ಅಧಿಕಾರಿಗಳ ಆಡಳಿತದ ದಾಸ್ಯಕ್ಕೆ ಸಿಲುಕಿದ ಜೀತದಾಳುಗಳು


Team Udayavani, Aug 10, 2018, 6:05 AM IST

rural-development-department.jpg

ಬೆಂಗಳೂರು: ಮಾಲೀಕರ ಜೀತದಿಂದ ಪಾರಾದ ಕಾರ್ಮಿಕರು ಆಡಳಿತ ವ್ಯವಸ್ಥೆಯ ದಾಸ್ಯಕ್ಕೆ ಸಿಲುಕಿ ನಲುಗಬೇಕಾದ ಪರಿಸ್ಥಿತಿ ಬಂದಿದೆ.

ನಮಗೆ ಜೀತ ವಿಮುಕ್ತಿ ಪತ್ರ ಕೊಡಿ ಎಂದು ಜೀತದಾಳುಗಳು ಮನವಿ ಮಾಡಿದರೆ, ಇವರು ಜೀತದಾಳುವೇ ಅಲ್ಲ ಎಂದು ಷರಾ ಬರೆಯುವ ಕೆಳಹಂತದ ಅಧಿಕಾರಿಗಳೇ ಹೆಚ್ಚು. ಪುನರ್ವಸತಿ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವ 15 ಸಾವಿರಕ್ಕೂ ಹೆಚ್ಚು ಜೀತದಾಳುಗಳಿಗೆ ವರ್ಷಗಳು ಕಳೆದರೂ ಪರಿಹಾರ ಸಿಕ್ಕಿಲ್ಲ. 

ಇದು ಗ್ರಾಮೀಣಾಭಿವೃದ್ದಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಜಂಟಿ ನೇತೃತ್ವದಲ್ಲಿರುವ ಜೀತದಾಳುಗಳ ಪುನರ್ವಸತಿಗೆ ಸಂಬಂಧಿಸಿದ ರಾಜ್ಯ ಮಟ್ಟದ ಉನ್ನತ ಸಮಿತಿ ಕಂಡುಕೊಂಡ ಕಹಿ ಸತ್ಯ.

ಜೀತಪದ್ಧತಿಯಿಂದ ಮುಕ್ತಗೊಂಡ ಕಾರ್ಮಿಕರಿಗೆ ವಿಮುಕ್ತಿ ಪತ್ರ ದೊರಕಿದರೆ ಸರ್ಕಾರದಿಂದ ಪರಿಹಾರ ಹಾಗೂ ಪುನರ್ವಸತಿ ಸೌಲಭ್ಯ ಸಿಗುತ್ತದೆ. ಆದರೆ, ಜೀತ ಕಾರ್ಮಿಕರ ವಿಮುಕ್ತಿ ಅರ್ಜಿಗಳ ವಿಚಾರಣೆ ನಡೆಸುವ ಸ್ಥಳೀಯ ತಹಶೀಲ್ದಾರರು, ಜೀತ ವಿಮುಕ್ತಿ ಪತ್ರ ನೀಡಿದರೆ, ತಮ್ಮ ವ್ಯಾಪ್ತಿಯಲ್ಲಿ ಜೀತಪದ್ಧತಿ ಜೀವಂತವಾಗಿದೆ ಎಂಬುದನ್ನು ಒಪ್ಪಿಕೊಂಡಂತಾಗುತ್ತದೆ. ತಮ್ಮ ಮೇಲಿನ ಕಳಂಕ ತಪ್ಪಿಸಲು ಜೀತದಾಳು ಅಲ್ಲ ಎಂಬುದಾಗಿ ಷರಾ ಬರೆಯುವ ಮೂಲಕ ಅಧಿಕಾರಿಗಳು ಅರ್ಹ ಕಾರ್ಮಿಕರಿಗೆ ಸಲ್ಲಬೇಕಾದ ಸವಲತ್ತುಗಳು ವಂಚಿತಗೊಳ್ಳುವಂತೆ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ನಡೆದ ಈ ಉನ್ನತ ಸಮಿತಿಯ ಸಭೆಯಲ್ಲಿ ಚರ್ಚೆಯಾಗಿದೆ.

