ಸಿಎಂ ನಾಟಿಗೆ ಸಿಂಗಾರಗೊಂಡಿದೆ ಸೀತಾಪುರ


Team Udayavani, Aug 11, 2018, 6:15 AM IST

ban110818.jpg

ಪಾಂಡವಪುರ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಅವರು ಭತ್ತ ನಾಟಿ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು,ಇದಕ್ಕಾಗಿ ತಾಲೂಕಿನ ಸೀತಾಪುರ ಗ್ರಾಮ ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಗ್ರಾಮದಲ್ಲಿ ಮಹದೇವಮ್ಮನವರಿಗೆ ಸೇರಿದ ಜಮೀನಿನಲ್ಲಿ ಕುಮಾರಸ್ವಾಮಿ ಭತ್ತ ನಾಟಿ ಮಾಡಲಿದ್ದಾರೆ. ಇವರಿಗೆ 130 ಮಂದಿ ಕೂಲಿ ಕಾರ್ಮಿಕರು ನಾಟಿ ಕಾರ್ಯದಲ್ಲಿ ಸಾಥ್‌ ನೀಡುವರು.

ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ತಾಲೂಕು ಅಧಿಕಾರಿಗಳೆಲ್ಲರೂ ಸೀತಾಪುರದಲ್ಲಿ ಮೊಕ್ಕಾಂ ಹೂಡಿಪೂರ್ವ ಸಿದ್ಧತೆ ಪೂರೈಸುವುದರೊಂದಿಗೆ ನಾಟಿಗೆ ಸಜ್ಜುಗೊಳಿಸಿದ್ದಾರೆ. ನಾಟಿ ಕಾರ್ಯದಲ್ಲಿ 100 ಮಂದಿ ಮಹಿಳೆಯರು,50 ಮಂದಿ ಪುರುಷರು ಮುಖ್ಯಮಂತ್ರಿ ಜೊತೆ ಪಾಲ್ಗೊಳ್ಳುವರು. ಅಲ್ಲದೇ, 25 ಜೋಡಿ ಎತ್ತುಗಳು ಭಾಗವಹಿಸಲಿವೆ.

ಈಗಾಗಲೇ ನಾಟಿ ಮಾಡುವ ಗದ್ದೆಯನ್ನು ಕೆಸರು ಮಣ್ಣು ಮಾಡಿ ನೀರು ನಿಲ್ಲಿಸಲಾಗಿದೆ. ವ್ಯವಸ್ಥಿತವಾಗಿ ಬದುಗಳನ್ನು ನಿರ್ಮಿಸಿ ಭತ್ತದ ಸಸಿ ಮಡಿಗಳನ್ನೂ ಸಿದಟಛಿಪಡಿಸಿಟ್ಟುಕೊಂಡಿದೆ. ಭತ್ತ ನಾಟಿ ಸ್ಥಳ ಸಕಲ ರೀತಿಯಲ್ಲೂ ಸಿದಟಛಿಗೊಂಡಿದ್ದು, ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಮಹದೇವಮ್ಮನವರಿಗೆ ಸೇರಿದ ಜಮೀನು: ಸೀತಾಪುರ ಗ್ರಾಮದಲ್ಲಿ ನಿವೃತ್ತ ಶಿಕ್ಷಕ ಕೆಂಚೇಗೌಡರ ಪತ್ನಿ ಮಹದೇವಮ್ಮ ಅವರಿಗೆ ಸೇರಿದ ನಾಲ್ಕು ಎಕರೆ ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯ ಮುಗಿದಿದೆ.

ಉಳಿದ ಒಂದು ಎಕರೆಯಲ್ಲಿ ಬಿತ್ತನೆಗೆ ಸಜ್ಜುಗೊಳಿಸಲಾಗಿತ್ತು. ಅಷ್ಟರಲ್ಲಿ ಜೆಡಿಎಸ್‌ ಮುಖಂಡರು-ಮಹದೇವಮ್ಮ ಪುತ್ರರಾದ ಯೋಗೇಂದ್ರ ಮತ್ತು ಲೋಕೇಶ್‌ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭತ್ತ ನಾಟಿ ಕಾರ್ಯಕ್ರಮಕ್ಕೆ ನಿಮ್ಮ ಜಮೀನನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅದಕ್ಕೆ ಅವಕಾಶ ಮಾಡಿಕೊಡುವಂತೆ ಕೋರಿದರು.ಅದಕ್ಕೆ ಸಂತೋಷದಿಂದ ಒಪ್ಪಿಕೊಂಡಿದ್ದಾಗಿ ಲೋಕೇಶ್‌ “ಉದಯವಾಣಿ’ಗೆ ತಿಳಿಸಿದರು.

