ಮಹಿಳಾ ಪೊಲೀಸರಿಗೂ ಪ್ಯಾಂಟ್‌ ಕಡ್ಡಾಯ


Team Udayavani, Aug 11, 2018, 6:00 AM IST

women-police-constable.jpg

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಕೆಳಹಂತದ ಸಿಬ್ಬಂದಿಗೂ ಅಧಿಕಾರಿ ಶ್ರೇಣಿಯ ಸ್ಥಾನಮಾನ ನೀಡುವ ಉದ್ದೇಶದಿಂದ ಪೊಲೀಸ್‌ ಇಲಾಖೆ ಮತ್ತೂಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಈಗಾಗಲೇ ಪೇದೆಗಳ ಸೌಚ್‌ ಕ್ಯಾಪ್‌ ಬದಲಿಗೆ ಪೀಕ್‌-ಕ್ಯಾಪ್‌ ಶಿರವೇರಿಸಲು ತೀರ್ಮಾನಿಸಿರುವ ಪೊಲೀಸ್‌ ಇಲಾಖೆ, ಮಹಿಳಾ ಪೊಲೀಸ್‌ ಸಿಬ್ಬಂದಿ ಸೀರೆ ಬದಲಿಗೆ ಪ್ಯಾಂಟ್‌ ಸಮವಸ್ತ್ರ ಕಡ್ಡಾಯ ಮಾಡಲು ನಿರ್ಧಾರಕೈಗೊಂಡಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಡಾ. ಜಿ.ಪರಮೇಶ್ವರ ಕೂಡ ಮಹಿಳಾ ಸಿಬ್ಬಂದಿ ಇನ್ಮುಂದೆ ಸೀರೆ ಬದಲಿಗೆ ಪ್ಯಾಂಟ್‌ ಕಡ್ಡಾಯ ಕುರಿತು ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಪೊಲೀಸ್‌ ಕಾಯ್ದೆ ಪ್ರಕಾರ ಪ್ರತಿಯೊಬ್ಬ ಮಹಿಳಾ ಸಿಬ್ಬಂದಿ ವಿಶೇಷ ಸಂದರ್ಭ ಹೊರತು ಪಡಿಸಿ ಕಡ್ಡಾಯವಾಗಿ ಪ್ಯಾಂಟ್‌ ಸಮವಸ್ತ್ರ ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನಿಯವಿದೆ. ಆದರೆ, ಕೆಲ ಸಿಬ್ಬಂದಿ ದೈಹಿಕವಾಗಿ ಸರಿ ಹೊಂದುವುದಿಲ್ಲ ಎಂಬ ಕಾರಣಕ್ಕೆ ಸೀರೆ ತೊಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೀರೆ ಬದಲು ಪ್ಯಾಂಟ್‌ ಬದಲಾವಣೆ ಮಾಡುವುದರಿಂದ ಮಹಿಳಾ ಸಿಬ್ಬಂದಿ ತಮ್ಮ ದೈಹಿಕ ಸದೃಢತೆ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಜತೆಗೆ ಪೊಲೀಸ್‌ ಕಾರ್ಯಾಚರಣೆ ವೇಳೆ (ಗಲಾಟೆ, ಆರೋಪಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ) ಉಪಯೋಗವಾಗುತ್ತದೆ ಎಂಬ ಉದ್ದೇಶದಿಂದ ಈ ನಿರ್ಧಾರಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಸದ್ಯ ಇಲಾಖೆಯಲ್ಲಿ ಪೇದೆ, ಎಎಸ್‌ಐ, ಪಿಎಸ್‌ಐ (ಗ್ರಾಮೀಣ ಭಾಗದಲ್ಲಿ) ಹಂತದ ಮಹಿಳಾ ಸಿಬ್ಬಂದಿ ಹೆಚ್ಚು ಸೀರೆ ತೊಟ್ಟು ಕರ್ತವ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಕಾರ್ಯಾಚರಣೆ ವೇಳೆ ಅಡಚಣೆ ಉಂಟಾಗಿದೆ ಎಂದು ಹೇಳಲಾಗಿದೆ.