ಎಲ್ಲೆಲ್ಲಿದೆ ಜೀತಪದ್ಧತಿ?
ಜೀತ ಪದ್ಧತಿಯು ನಗರ ಹಾಗೂ ನಗರದ ಹೊರ ವಲಯಗಳಲ್ಲಿ ಇಟ್ಟಿಗೆ ಗೂಡು, ಸಣ್ಣ ಕೈಗಾರಿಕೆ, ಕಲ್ಲು ಕ್ವಾರಿ, ಮುಂತಾದ ಕಡೆಗಳಲ್ಲಿ ಆವಾಹ್ಯತವಾಗಿ ಸಾಗಿದೆ. ಓಡಿಶಾ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರರ ರಾಜ್ಯಗಳಿಂದ ಬಂದ ಕಾರ್ಮಿಕರು ಜೀತ ಪದ್ದತಿಗೆ ಒಳಗಾಗುತ್ತಿದ್ದಾರೆ. ಕನಿಷ್ಠ ವೇತನ, ಆರೋಗ್ಯ ವಿಮೆ, ಕುಡಿಯುವ ನೀರು, ಶೌಚಾಲಯ, ಶಿಕ್ಷಣ ಸೌಲಭ್ಯದಿಂದ ಅವರು ಮತ್ತು ಅವರನ್ನು ನಂಬಿ ಬಂದ ಕುಟುಂಬದ ಸದಸ್ಯರು ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದ ಕೃಷಿ ವಲಯದಲ್ಲೂ ಜೀತ ಪದ್ಧತಿ ಈಗಲೂ ರೂಢಿಯಲ್ಲಿದೆ ಎಂದು ಸಮಿತಿ ಹೇಳಿದೆ.

ಅರ್ಜಿಗಳ ಪುನರ್‌ವಿಚಾರಣೆಗೆ ಸೂಚನೆ: 
ಜೀತದಾಳುಗಳನ್ನು ಗುರುತಿಸುವುದು, ಅರ್ಜಿಗಳ ವಿಚಾರಣೆ ನಡೆಸಿ ಬಿಡುಗಡೆ ಪತ್ರ ಹಾಗೂ ಪುನರ್ವಸತಿ, ಪರಿಹಾರ ಒದಗಿಸುವ ಹೊಣೆಗಾರಿಕೆ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದ್ದರೂ, ಅಧೀನ ಅಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಅದರಂತೆ ಪ್ರಸ್ತುತ ತಹಶೀಲ್ದಾರರು ಈ ಕೆಲಸ ಮಾಡುತ್ತಿದ್ದಾರೆ. 
ಸ್ಥಳೀಯ ಅಧಿಕಾರಿಗಳು ಜೀತದಾಳು ಅಲ್ಲ ಎಂದು ಷರಾ ಬರೆಯುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜೀತದಾಳುಗಳ ಗುರುತಿಸುವಿಕೆ ಮತ್ತು ಅರ್ಜಿಗಳ ವಿಚಾರಣೆ ವೇಳೆ ಸಾಕ್ಷ್ಯಾಧಾರಗಳನ್ನು ಗಂಭೀರವಾಗಿ ಪರಿಗಣಿಸಬೇಕು. 

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೂಕ್ತ ವಿಚಾರಣೆ ನಡೆಸದೆ ವರದಿಗಳನ್ನು ನೀಡಿದ್ದಲ್ಲಿ ಅಂತಹ ಪ್ರಕರಣಗಳನ್ನು ಮರು ವಿಚಾರಣೆ ಮಾಡಲು ಹಾಗೂ ಒಟ್ಟು ಅರ್ಜಿಗಳಲ್ಲಿ ಶೇ.8ರಷ್ಟು ಅರ್ಜಿಗಳನ್ನು ಉಪ ವಿಭಾಗಾಧಿಕಾರಿ ಹಾಗೂ ಶೇ.2ರಷ್ಟು ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ವಿಚಾರಣೆ ನಡೆಸಬೇಕು ಎಂದು ಉನ್ನತ ಮಟ್ಟದ ಸಮಿತಿ ತೀರ್ಮಾನಿಸಿದ್ದು, ಅದರಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. 

