ಸಿಎಂ ನಾಟಿಗೆ ಸಿಂಗಾರಗೊಂಡಿದೆ ಸೀತಾಪುರ
Team Udayavani, Aug 11, 2018, 6:15 AM IST
ಪಾಂಡವಪುರ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಅವರು ಭತ್ತ ನಾಟಿ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು,ಇದಕ್ಕಾಗಿ ತಾಲೂಕಿನ ಸೀತಾಪುರ ಗ್ರಾಮ ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ.
ಗ್ರಾಮದಲ್ಲಿ ಮಹದೇವಮ್ಮನವರಿಗೆ ಸೇರಿದ ಜಮೀನಿನಲ್ಲಿ ಕುಮಾರಸ್ವಾಮಿ ಭತ್ತ ನಾಟಿ ಮಾಡಲಿದ್ದಾರೆ. ಇವರಿಗೆ 130 ಮಂದಿ ಕೂಲಿ ಕಾರ್ಮಿಕರು ನಾಟಿ ಕಾರ್ಯದಲ್ಲಿ ಸಾಥ್ ನೀಡುವರು.
ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ತಾಲೂಕು ಅಧಿಕಾರಿಗಳೆಲ್ಲರೂ ಸೀತಾಪುರದಲ್ಲಿ ಮೊಕ್ಕಾಂ ಹೂಡಿಪೂರ್ವ ಸಿದ್ಧತೆ ಪೂರೈಸುವುದರೊಂದಿಗೆ ನಾಟಿಗೆ ಸಜ್ಜುಗೊಳಿಸಿದ್ದಾರೆ. ನಾಟಿ ಕಾರ್ಯದಲ್ಲಿ 100 ಮಂದಿ ಮಹಿಳೆಯರು,50 ಮಂದಿ ಪುರುಷರು ಮುಖ್ಯಮಂತ್ರಿ ಜೊತೆ ಪಾಲ್ಗೊಳ್ಳುವರು. ಅಲ್ಲದೇ, 25 ಜೋಡಿ ಎತ್ತುಗಳು ಭಾಗವಹಿಸಲಿವೆ.
ಈಗಾಗಲೇ ನಾಟಿ ಮಾಡುವ ಗದ್ದೆಯನ್ನು ಕೆಸರು ಮಣ್ಣು ಮಾಡಿ ನೀರು ನಿಲ್ಲಿಸಲಾಗಿದೆ. ವ್ಯವಸ್ಥಿತವಾಗಿ ಬದುಗಳನ್ನು ನಿರ್ಮಿಸಿ ಭತ್ತದ ಸಸಿ ಮಡಿಗಳನ್ನೂ ಸಿದಟಛಿಪಡಿಸಿಟ್ಟುಕೊಂಡಿದೆ. ಭತ್ತ ನಾಟಿ ಸ್ಥಳ ಸಕಲ ರೀತಿಯಲ್ಲೂ ಸಿದಟಛಿಗೊಂಡಿದ್ದು, ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.
ಮಹದೇವಮ್ಮನವರಿಗೆ ಸೇರಿದ ಜಮೀನು: ಸೀತಾಪುರ ಗ್ರಾಮದಲ್ಲಿ ನಿವೃತ್ತ ಶಿಕ್ಷಕ ಕೆಂಚೇಗೌಡರ ಪತ್ನಿ ಮಹದೇವಮ್ಮ ಅವರಿಗೆ ಸೇರಿದ ನಾಲ್ಕು ಎಕರೆ ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯ ಮುಗಿದಿದೆ.
ಉಳಿದ ಒಂದು ಎಕರೆಯಲ್ಲಿ ಬಿತ್ತನೆಗೆ ಸಜ್ಜುಗೊಳಿಸಲಾಗಿತ್ತು. ಅಷ್ಟರಲ್ಲಿ ಜೆಡಿಎಸ್ ಮುಖಂಡರು-ಮಹದೇವಮ್ಮ ಪುತ್ರರಾದ ಯೋಗೇಂದ್ರ ಮತ್ತು ಲೋಕೇಶ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭತ್ತ ನಾಟಿ ಕಾರ್ಯಕ್ರಮಕ್ಕೆ ನಿಮ್ಮ ಜಮೀನನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅದಕ್ಕೆ ಅವಕಾಶ ಮಾಡಿಕೊಡುವಂತೆ ಕೋರಿದರು.ಅದಕ್ಕೆ ಸಂತೋಷದಿಂದ ಒಪ್ಪಿಕೊಂಡಿದ್ದಾಗಿ ಲೋಕೇಶ್ “ಉದಯವಾಣಿ’ಗೆ ತಿಳಿಸಿದರು.
