ಮ್ಯಾನ್‌ಹೋಲ್‌ಗೆ ಇಳಿದಿದ್ದ ಇಬ್ಬರು ಕಾರ್ಮಿಕರ ಸಾವು


Team Udayavani, Aug 7, 2018, 6:00 AM IST

ban07081810medn-new.jpg

ಶಿವಮೊಗ್ಗ: ಮ್ಯಾನ್‌ಹೋಲ್‌ ಸ್ವಚ್ಚತೆಗೆ ಇಳಿದಿದ್ದ ಕಾರ್ಮಿಕ ಉಸಿರುಗಟ್ಟಿ ಮೃತಪಟ್ಟಿದ್ದು, ಈತನನ್ನು ಮೇಲೆತ್ತಲು ಇಳಿದ ಮತ್ತೂಬ್ಬ ಕಾರ್ಮಿಕನೂ ಮೃತಪಟ್ಟ ಘಟನೆ ನಗರದ ನ್ಯೂಮಂಡ್ಲಿ ಬಳಿ ಸೋಮವಾರ ಸಂಭವಿಸಿದೆ. ಮ್ಯಾನ್‌ಹೋಲ್‌ ಸ್ವಚ್ಚತೆಗೆ ಕಾರ್ಮಿಕರನ್ನು ಬಳಸಬಾರದು ಎಂದು ಸುಪ್ರೀಂಕೋರ್ಟ್‌ ಆದೇಶವಿದ್ದರೂ ಇದನ್ನು ಪಾಲಿಸದಿರುವುದೇ ದುರಂತಕ್ಕೆ ಕಾರಣವಾಗಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಬಿಳಿಚೋಡು ಹೋಬಳಿಯ ಬೆಂಜಿಕಟ್ಟೆ ಗ್ರಾಮದ ಅಂಜನಿ (17), ವೆಂಕಟೇಶ್‌ (37) ಮೃತರು.

ಶಿವಮೊಗ್ಗ ನಗರದ ಬೈಪಾಸ್‌ ಮತ್ತು ತೀರ್ಥಹಳ್ಳಿ ರಸ್ತೆಗೆ ಸೇರುವ ಜಾಗದ ಮ್ಯಾನ್‌ಹೋಲ್‌ಗ‌ಳ ಬಳಿ ಹಲವು ಕಾರ್ಮಿಕರು ಬೆಳಗ್ಗೆಯಿಂದ ಕೆಲಸ ಮಾಡುತ್ತಿದ್ದರು. ಮ್ಯಾನ್‌ಹೋಲ್‌ ಒಳಗೆ ಕೆಲಸ ಮಾಡುವಾಗಲೇ ಇವರಿಬ್ಬರೂ ಮೃತಪಟ್ಟಿದ್ದಾರೆ. ಇದು ಯಾರ ಗಮನಕ್ಕೂ ಬಂದಿಲ್ಲ. ಆದರೆ ಎಷ್ಟು ಹೊತ್ತಾದರೂ ಅಂಜನಿ ಮತ್ತು ವೆಂಕಟೇಶ ಬರದಿದ್ದನ್ನು ಗಮನಿಸಿದ ಉಳಿದ ಕಾರ್ಮಿಕರು ಸ್ಥಳಕ್ಕೆ ಹೋಗಿ ನೋಡಿದಾಗ ದುರ್ಘ‌ಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಮೇಲೆತ್ತಿದರು.

ನಗರದ 18 ವಾರ್ಡ್‌ಗಳಲ್ಲಿ ಹೊಸ ಯುಜಿಡಿ ಸಂಪರ್ಕ ಕೊಡುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 18 ಬಡಾವಣೆಗಳಲ್ಲಿ ಪೂರ್ಣಗೊಂಡಿದೆ. ಕೆಲ ಬಡಾವಣೆಗಳಲ್ಲಿ ಕಾಮಗಾರಿ ಪೂರ್ಣಗೊಂಡು 6 ತಿಂಗಳಿಂದ ವರ್ಷವಾಗಿದೆ. ಬಹಳಷ್ಟು ಕಡೆ ಒಳಚರಂಡಿಯಲ್ಲಿ ಕಸ ಮತ್ತು ನೀರು ತುಂಬಿಕೊಂಡಿದ್ದರಿಂದ ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಮುನ್ನ ಸ್ವಚ್ಚಗೊಳಿಸಿಕೊಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತು. ಈ ಗುತ್ತಿಗೆಯನ್ನು ವೆಂಕಟಸಾಯಿ ಅಸೋಸಿಯೇಟ್ಸ್‌ಗೆ ನೀಡಲಾಗಿತ್ತು. ಗುತ್ತಿಗೆದಾರರು ಬೇರೆ ಜಿಲ್ಲೆಗಳಿಂದ ಕಾರ್ಮಿಕರನ್ನು ಕರೆ ತಂದು ಕೆಲಸ ಮಾಡಿಸುತ್ತಿದ್ದರು.