ದಶಕಗಳಿಂದ ಸೀರೆ ತೊಡುವ ಮಹಿಳಾ ಸಿಬ್ಬಂದಿಗೆ ಗೃಹ ಸಚಿವರ ಈ ಹೇಳಿಕೆ ಒಂದು ರೀತಿಯ ಶಾಕ್‌ ನೀಡಿದೆ. ಪ್ಯಾಂಟ್‌ ಧರಿಸುವುದು ನಮ್ಮ ಸಂಸ್ಕೃತಿ ಅಲ್ಲ. ಮದುವೆ‌ ಬಳಿಕ ಅಥವಾ 40-45 ವರ್ಷವಾಗುತ್ತಿದ್ದಂತೆ ಮಹಿಳಾ ಸಿಬ್ಬಂದಿಯಲ್ಲಿ ಕೆಲವರು ದಪ್ಪ ಆಗುತ್ತಾರೆ. ಆಗ ಪ್ಯಾಂಟ್‌ ಅಷ್ಟು ಸೂಕ್ತವಾಗುವುದಿಲ್ಲ, ಹೀಗಾಗಿ ಸೀರೆ ತೊಡುವುದು ಸೂಕ್ತ. ಕಡ್ಡಾಯ ಮಾಡುವ ಬದಲು 45 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಸೀರೆ ಧರಿಸಲು ರಿಯಾಯಿತಿ ನೀಡಬೇಕು. ಈ ಕುರಿತು ಈ ಹಿಂದೆ ಮೌಖೀಕವಾಗಿ ಆದೇಶ ಇತ್ತು ಎಂದು  ಮಹಿಳಾ ಸಿಬ್ಬಂದಿ ಹೇಳುತ್ತಾರೆ.

ಪ್ಯಾಂಟ್‌ ಸೂಕ್ತ
ಆರೋಪಿ ಬೆನ್ನಟ್ಟುವ ವೇಳೆ ಹಾಗೂ ಗಲಾಟೆ ಸಂದರ್ಭದಲ್ಲಿ ಪ್ಯಾಂಟ್‌ ಸೂಕ್ತವಾಗಿದೆ. ಗಲಾಟೆ, ದೊಂಬಿ ವೇಳೆ ಸೀರೆ ಧರಿಸುವುದರಿಂದ ಕೆಲವೊಮ್ಮೆ ಕಿಡಿಗೇಡಿಗಳು ಸೀರೆ ಎಳೆಯುವುದು ಅಥವಾ ಕೆಲ ಕಡೆ ಸೀರೆ ಸಿಲುಕಿಕೊಳ್ಳಬಹುದು. ಹೀಗಾಗಿ ಪ್ಯಾಂಟ್‌ ಧರಿಸುವುದರಿಂದ ಸಹಾಯವಾಗುತ್ತದೆ. ಅಲ್ಲದೆ, ಇತ್ತೀಚೆನ ಪೇದೆಗಳು ಧರಿಸುವ ಪ್ಯಾಂಟ್‌ ಹೆಚ್ಚು ಸೂಕ್ತವಾಗಿದ್ದು, ಔಟ್‌ಶರ್ಟ್‌ ಇರುವುದರಿಂದ ಯಾವುದೇ ತೊಂದರೆ ಇಲ್ಲ ಎಂದು ಮತ್ತೂಬ್ಬ ಮಹಿಳಾ ಸಿಬ್ಬಂದಿ ಅಭಿಪ್ರಾಯಪಟ್ಟರು.

ಪೊಲೀಸ್‌ ಇಲಾಖೆ ಶಿಸ್ತಿನ ಇಲಾಖೆ.ಹೀಗಾಗಿ ಮಹಿಳಾ ಸಿಬ್ಬಂದಿಯೂ ಸ್ಮಾ¾ರ್ಟ್‌ ಹಾಗೂ ದೈಹಿಕವಾಗಿ ಸದೃಢವಾಗಿ ಕಾಣಬೇಕು. ಪ್ಯಾಂಟ್‌ ಕಡ್ಡಾಯವಾಗಿ ಧರಿಸಬೇಕು ಎಂಬ ಉದ್ದೇಶದಿಂದ ನಿಯಮ ಜಾರಿಗೆ ತರುವ ಕುರಿತು ಚಿಂತನೆ ನಡೆದಿದೆ. ಆದರೆ, ಅಂತಿಮವಾಗಿ ಸರ್ಕಾರ ಆದೇಶ ಹೊರಡಿಸಬೇಕಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣೆ’ಗೆ ತಿಳಿಸಿದರು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.