ಮುಖ್ಯಮಂತ್ರಿ ನಾಟಿ ಮಾಡುವ ಸ್ಥಳದಲ್ಲಿ ಮೂರು ಮಂದಿ ನಿಲ್ಲುವಂತೆ ವೇದಿಕೆ ನಿರ್ಮಿಸಲಾಗುವುದು.ಅಲ್ಲಿಂದಲೇ ಸಿಎಂ ಭತ್ತ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇವರೊಂದಿಗೆ ಪುರುಷ ಹಾಗೂ ಮಹಿಳಾ ಕೂಲಿ ಕಾರ್ಮಿಕರು ಸಾಥ್ ನೀಡಲಿದ್ದಾರೆ.
ಭರದ ಸಿದ್ಧತೆ: ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸೀತಾಪುರ ಗ್ರಾಮವನ್ನು ನವ ವಧುವಿನಂತೆ ಸಿಂಗರಿಸಲಾಗುತ್ತಿದೆ. ಸಿಎಂ ಆಗಮನದ ದಾರಿಯುದ್ದಕ್ಕೂ ಸ್ವತ್ಛತಾ ಕಾರ್ಯ ಕೈಗೊಳ್ಳಲಾಗಿದೆ.ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ-ಗಂಟಿ ತೆರವು ಮಾಡಿದ್ದು, ಕಲ್ಲು-ಗುಂಡಿಗಳಿಂದ ತುಂಬಿದ್ದ ರಸ್ತೆಗೆ ಮಣ್ಣು ಹಾಕಿ ಮಟ್ಟ ಮಾಡಿ ಅದರ ಮೇಲೆ
ಡಾಂಬರೀಕರಣ ಮಾಡಲಾಗಿದೆ. ಸಿಡಿಎಸ್ ನಾಲೆಯ ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಳೆಲ್ಲವನ್ನು ಕಿತ್ತುಹಾಕಿ ಸ್ವತ್ಛಗೊಳಿಸಲಾಗಿದೆ.
ಸಿಎಂ ಕುಮಾರಸ್ವಾಮಿ ಆಗಮಿಸುವ ಸೀತಾಪುರ ಗ್ರಾಮದ ಹಾದಿಯುದ್ದಕ್ಕೂ ತಳಿರು-ತೋರಣಗಳನ್ನುಕಟ್ಟಲಾಗಿದೆ. ಗ್ರಾಮದ ಮುಖ್ಯ ರಸ್ತೆಯಿಂದ ಜಮೀನಿನವರೆಗೆ ಅಲಂಕೃತ ಹತ್ತು ಎತ್ತಿನ ಗಾಡಿಗಳಲ್ಲಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಕರೆತರಲು ಸಿದ್ಧತೆ ನಡೆಸಲಾಗಿದೆ. ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಭತ್ತ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಜನರ ಕುತೂಹಲ ಹೆಚ್ಚಿಸಿದೆ.
ಸಿಎಂ ಭತ್ತ ನಾಟಿ ಕಾರ್ಯಕ್ರಮ ನಡೆಯುತ್ತದೆ ಎಂದು ಗೊತ್ತಿತ್ತು. ಆದರೆ, ನಮ್ಮ ಜಮೀನನ್ನು ಆಯ್ಕೆ
ಮಾಡಿಕೊಳ್ಳುವರೆಂದು ಖಂಡಿತ ನಿರೀಕ್ಷಿಸಿರಲಿಲ್ಲ. ನಮ್ಮ ಜಮೀನಿನಲ್ಲಿ ಸಿಎಂ ನಾಟಿ ಮಾಡಲು ಬರುತ್ತಿರುವುದು ಖುಷಿ ತಂದಿದೆ.
– ಲೋಕೇಶ್, ಮಹದೇವಮ್ಮನ ಮಗ
– ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