ಪದವೀಧರ ಶಿಕ್ಷಕರ ನೇಮಕಾತಿಗೆ ಕಟ್‌ಆಫ್ ಅಂಕ ಕಗ್ಗಂಟು


Team Udayavani, Aug 9, 2018, 6:15 AM IST

government-school.jpg

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಕ್ಕೆ ಕಟ್‌ಆಫ್ ಅಂಕ ನಿಗದಿಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಗ್ಗಂಟಾಗುತ್ತಿದ್ದು, ಕಟ್‌ಆಫ್ ಅಂಕದ ಬಗ್ಗೆ ಸ್ಪಷ್ಟ ನಿರ್ಧಾರ ಇನ್ನೂ ತೆಗೆದುಕೊಳ್ಳದೇ ಇರುವುದರಿಂದ ನೇಮಕಾತಿ ಪ್ರಕ್ರಿಯೆಯೇ ವಿಳಂಬವಾಗುತ್ತಿದೆ.

ಆರರಿಂದ 8ನೇ ತರಗತಿಯಲ್ಲಿ ಖಾಲಿ ಇರುವ 10 ಸಾವಿರ ಪದವೀಧರ ಹುದ್ದೆಗೆ ಶಿಕ್ಷಕರ ನೇಮಕಾತಿಗೆ ಜಿಲ್ಲಾಮಟ್ಟದಲ್ಲಿ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದರು. ಸ್ಪರ್ಧಾತ್ಮಕ ಪರೀಕ್ಷೆಯ ಪೇಪರ್‌-2ರಲ್ಲಿ ಶೇ.50 ಅಂಕ ಮತ್ತು ಬೋಧನಾ ಭಾಷಾ ಸಾಮರ್ಥ್ಯ ಪರೀಕ್ಷೆ(ಪೇಪರ್‌-3)ಯಲ್ಲಿ ಶೇ.60ರಷ್ಟ ಕಟ್‌ಆಫ್ ಅಂಕ ನಿಗದಿ ಮಾಡಿದ್ದರು. ಅದರಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ಕೌನ್ಸೆಲಿಂಗ್‌ಗೆ 1:2 ಪಟ್ಟಿ ಬಿಡುಗಡೆ ಮಾಡಿತ್ತು. 10 ಸಾವಿರ ಹುದ್ದೆಗೆ ಕೇವಲ 2264 ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದರು.

1:2 ಕೌನ್ಸೆಲ್ಸಿಂಗ್‌ ನಂತರವೂ ಹೆಚ್ಚು ಹುದ್ದೆ ಉಳಿಯಲಿದೆ ಎಂಬ ಕಾರಣಕ್ಕೆ ಜುಲೈ 17ರಂದು ಕಟ್‌ಆಫ್ ಅಂಕ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ನಾನ್‌ಸೆಮಿಸ್ಟರ್‌ ಪದ್ಧತಿಯಲ್ಲಿ ಪದವಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಸರ್ಕಾರ ಈ ಕ್ರಮ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಹತ್ತು ದಿನಗಳ ನಂತರ(ಜುಲೈ 27) ಸರ್ಕಾರ ಇನ್ನೊಂದು ಆದೇಶ ಹೊರಡಿಸಿ,  ಪೇಪರ್‌ 2 ಮತ್ತು 3ರಲ್ಲಿ ಶೇ.1ರಿಂದ 5ರಷ್ಟು ಕನಿಷ್ಠ ಅಂಕ ಕಡಿಮೆ ಮಾಡುವುದಾಗಿ ಹೇಳಿತ್ತು. ಇದಕ್ಕೂ ಹಲವರು ವಿರೋಧ ವ್ಯಕ್ತಪಡಿಸಿದ್ದರು.

ಕಟ್‌ಆಫ್ಅಂಕದಲ್ಲಿ ಯಾವುದೇ ವ್ಯತ್ಯಾಸ ಮಾಡಬಾರದು ಎಂದು ಒಂದು ವರ್ಗ, ಕಟ್‌ ಆಫ್ ಅಂಕ ರದ್ದು ಮಾಡಿದ್ದು ಸರಿ ಎಂದು ಇನ್ನೊಂದು ವರ್ಗ. ಒಟ್ಟಾರೆಯಾಗಿ ಸರ್ಕಾರ ಅಡ್ಡಕತ್ತರಿಯಲ್ಲಿ ಸಿಲುಕಿತ್ತು. ಅಂತಿಮವಾಗಿ ಇಲಾಖೆ ಆಯಕ್ತರ ಮೂಲಕ ಎನ್‌ಐಸಿ ತಂತ್ರಾಂಶ ಆಧರಿಸಿ ವರದಿ ಸಿದ್ಧಪಡಿಸುವಂತೆ ನಿರ್ದೇಶನ ನೀಡಿತ್ತು.