ಗಾರೆ ಕೆಲಸದವರು: ಮ್ಯಾನ್‌ಹೋಲ್‌ ಸ್ವಚ್ಚತೆಯಲ್ಲಿ ತೊಡಗಿದ್ದ ಎಲ್ಲರೂ ಗಾರೆ ಕೆಲಸದವರಾಗಿದ್ದು, ಯಾರೂ ಕೂಡ ಪೌರ ಕಾರ್ಮಿಕರಲ್ಲ. ಮ್ಯಾನ್‌ಹೋಲ್‌ ಬಗ್ಗೆ ಯಾವುದೇ ಕಲ್ಪನೆ ಇಲ್ಲದೆ ಇರುವುದರಿಂದ ಯಾವ ರೀತಿ ಮುಂಜಾಗ್ರತೆ ವಹಿಸಬೇಕೆಂಬುದೂ ಇವರಿಗೆ ತಿಳಿದಿರಲಿಲ್ಲ.

ಉಸಿರುಗಟ್ಟಿ ಸಾವು: ದುರಂತ ಸಂಭವಿಸಿದ ಮ್ಯಾನ್‌ಹೋಲ್‌ 20 ಅಡಿಗೂ ಹೆಚ್ಚು ಆಳವಿದೆ. ಮೊದಲಿಗೆ ಅಂಜನಿ, ಕಸ ಕಟ್ಟಿದೆಯೇ ಎಂಬುದನ್ನು ನೋಡಲು ಮ್ಯಾನಹೋಲ್‌ನಲ್ಲಿ ಇಳಿದಿದ್ದು ಉಸಿರುಗಟ್ಟಿ ಕೆಳಗೆ ಜಾರಿದ್ದಾನೆ. ಇದನ್ನು ಗಮನಿಸುತ್ತಿದ್ದ ವೆಂಕಟೇಶ್‌ ಕೂಡ ಅಂಜನಿಯನ್ನು ರಕ್ಷಿಸಲು ಕೆಳಗೆ ಇಳಿದಿದ್ದಾನೆ. ಇಬ್ಬರೂ ಉಸಿರುಗಟ್ಟಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಪ್ರತಿಭಟನೆ: ಘಟನೆಯಿಂದ ಆಘಾತಗೊಂಡ ಇತರ ಕಾರ್ಮಿಕರು ಮೃತರ ಕುಟುಂಬಕ್ಕೆ ನ್ಯಾಯ, ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಧಿಕಾರಿ, ಶಾಸಕರು, ಗುತ್ತಿಗೆದಾರ ಬರುವವರೆಗೂ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಎಷ್ಟೇ ಪ್ರಯತ್ನ ಪಟ್ಟರು ಪ್ರತಿಭಟಕಾರರು ಪಟ್ಟು ಸಡಿಲಿಸಲಿಲ್ಲ. ಕೊನೆಗೆ ಶಾಸಕ ಈಶ್ವರಪ್ಪ ಆಗಮಿಸಿ ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಒಳಚರಂಡಿ ಸ್ವಚ್ಚತೆಯಲ್ಲಿ ಅನುಭವ ಇಲ್ಲದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡಿರುವುದು, ಬಾಲ ಕಾರ್ಮಿಕನಿಂದ ಕೆಲಸ ಮಾಡಿಸಿಕೊಂಡಿರುವುದು ಕಾನೂನು ಬಾಹಿರ. ಇದರ ಬಗ್ಗೆ ಸಂಬಂ ಧಿಸಿದ ಅ ಧಿಕಾರಿಗಳು ಮತ್ತು ಸಚಿವರೊಂದಿಗೆ ಮಾತನಾಡಿ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಕೋರಲಾಗುವುದು.
– ಕೆ.ಎಸ್‌. ಈಶ್ವರಪ್ಪ, ಶಾಸಕ, ಶಿವಮೊಗ್ಗ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.