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ 2012ರಿಂದ 2016ರವರೆಗೆ 14,217 ಮಂದಿ 2017ರಲ್ಲಿ 1,099 ಹಾಗೂ 2018ರಲ್ಲಿ ಇಲ್ಲಿವರೆಗೆ 407 ಜೀತದಾಳುಗಳು ಬಿಡುಗಡೆ ಪತ್ರ, ಪರಿಹಾರ ಹಾಗೂ ಪುನರ್ವಸತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರಿಗೆ ಇಲ್ಲಿತನಕ ಪರಿಹಾರ ಸಿಕ್ಕಿಲ್ಲ. ಪುನರ್ವಸತಿ, ಪರಿಹಾರ ಕೋರಿ ಬಂದ ಅರ್ಜಿಗಳನ್ನು 24 ಗಂಟೆಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಕೇಂದ್ರ ಸರ್ಕಾರದ ಸೂಚನೆಯಿದ್ದರೂ, ಸ್ಥಳೀಯ ಮಟ್ಟದಲ್ಲಿ ವಿಚಾರಣೆ ಪೂರ್ಣಗೊಂಡು, ಜೀತದಾಳುಗಳು ಎಂದು ಗುರುತಿಸಲಾಗಿದ್ದರೂ, ವರ್ಷ ಕಳೆದರೂ 2,842 ಮಂದಿಗೆ ಉಪ ವಿಭಾಗಾಧಿಕಾರಿಗಳು ಇಲ್ಲಿವರೆಗೆ ಬಿಡುಗಡೆ ಪತ್ರ ಕೊಟ್ಟಿಲ್ಲ. 2012ರಿಂದ 2017ರವರೆಗೆ ಬಿಡುಗಡೆ ಪತ್ರ ಪಡೆದುಕೊಂಡಿರುವ 345 ಮಂದಿಗೆ ಇಲ್ಲಿತನಕ ಪುನರ್ವಸತಿ ಸಿಕ್ಕಿಲ್ಲ.

ಜೀತದಾಳುಗಳಿಗೆ ಜಿಲ್ಲಾಧಿಕಾರಿಗಳು ಬಿಡುಗಡೆ ಪತ್ರ ಕೊಟ್ಟ ಮೇಲಷ್ಟೇ ಪರಿಹಾರ ಮತ್ತು ಪುನರ್ವಸತಿ ಒದಗಿಸುವ ಜವಾಬ್ದಾರಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಇದೆ. ಜಿಲ್ಲಾಧಿಕಾರಿಗಳ ಹಂತದಲ್ಲಿ ಅರ್ಜಿಗಳು ಬಾಕಿ ಉಳಿದಿರಬಹುದು. ಆದರೆ, ಬಿಡುಗಡೆ ಪತ್ರ ಬಂದಿರುವ ಎಲ್ಲ ಪ್ರಕರಣಗಳಲ್ಲಿ ಇಲಾಖೆಯಿಂದ ಕಾನೂನು ರೀತಿ ಪರಿಹಾರ ಮತ್ತು ಪುನರ್ವಸತಿ ಒದಗಿಸಲಾಗಿದೆ. 
– ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ.

ಜೀತದಾಳುಗಳ ಪರಿಹಾರ ಮತ್ತು ಪುನರ್ವಸತಿ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ತಮ್ಮ ಜಿಲ್ಲೆಯಲ್ಲಿ ಜೀತ ಪದ್ಧತಿ ಜೀವಂತವಿರುವ ಕಳಂಕದಿಂದ ತಪ್ಪಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳು ಅರ್ಜಿಗಳ ವಿಚಾರಣೆ ವೇಳೆ ಜೀತದಾಳು ಅಲ್ಲ  ಎಂದು ಟಿಪ್ಪಣಿ ಬರೆಯುತ್ತಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ. ಅರ್ಹ ಪ್ರಕರಣಗಳಲ್ಲಿ ಬಿಡುಗಡೆ ಪತ್ರ, ಪರಿಹಾರ, ಪುನರ್ವಸತಿ ಸಿಗಲು ವಿಳಂಬ ಆಗುತ್ತಿರುವುದಕ್ಕೆ ಸ್ಥಳೀಯ ಅಧಿಕಾರಿಗಳೇ ಕಾರಣ.
– ಕಿರಣ್‌ ಕಮಲ ಪ್ರಸಾದ್‌, ಸಂಚಾಲಕ, ಜೀವಿಕ ಸಂಸ್ಥೆ.

– ರಫೀಕ್‌ ಅಹ್ಮದ್‌ 

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.