ಕಟ್‌ಆಫ್ ಕಗ್ಗಂಟು:
10 ಸಾವಿರ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಟ್‌ಆಫ್ ನಿಗದಿ ಮಾಡಬೇಕೇ ಅಥವಾ ರದ್ದು ಮಾಡಬೇಕೆ ಎಂಬ ಗೊಂದಲದಲ್ಲಿ ಅಧಿಕಾರಿಗಳಿದ್ದಾರೆ. ಎಲ್ಲ ಜಿಲ್ಲೆಗಳ ಅರ್ಹರ ಪಟ್ಟಿ ಎನ್‌ಐಸಿಯಲ್ಲಿ ಪರಿಶೀಲನೆ ನಡೆಯುತ್ತಿದೆ. ಏಳು ವಿಧದ ಕಟ್‌ಆಫ್ ಅಂಕಗಳನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.

ಪೇಪರ್‌ 2 ಮತ್ತು 3ರಲ್ಲಿ 50:50 ಕಟ್‌ಆಫ್ಅಂಕ ನಿಗದಿ ಮಾಡಿದರೆ ಎಷ್ಟು ಅಭ್ಯರ್ಥಿಗಳು ಅರ್ಹರಾಗುತ್ತಾರೆ ಎನ್ನುವ ಮಾದರಿ ಸಿದ್ಧಪಡಿಸಿಕೊಂಡಿದ್ದಾರೆ. ಪೇಪರ್‌ 2 ಮತ್ತು 3ರಲ್ಲಿ 49:59, 48:58, 47:57, 46:56, 45:55 ಕಟ್‌ ಆಫ್ ಅಂಕ ನಿಗದಿ ಮಾಡಿದರೆ ಎಷ್ಟು ಅಭ್ಯರ್ಥಿಗಳ ಅರ್ಹರಾಗಬಹುದು ಎಂಬುದನ್ನು ವಿಶ್ಲೇಷಿಸಲಾಗುತ್ತಿದೆ. ಇದರ ಜತೆಗೆ ನೋ ಕಟ್‌ಆಫ್ ಮಾರ್ಕ್ಸ್ ಕೂಡ ಪರಿಶೀಲಿಸಲಾಗುತ್ತಿದೆ ಎಂದು ಇಲಾಖೆಯ ಮೂಲ ಖಚಿತಪಡಿಸಿದೆ.

ಪಟ್ಟಿ ಗೊಂದಲ :
ನೇಮಕಾತಿ ಕೌನ್ಸೆಲಿಂಗ್‌ಗೆ ಈಗಾಗಲೇ ಹೊರಡಿಸಿರುವ 1:2 ಪಟ್ಟಿ ಮೂಲ ಸ್ವರೂಪದಲ್ಲಿ ಉಳಿಸಿಕೊಂಡು, ಹೊಸ ಅಭ್ಯರ್ಥಿಗಳನ್ನು ಅದಕ್ಕೆ ಸೇರಿಸಬೇಕೇ ಅಥವಾ ಹೊಸದಾಗಿ ಪಟ್ಟಿ ಬಿಡುಗಡೆ ಮಾಡಬೇಕೆ ಎಂಬ ಗೊಂದಲದಲ್ಲಿ ಇಲಾಖೆಯ ಅಧಿಕಾರಿಗಳಿದ್ದಾರೆ. ಕಟ್‌ಆಫ್ ಅಂಕ ಎಷ್ಟು ನಿಗದಿ ಮಾಡುತ್ತಾರೆ ಎನ್ನುವುದರ ಮೇಲೆಯ ಪಟ್ಟಿಯ ಅಂತಿಮ ಸ್ಪರೂಪ ತಿಳಿದುಬರುತ್ತದೆ. ಒಂದೊಮ್ಮೆ ಕಟ್‌ಆಫ್ ರದ್ದಾದರೆ ಪಟ್ಟಿ ಸಂಪೂರ್ಣ ಬದಲಾಗುವ ಸಾಧ್ಯತೆಯೂ ಇದೆ. ಈ ಬಗ್ಗೆ ಕೇಂದ್ರೀಕೃತ ದಾಖಲಾತಿ ಘಟಕದಿಂದಲೂ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಅರ್ಹ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಪದವೀಧರ ಶಿಕ್ಷಕರ ಕಟ್‌ಆಫ್ ಅಂಕ ನಿಗದಿಗೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಎನ್‌ಐಸಿಯಿಂದ ವಾರಾಂತ್ಯದೊಳಗೆ ವಿಶ್ಲೇಷಣಾ ವರದಿ ಬರಲಿದೆ. ವರದಿ ಇಲ್ಲದೇ ಯಾವ ನಿರ್ಧಾರ ತೆಗೆದಿಕೊಳ್ಳಲು ಸಾಧ್ಯವಿಲ್ಲ.
– ಡಾ.ಪಿ.ಸಿ.ಜಾಫ‌ರ್‌, ಆಯುಕ್ತ,ಸಾರ್ವಜನಿಕ ಶಿಕ್ಷಣ ಇಲಾಖೆ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.