ಸರ್ಕಾರಕ್ಕೆ ಕೋರ್ಟ್‌ ಛಾಟಿ ಏಟು


Team Udayavani, Aug 10, 2018, 6:10 AM IST

high-court-karnataka.jpg

ಬೆಂಗಳೂರು: ಕೆಎಂಸಿ ಕಾಯ್ದೆ ಜಾರಿಗೆ ಬಂದು ನಾಲ್ಕು ದಶಕ ಕಳೆದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಾರ್ಡ್‌ವಾರು ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದಂತೆ ನಿರ್ದಿಷ್ಟ ನಿಯಮಗಳನ್ನು ರೂಪಿಸದ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿತು.

ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಗಳ ವಾರ್ಡ್‌ವಾರು ಮೀಸಲಾತಿ ಮತ್ತು ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ವೇಳೆ, ನ್ಯಾಯಪೀಠ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿತು.

ಕರ್ನಾಟಕ ಪೌರ ನಿಗಮಗಳ ಕಾಯ್ದೆ (ಕೆಎಂಸಿ ಕಾಯ್ದೆ) ಜಾರಿಗೆ ಬಂದು 40 ವರ್ಷವಾದರೂ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ಮತ್ತು ಕ್ಷೇತ್ರ ಮರು ವಿಂಗಡಣೆಗೆ ನಿರ್ದಿಷ್ಟ ನಿಯಮ ರೂಪಿಸಲು ಸರ್ಕಾರ ವಿಫ‌ಲವಾಗಿದೆ. ಪ್ರತಿ ಬಾರಿಯೂ ಚುನಾವಣೆ ವೇಳೆ ಚಾಲ್ತಿಯಲ್ಲಿರುವ ಜನಗಣತಿ ವರದಿ ಆಧರಿಸಿ ತಾತ್ಕಾಲಿಕ ಮತ್ತು ಏಕಪಕ್ಷೀಯ ಮಾರ್ಗಸೂಚಿಗಳನ್ನು ರಚಿಸಿಕೊಂಡು ಮೀಸಲಾತಿ ನಿಗದಿಪಡಿಸುವ ಮತ್ತು ಕ್ಷೇತ್ರ ಮರುವಿಂಗಡಣೆ ಮಾಡುವ ಪರಿಪಾಠ ಬೆಳಸಿಕೊಂಡು ಬರಲಾಗಿದೆ. ಇದೊಂದು ರೀತಿಯಲ್ಲಿ ಕಾನೂನು ಮತ್ತು ಸಂವಿಧಾನ ಬಾಹಿರ ಕ್ರಮ ಎಂದು ನ್ಯಾಯಪೀಠ ತೀಕ್ಷಣವಾಗಿ ಹೇಳಿತು.

ಮೀಸಲಾತಿ ನಿಗದಿಯಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಣೆಯಾದ ಬಳಿಕವಷ್ಟೇ ಸಾರ್ವಜನಿಕರು, ಜನಪ್ರತಿನಿಧಿಗಳು ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸುತ್ತಾರೆ. ಇದರಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಅನಗತ್ಯ ಹಸ್ತಕ್ಷೇಪ ಮತ್ತು ಅಡಚಣೆ ಆಗುತ್ತದೆ. ಅದರ ಬದಲಿಗೆ ಚುನಾವಣೆಗೆ ಮೊದಲೇ ಅರ್ಜಿಗಳನ್ನು ಸಲ್ಲಿಸಬಹುದಲ್ಲವೇ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ರಾಜ್ಯ ಸರ್ಕಾರವು ಇನ್ನಾದರೂ ಕೆಎಂಸಿ ಕಾಯ್ದೆ ಅನುಗುಣವಾಗಿ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲು ನೀತಿ ರಚನೆಗೆ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ತೀರ್ಪಿನಲ್ಲಿ ತಿಳಿಸಿತು.

ಅರ್ಜಿಗಳ ವಜಾ: ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆಗಳ ವಾರ್ಡ್‌ ಮರುವಿಂಗಡಣೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯಪೀಠ ಗುರುವಾರ ಅರ್ಜಿಗಳನ್ನು ವಜಾಗೊಳಿಸಿ, ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಹಸಿರು ನಿಶಾನೆ ತೋರಿಸಿತು.

ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಹಂತದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.