ಭಾರೀ ಮಳೆ ; ಊಟಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ
Team Udayavani, Aug 10, 2018, 12:03 PM IST
ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ.
ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿದೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬದಲಿ ಮಾರ್ಗದ ಮೂಲಕ ವಾಹನ ಸವಾರರನ್ನು ಕಳುಹಿಸುತ್ತಿದ್ದಾರೆ.
ಕಬಿನಿ ಜಲಾಶಯದಿಂದ 74 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು ನದಿ ಪಾತ್ರದ ಪ್ರದೇಶಗಳು ಜಲಾವೃತವಾಗಿದೆ.
ಅಣೆಕಟ್ಟೆ ನಿರ್ಮಾಣವಾದ ಜಲಾಶಯದ ಇತಿಹಾಸದಲ್ಲೇ 75 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ ಎಂದು ಜಲಾಶಯದ ಕಾರ್ಯಪಾಲಕ ಅಭಿಯಂತರ ಜಗದೀಶ್ ಉದಯವಾಣಿಗೆ ತಿಳಿಸಿದ್ದಾರೆ.
ಸೂತ್ತೂರು ಕ್ಷೇತ್ರಕ್ಕೆ ಸಂಪರ್ಕಿಸುವ ಸೇತುವೆಯೂ ಮುಳುಗಡೆಯಾಗಿದ್ದು, ಜನರು , ಮಠಕ್ಕಾಗಮಿಸುವವರು,ಹೊಲಗಳಿಗೆ ತೆರಳುವಾಗ ರೈತರು ಎಚ್ಚರ ವಹಿಸಲು ಸುತ್ತೂರು ಶ್ರೀಗಳು ಮನವಿ ಮಾಡಿದ್ದಾರೆ.
ಎಚ್.ಡಿ.ಕೋಟೆಯಲ್ಲೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ತಾಲೂಕಿನ ಚಕ್ಕೂರು, ಹೊಮ್ಮರಗಳ್ಳಿ ಸಮೀಪ ಹರಿಯುವ ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ದೊಡ್ಡ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ತುಂಬಸೋಗೆ ಸಮೀಪದ ಸೇತುವೆ ಬಹುತೇಕ ತುಂಬಿ ಹರಿಯುತ್ತಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೆಳೆಗಳಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು