ ದೊಡ್ಡ ಅಡ್ಡಿಯಾಗಿದ್ದು, ಸರ್ಕಾರಕ್ಕೆ ಹೊರೆಯಾಗುವುದರ ಜತೆಗೆ ಭೂಸ್ವಾಧೀನ ವಿಳಂಬವಾಗಿ ಯೋಜನಾ ವೆಚ್ಚವೂ ಹೆಚ್ಚುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಾಧ್ಯವಾದ ಕಡೆ ಭೂಮಿಯ ಮಾಲಿಕತ್ವವನ್ನು ರೈತರಿಗೇ ನೀಡಿ ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಅದನ್ನು ಬಳಸಿಕೊಳ್ಳುವುದು ಇದರ ಉದ್ದೇಶ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಹೊಸ ನೀತಿ ಜಾರಿಗೊಳಿಸುವ ಕುರಿತಂತೆ ರೈತರು, ಸಾರ್ವಜನಿಕರು ಮತ್ತು ತಜ್ಞರ ಸಲಹೆ ಕೇಳಲಾಗಿದೆ. ಅವರಿಂದ ಬರುವ ಸಲಹೆಗಳನ್ನು ಪರಿಗಣಿಸಿ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಪಾವಗಡದ ಸೋಲಾರ್‌ ವಿದ್ಯುತ್‌ ಯೋಜನೆಗೆ ಇದೇ ರೀತಿಯಲ್ಲಿ ರೈತರಿಂದ ಭೂಮಿ ಪಡೆದುಕೊಳ್ಳಲಾಗಿದೆ. ಅದರಲ್ಲಿ ಸ್ವಲ್ಪ ಮಾರ್ಪಾಟು ಮಾಡಿ ನೀರಾವರಿ ಯೋಜನೆಗಳಲ್ಲೂ ಭೂಸ್ವಾಧೀನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ರೈತರ ಸಹಮತದಿಂದಲೇ ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಏನಿದು ಹೊಸ ಚಿಂತನೆ?:
ಎತ್ತಿನಹೊಳೆ ಯೋಜನೆಯಡಿ ಕೊರಟಗೆರೆ ಮತ್ತು ದೇವನಹಳ್ಳಿ ತಾಲೂಕಿನ 5427 ಎಕರೆ ಪ್ರದೇಶದಲ್ಲಿ ಬೈರಗೊಂಡಲು ಜಲಾಶಯ ನಿರ್ಮಿಸಲಾಗುತ್ತದೆ. ಈ ಯೋಜನೆಯಡಾ ಮಳೆಗಾಲದ ಮೂರು ತಿಂಗಳು ಮಾತ್ರ ನೀರನ್ನು ಬಯಲು ಸೀಮೆ ಜಿಲ್ಲೆಯ ಕೆರೆಗಳಿಗೆ ಪೂರೈಸಲಾಗುತ್ತದೆ. ಅಂದರೆ ಜಲಾಶಯದಲ್ಲಿ ಮೂರು ತಿಂಗಳು ಮಾತ್ರ ನೀರು ಇರಲಿದ್ದು, ಉಳಿದ ಒಂಬತ್ತು ತಿಂಗಳು ಖಾಲಿ ಇರುತ್ತದೆ. ಅದೇರೀತಿ ಆಲಮಟ್ಟಿ ಎಣೆಕಟ್ಟೆ ಎತ್ತರವನ್ನು 524 .256 ಮೀಟರ್‌ಗೆ ಎತ್ತರಿಸಿದ ಬಳಿಕ ಶಾಶ್ವತ ಮುಳುಗಡೆ ಪ್ರದೇಶ ಮತ್ತು ತಾತ್ಕಾಲಿಕ ಮುಳುಗಡೆ ಪ್ರದೇಶ ಎಂದು ಎರಡು ಹಂತಗಳಿರುತ್ತವೆ. 

ತಾತ್ಕಾಲಿಕ ಮುಳುಗಡೆ ಪ್ರದೇಶದಲ್ಲಿ ಮೂರು ಅಥವಾ ನಾಲ್ಕು ತಿಂಗಳು ಮಾತ್ರ ನೀರು ನಿಲ್ಲುತ್ತದೆ. ಉಳಿದ ಅವಧಿಯಲ್ಲಿ ಭೂಮಿ ಖಾಲಿ ಇರುತ್ತದೆ. ಈ ರೀತಿ ತಾತ್ಕಾಲಿಕವಾಗಿ ಮುಳುಗಡೆಯಾಗುವ ಭೂಮಿಯಲ್ಲಿ ಒಂಬತ್ತು ತಿಂಗಳು ರೈತರು ಕೃಷಿ ಚಟುವಟಿಕೆ ಹಮ್ಮಿಕೊಳ್ಳಬಹುದು ಎಂಬುದು ಸಚಿವ ಡಿ.ಕೆ.ಶಿವಕುಮಾರ್‌ ಅವರ ಅಭಿಪ್ರಾಯ.

