ರಾಜ್ಯಕ್ಕೆ ಪ್ರತ್ಯೇಕ ಬೆಳೆ ವಿಮೆ ಜಾರಿಗೆ ಚಿಂತನೆ
Team Udayavani, Aug 10, 2018, 6:05 AM IST
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಫಸಲ್ ಬಿಮಾ ಯೋಜನೆ ಅವೈಜ್ಞಾನಿಕವಾಗಿದೆ. ವಿಮಾ ನೀತಿಯಿಂದ ಕಂಪನಿಗಳಿಗೆ ಮಾತ್ರ ಲಾಭದಾಯಕವಾಗಿ ರೈತರಿಗೆ ಪ್ರತಿ ವರ್ಷ ಆನ್ಯಾಯವಾಗುತ್ತಿದೆ. ಇದರಿಂದ ಇದರಿಂದ ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ನೀತಿ ಜಾರಿಗೊಳಿಸಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗಬೇಕಿದ್ದ ಬೆಳೆವಿಮೆ ಯೋಜನೆ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. ಕಳೆದ ವರ್ಷ ರಾಜ್ಯದಿಂದ ವಿಮಾ ಕಂಪನಿಗಳಿಗೆ ರೈತರ ವಂತಿಗೆ ಸೇರಿ ಕೇಂದ್ರ ರಾಜ್ಯ ಸರ್ಕಾರಗಳಿಂದ ಒಟ್ಟು 1,200 ಕೋಟಿ ಹಣ ಸಂದಾಯವಾಗಿದೆ. ಆದರೆ ಆ ಪೈಕಿ ರಾಜ್ಯದ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಕ್ಕಿದ್ದು ಮಾತ್ರ 550 ಕೋಟಿ. ಉಳಿದ 650 ಕೋಟಿ ವಿಮಾ ಕಂಪನಿಗಳಿಗೆ ಲಾಭ ಆಗಿದೆ ಎಂದರು. ರಾಜ್ಯ ಸರ್ಕಾರ ಎರಡು- ಮೂರು ವರ್ಷಗಳಿಂದ ಬೆಳೆ ವಿಮೆ ಯೋಜನೆಯಿಂದ ರೈತರಿಗೆ ಆಗಿರುವ ಲಾಭದ ಬಗ್ಗೆ ಸಮಗ್ರ ತನಿಖೆ ಆದೇಶಿಸಲಾಗಿದೆ. ಜತೆಗೆ ತೆಲಂಗಾಣ ಮಾದರಿ ಬೆಳೆ ವಿಮೆ ನೀತಿ ರೂಪಿಸುವ ಸಂಬಂಧ ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.
15 ದಿನಗಳ ಬಳಿಕ ಬರದ ನಿರ್ಧಾರ
ರಾಜ್ಯದಲ್ಲಿ ಮಳೆ ಕ್ಷೀಣಿಸಿರುವುದರಿಂದ ಬಿತ್ತನೆ ಪ್ರಮಾಣ ಕೂಡ ಕಡಿಮೆಯಾಗಿದೆ. ಸದ್ಯ ಹವಾಮಾನ ಇಲಾಖೆ ಪ್ರಕಾರ ಇನ್ನೂ 15 ದಿನಗಳಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಮತ್ತೆ ಮಳೆ ಕ್ಷೀಣಿಸಿದರೆ ಬರದ ಜಿಲ್ಲೆಗಳ ಘೋಷಣೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಇತ್ತೀಚೆಗೆ ರಾಗಿ, ಭತ್ತ ಮತ್ತಿತರ ರೈತರ ಉತ್ಪನ್ನಗಳಿಗೆ ಘೋಷಿಸಿರುವ ಬೆಂಬಲ ಬೆಲೆ ಕೂಡ ಅವೈಜ್ಞಾನಿಕವಾಗಿದೆ ಎಂದು ಕೃಷಿ ಸಚಿವರು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