ಹೈಕೋರ್ಟ್ ಮಧ್ಯಂತರ ಆದೇಶ ಮುಂದುವರಿಕೆಗೆ ಸುಪ್ರೀಂ ಸೂಚನೆ
Team Udayavani, Sep 8, 2018, 6:25 AM IST
ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಹೊಸನಗರ ರಾಮಚಂದ್ರಾಪುರ ಮಠಕ್ಕೆ ವಹಿಸಿದ್ದ ಆದೇಶ ರದ್ದುಗೊಳಿಸಿ ತೀರ್ಪು ನೀಡಿದ್ದ ಹೈಕೋರ್ಟ್, ಸೆ. 10ರವರೆಗೆ ಮಠವೇ ಆಡಳಿತ ಮುಂದುವರಿಸಲಿದೆ ಎಂದು ನೀಡಿದ್ದ ಮಧ್ಯಂತರ ಆದೇಶವನ್ನು ತನ್ನ ಮುಂದಿನ ಆದೇಶದವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಸುಪ್ರೀಂ ಕೋರ್ಟ್ನ ಮುಂದಿನ ಆದೇಶದವರೆಗೆ ಅಬಾಧಿತವಾಗಲಿದೆ ಎಂದು ರಾಮಚಂದ್ರಾಪುರ ಮಠದ ಪ್ರಕಟಣೆ ತಿಳಿಸಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿ ರಾಜ್ಯ ಸರ್ಕಾರ 2008ರಲ್ಲಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ನಂತರ ಮಧ್ಯಂತರ ಆದೇಶ ನೀಡಿ, ಸೆ. 10ರವರೆಗೆ ದೇವಸ್ಥಾನದ ನಿರ್ವಹಣೆಯನ್ನು ಮಠವೇ ನಡೆಸಲಿದೆ. ಸೆ. 10ರ ನಂತರ ಸರ್ಕಾರ ರಚಿಸುವ ಜಿಲ್ಲಾಧಿಕಾರಿ ನೇತೃತ್ವದ ಮೇಲ್ವಿಚಾರಣಾ ಸಮಿತಿ ದೇವಸ್ಥಾನದ ಆಡಳಿತ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಮಚಂದ್ರಾಪುರ ಮಠ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮಠದ ಅರ್ಜಿಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಹೈಕೋಟ್ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಇದರಿಂದಾಗಿ ಸೆ. 10ರ ನಂತರ ದೇವಸ್ಥಾನದ ಆಡಳಿತವನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ವಹಿಸಿಕೊಳ್ಳುವುದನ್ನು ಮುಂದೂಡಿದಂತಾಗಿದ್ದು, ಮುಂದಿನ ಆದೇಶದವರೆಗೆ ದೇವಾಲಯದ ಆಡಳಿತವನ್ನು ಶ್ರೀ ಮಠವೇ ನಿರ್ವಹಿಸಲಿದೆ ಎಂದು ರಾಮಚಂದ್ರಾಪುರ ಮಠದ ಪ್ರಕಟಣೆ ತಿಳಿಸಿದೆ.
ಮಧ್ಯಂತರ ಅರ್ಜಿ ವಾಪಸ್: ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಮೇಲುಸ್ತುವಾರಿ ಸಮಿತಿ ರಚಿಸುವ ಸಂಬಂಧ ಈ ಹಿಂದೆ ನೀಡಿದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ರಾಮಚಂದ್ರಪುರ ಮಠ ಶುಕ್ರವಾರ ವಾಪಸ್ ಪಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!