ವರ್ಗಾವಣೆ ದಂಧೆಗೆ ಬಿಎಸ್ವೈ ದಾಖಲೆ ಕೊಡಲಿ
Team Udayavani, Aug 7, 2018, 12:03 PM IST
ಬೆಂಗಳೂರು: ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೂಕ್ತ ದಾಖಲೆ ಕೊಡಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಯಾವುದೇ ಹಣ ಪಡೆದು ವರ್ಗಾವಣೆ ನಡೆಸಿದಿಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಲಾಗಿದೆ. ಯಡಿಯೂರಪ್ಪ ಬಳಿ ಹಣ ಪಡೆದು ವರ್ಗಾವಣೆ ಮಾಡಿರುವ ಬಗ್ಗೆ ದಾಖಲೆ ಇದ್ದರೆ ನೀಡಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದ ಯಾವ ಜಿಲ್ಲೆಗೆ, ತಾಲೂಕಿಗೆ ಅನ್ಯಾಯವಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಲಿ. ಸರ್ಕಾರ ಅದನ್ನು ಸರಿಪಡಿಸುವ ಕೆಲಸ ಮಾಡುತ್ತದೆ. ಇದರಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ನಾನು ಕೇವಲ ಜೆಡಿಎಸ್ ಕಾಂಗ್ರೆಸ್ಗೆ ಸಚಿವನಲ್ಲ ಎಲ್ಲ ಜನರ ಮಂತ್ರಿ. ಜನರು ನಮಗೆ ಮತ ಹಾಕಿಲ್ಲ ಎಂದು ಸುಮ್ಮನಿರಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.
ಹಿಂದಿನ ಲೋಕೋಪಯೋಗಿ ಸಚಿವ ಮಹದೇವಪ್ಪ ಕೇಂದ್ರದಿಂದ ಹಣ ಬಿಡುಗಡೆಯಾಗದ ಕಾರಣ ಕೆಲವು ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಆದೇಶ ಮಾಡಿದ್ದಾರೆ. ಸಿಆರ್ಎಫ್ ಯೋಜನೆಯಲ್ಲಿ 1 ಸಾವಿರ ಕೋಟಿ ರೂ. ಬಿಲ್ ಬಾಕಿ ಇದೆ. ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ಮಾತ್ರ ಕೊಡುತ್ತದೆ. ಹೀಗಾಗಿ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.
ಕೋಲಾರ ಹಾಲು ಒಕ್ಕೂಟದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪವನ್ನು ತಳ್ಳಿ ಹಾಕಿರುವ ಅವರು, ನಾನು ಯಾವುದೇ ಒತ್ತಡ ಹಾಕಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯಿಲಿ ಅವರೊಂದಿಗೆ ಮಾತನಾಡಿದ್ದೇನೆ. ಸೈನಿಕರಿಗೆ ಹಾಲು ಕಳುಹಿಸಲು 10 ಲಕ್ಷ ಲೀಟರ್ ಮೇಲೆ ಹಾಲು ಉತ್ಪಾದಿಸುವ ಒಕ್ಕೂಟಗಳ ನಡುವೆ ಟೆಂಡರ್ ಕರೆಯಲಾಗುತ್ತದೆ.
ಹಾಸನ ಒಕ್ಕೂಟ 10 ಲಕ್ಷ ಲೀಟರ್ಗೂ ಅಧಿಕ ಹಾಲು ಉತ್ಪಾದನೆ ಮಾಡುತ್ತದೆ. ಹೀಗಾಗಿ ಹಾಸನ ಹಾಲು ಒಕ್ಕೂಟ ಟೆಂಡರ್ನಲ್ಲಿ ಪಾಲ್ಗೊಂಡು ಹಾಲು ಸರಬರಾಜಿಗೆ ಅವಕಾಶ ಪಡೆಯುತ್ತದೆ. ನಮಗೆ ಹಾಸನ, ಕೋಲಾರ, ಬೆಂಗಳೂರು ಎಂಬ ತಾರತಮ್ಯ ಇಲ್ಲ ಎಂದು ಹೇಳಿದರು.
ನನ್ನ ಮಗ ಯಾರ ಮೇಲೂ ಹಲ್ಲೆ ಮಾಡಿಲ್ಲ. ಕೆಲವರು ನನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಆತ ಎಲ್ಲಿಯೂ ಹೇಳಿಲ್ಲ. ಈ ಸಂಬಂಧ ಇನ್ಸ್ಪೆಕ್ಟರ್ ಅಮಾನತು ಮಾಡುವುದರಿಂದ ನನಗೇನು ಆಗುವುದಿದೆ. ನನ್ನ ಮಗ ತಪ್ಪು ಮಾಡಿದರೆ ತನಿಖೆ ನಡೆಸಲಿ. ನಾನು ಇದುವರೆಗೂ ಯಾರನ್ನೂ ವರ್ಗ ಮಾಡಿಲ್ಲ. ನನಗೆ ಯಾರ ಮೇಲೂ ದ್ವೇಷ ಇಲ್ಲ.
-ಎಚ್.ಡಿ.ರೇವಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