ಇಂತಹ ಭೂಮಿಯನ್ನು ರೈತರಿಂದ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳುವ ಬದಲು ಭೂಮಿಯ ಹಕ್ಕನ್ನು ಅವರಿಗೇ ಬಿಟ್ಟುಕೊಟ್ಟು ಮೂರು ತಿಂಗಳು ಮಾತ್ರ ಅವರಿಂದ ಭೂಮಿ ಪಡೆದು ಆ ಅವಧಿಗೆ ಬೆಳೆ ಪರಿಹಾರ ನೀಡುವುದು ಹೊಸ ನೀತಿಯ ಅಂಶ. ಇದರಿಂದ ಭೂಮಿ ರೈತರಿಗೇ ಉಳಿಯುವಂತಾಗುತ್ತದೆ. ಸರ್ಕಾರ ಭೂಸ್ವಾಧೀನಕ್ಕೆ ಮಾಡಬೇಕಾದ ಹೊರೆಯೂ ಕಡಿಮೆಯಾಗುತ್ತದೆ. ಅಲ್ಲದೆ, ಅಗತ್ಯ ಭೂಮಿಯನ್ನು ತ್ವರಿತವಾಗಿ ಬಳಸಿಕೊಂಡು ಯೋಜನೆ ಜಾರಿಗೊಳಿಸಲು ಅನುಕೂಲವಾಗುತ್ತದೆ. ನೀರಾವರಿಗೆ ಸಂಬಂಧಿಸಿದಂತೆ ಸಾಧ್ಯವಿರುವ ಎಲ್ಲಾ ಕಡೆ ಈ ನೀತಿ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಸ್ಥಳೀಯ ರೈತರ ಅಭಿಪ್ರಾಯ ಪಡೆದು ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಹಾಗೆಂದು ರೈತರು ಇದಕ್ಕೆ ಒಪ್ಪಲೇ ಬೇಕು ಎಂದೇನಿಲ್ಲ. ಭೂಸ್ವಾಧೀನ ಮತ್ತು ತಾತ್ಕಾಲಿಕವಾಗಿ ಭೂಮಿ ಪಡೆಯುವ ಎರಡೂ ಆಯ್ಕೆಗಳನ್ನು ಅವರ ಮುಂದಿಡಲಾಗುವುದು. ರೈತರು ತಮಗೆ ಯಾವುದು ಅನುಕೂಲವೋ ಅದಕ್ಕೆ ಸಮ್ಮತಿಸಬಹುದು. ಭೂಮಿ ಸ್ವಾಧೀನಪಡಿಸಿಕೊಳ್ಳುವುದು ಖಂಡಿತ ಎಂಬುದು ಮನವರಿಕೆಯಾಗುವಾಗ ರೈತರು ಭೂಮಿಯ ಹಕ್ಕು ತಮಗೆ ಬೇಕು ಎಂಬ ಭಾವನಾತ್ಮಕ ಕಾರಣಗಳಿಗಾಗಿ ಹೊಸ ನೀತಿಗೆ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎಂದರು.

ಕುಡಿವ ನೀರಿನ ನಾಲೆಗಳಿಗೆ ಮೋಟರ್‌ ಪಂಪ್‌ ಹಾಕಿ ನೀರು ತೆಗೆಯುವಂತಿಲ್ಲ
ಕುಡಿಯುವ ನೀರಿನ ಉದ್ದೇಶದಿಂದ ನೀರು ಪೂರೈಕೆಯಾಗುತ್ತಿರುವ ನಾಲೆಗಳಿಗೆ ರೈತರು ಮೋಟರ್‌ ಪಂಪ್‌ ಹಾಕಿ ನೀರು ಮೇಲೆತ್ತದಂತೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗುವುದು. ಜಲ ಸಂಪನ್ಮೂಲ ಮತ್ತು ಇಂಧನ ಇಲಾಖೆ ಸೇರಿ ಅಂತಹ ನಾಲೆಗಳ ಪಕ್ಕ ವಿದ್ಯುತ್‌ ಸಂಪರ್ಕ ಕಲ್ಪಿಸದಂತೆ ನೋಡಿಕೊಳ್ಳಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ಹರಿಸುವ ನಾಲೆಗಳಿಗೆ ನೇರವಾಗಿ ಮೋಟರ್‌ ಪಂಪ್‌ ಹಾಕಿ ನೀರು ತೆಗೆಯಬಾರದು ಎಂಬ ನಿಯಮ ಇದ್ದರೂ ಅದು ಜಾರಿಯಾಗುತ್ತಿಲ್ಲ. ಆದರೆ, ಕುಡಿಯುವ ನೀರು ಪೂರೈಸುವ ನಾಲೆಗಳ ವಿಚಾರದಲ್ಲಿ ಈ ರೀತಿಯ ಮೃದು ಧೋರಣೆ ಸಾಧ್ಯವಿಲ್ಲ. ಹೀಗಾಗಿ ಅಂತಹ ನಾಲೆಗಳಿರುವ ಪ್ರದೇಶದಲ್ಲಿ ಮೋಟರ್‌ ಪಂಪ್‌ಗ್ಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸದಂತೆ ಇಂಧನ ಇಲಾಖೆ ಜತೆ ಚರ್ಚಿಸಲಾಗುವುದು. ಜತೆಗೆ ಜಲ ಸಂಪನ್ಮೂಲ ಇಲಾಖೆ ಮೂಲಕವೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಎತ್ತಿನಹೊಳೆ ಯೋಜನೆಯಲ್ಲಿ ಈ ನಿಯಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.