ಮುಖ್ಯಮಂತ್ರಿ ನಾಟಿ ಮಾಡುವ ಸ್ಥಳದಲ್ಲಿ ಮೂರು ಮಂದಿ ನಿಲ್ಲುವಂತೆ ವೇದಿಕೆ ನಿರ್ಮಿಸಲಾಗುವುದು.ಅಲ್ಲಿಂದಲೇ ಸಿಎಂ ಭತ್ತ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇವರೊಂದಿಗೆ ಪುರುಷ ಹಾಗೂ ಮಹಿಳಾ ಕೂಲಿ ಕಾರ್ಮಿಕರು ಸಾಥ್‌ ನೀಡಲಿದ್ದಾರೆ.

ಭರದ ಸಿದ್ಧತೆ: ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸೀತಾಪುರ ಗ್ರಾಮವನ್ನು ನವ ವಧುವಿನಂತೆ ಸಿಂಗರಿಸಲಾಗುತ್ತಿದೆ. ಸಿಎಂ ಆಗಮನದ ದಾರಿಯುದ್ದಕ್ಕೂ ಸ್ವತ್ಛತಾ ಕಾರ್ಯ ಕೈಗೊಳ್ಳಲಾಗಿದೆ.ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ-ಗಂಟಿ ತೆರವು ಮಾಡಿದ್ದು, ಕಲ್ಲು-ಗುಂಡಿಗಳಿಂದ ತುಂಬಿದ್ದ ರಸ್ತೆಗೆ ಮಣ್ಣು ಹಾಕಿ ಮಟ್ಟ ಮಾಡಿ ಅದರ ಮೇಲೆ
ಡಾಂಬರೀಕರಣ ಮಾಡಲಾಗಿದೆ. ಸಿಡಿಎಸ್‌ ನಾಲೆಯ ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಳೆಲ್ಲವನ್ನು ಕಿತ್ತುಹಾಕಿ ಸ್ವತ್ಛಗೊಳಿಸಲಾಗಿದೆ.

ಸಿಎಂ ಕುಮಾರಸ್ವಾಮಿ ಆಗಮಿಸುವ ಸೀತಾಪುರ ಗ್ರಾಮದ ಹಾದಿಯುದ್ದಕ್ಕೂ ತಳಿರು-ತೋರಣಗಳನ್ನುಕಟ್ಟಲಾಗಿದೆ. ಗ್ರಾಮದ ಮುಖ್ಯ ರಸ್ತೆಯಿಂದ ಜಮೀನಿನವರೆಗೆ ಅಲಂಕೃತ ಹತ್ತು ಎತ್ತಿನ ಗಾಡಿಗಳಲ್ಲಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಕರೆತರಲು ಸಿದ್ಧತೆ ನಡೆಸಲಾಗಿದೆ. ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಭತ್ತ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಜನರ ಕುತೂಹಲ ಹೆಚ್ಚಿಸಿದೆ.

ಸಿಎಂ ಭತ್ತ ನಾಟಿ ಕಾರ್ಯಕ್ರಮ ನಡೆಯುತ್ತದೆ ಎಂದು ಗೊತ್ತಿತ್ತು. ಆದರೆ, ನಮ್ಮ ಜಮೀನನ್ನು ಆಯ್ಕೆ
ಮಾಡಿಕೊಳ್ಳುವರೆಂದು ಖಂಡಿತ ನಿರೀಕ್ಷಿಸಿರಲಿಲ್ಲ. ನಮ್ಮ ಜಮೀನಿನಲ್ಲಿ ಸಿಎಂ ನಾಟಿ ಮಾಡಲು ಬರುತ್ತಿರುವುದು ಖುಷಿ ತಂದಿದೆ.

– ಲೋಕೇಶ್‌, ಮಹದೇವಮ್ಮನ ಮಗ

– ಕುಮಾರಸ್ವಾಮಿ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.