ಸಿಎಂ ರೈತರಿಗೆ ನಾಟಿ ಹೇಳಿಕೊಡ್ತಾರಾ?
Team Udayavani, Aug 11, 2018, 7:00 AM IST
ಮಂಡ್ಯ: “ಕೋಳಿಗೆ ಮೊಟ್ಟೆ ಕಾವು ನೀಡುವುದನ್ನು ಕಲಿಸಿದಂತೆ ರೈತರಿಗೆ ನಾಟಿ ಹೇಳಿಕೊಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರಾ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೊದಲು ರೈತರ ಸಾಲಮನ್ನಾ ಮಾಡಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲಿ. ಕೇವಲ ಕಾಟಾಚಾರಕ್ಕೆ ರೈತರ ಮನವೊಲಿಸಲು ಮುಂದಾಗುವುದು ಸರಿಯಲ್ಲ ಎಂದರು.
ರಾಜ್ಯ ಸರ್ಕಾರ ಅಸ್ಥಿತ್ವಕ್ಕೆ ಬಂದು ಮೂರು ತಿಂಗಳು ಕಳೆದರೂ ಯಾವೊಬ್ಬ ಶಾಸಕರಿಗೂ, ಯಾವೊಂದು ವಿಧಾನಸಭಾ ಕ್ಷೇತ್ರಕ್ಕೂ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಸಾಲ ಮನ್ನಾ ಘೋಷಣೆ ಮಾಡಿದ ಕುಮಾರಸ್ವಾಮಿ ವಾರದೊಳಗೆ ಋಣಮುಕ್ತ ಪತ್ರ ಕೊಡಿಸುವುದಾಗಿ ಹೇಳಿದರು. ಸಾಲ ಕಟ್ಟಿದವರ ಖಾತೆಗೂ 25 ಸಾವಿರ ರೂ.ಮರು ಪಾವತಿ ಮಾಡುವುದಾಗಿ ತಿಳಿಸಿದರು. ಆದರೆ, ಋಣಮುಕ್ತ ಪತ್ರವೂ ರೈತರಿಗೆ ಸಿಗಲಿಲ್ಲ. ಸಾಲ ಕಟ್ಟಿದವರ ಖಾತೆಗೆ 25 ಪೈಸೆಯೂ ಬಂದಿಲ್ಲ ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿ ಅವರು ಎಷ್ಟು ದಿನ ಸರ್ಕಾರ ನಡೆಸುತ್ತಾರೆ ಎಂಬುದು ಅವರಿಗೇ ಗೊತ್ತಿಲ್ಲ. ಪಕ್ಷದ ಶಾಸಕರ ಬೆಂಬಲವೂ ಅವರಿಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲಿಂದ ಮೇಲೆ ಪತ್ರ ಬರೆಯುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ ಎಂದರು. ಕಾಂಗ್ರೆಸ್ನ ಯಾವುದೇ ಶಾಸ ಕ ರನ್ನು ನಾವು ಕರೆ ಯ ಲ್ಲ. ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಯ ವರ ಕಾರ್ಯ ವನ್ನು ಮೆಚ್ಚಿ ಸಾಕಷ್ಟು ಮಂದಿ ನಮ್ಮ ಪಕ್ಷಕ್ಕೆ ಬರು ತ್ತಿ ದ್ದಾರೆ. ನಾವು ಬರು ವ ವ ರನ್ನು ಬೇಡ ಎನ್ನು ವು ದಿಲ್ಲ. ಕಾಂಗ್ರೆಸ್-ಜೆಡಿ ಎಸ್ ಶಾಸ ಕ ರನ್ನು ಸೆಳೆ ಯುವ ದುರ್ಗತಿ ನಮ ಗೇನೂ ಇಲ್ಲ. ಕಾಂಗ್ರೆಸ್ ಶಾಸಕರು ದುರ್ಬಲರು, ಧನದಾಹಿಗಳು ಎಂಬುದನ್ನು ಕಾಂಗ್ರೆಸ್ ನಾಯಕರೇ ಒಪ್ಪಿಕೊಂಡಿದ್ದಾರೆ. ಅವರ ಶಾಸಕರಿಂದಲೇ ಸರ್ಕಾರ ಬಿದ್ದು ಹೋಗಲಿದೆ ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