ಮನೆ ದೇವರಿಗೆ ಇಂದು ಸಿಎಂ ಪೂಜೆ
Team Udayavani, Aug 13, 2018, 6:35 AM IST
ಹೊಳೆನರಸೀಪುರ: ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಗ್ರಾಮ
ಹರದನಹಳ್ಳಿಗೆ ಸೋಮವಾರ ಆಗಮಿಸಲಿದ್ದಾರೆ. ಗ್ರಾಮದ ಕುಲದೇವರು ಈಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮೊದಲ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಪತ್ನಿ ಅನಿತಾ, ಪುತ್ರ ನಿಖೀಲ್ ಜೊತೆ ಬೆಳಗ್ಗೆ 5 ಗಂಟೆಗೆ
ಬೆಂಗಳೂರಿನಿಂದ ಹೊರಟು ರಸ್ತೆ ಮೂಲಕ ನೇರ ಹರದನಹಳ್ಳಿಗೆ ಬೆಳಗ್ಗೆ 7ಗಂಟೆಗೆ ಆಗಮಿಸಿ ದೇವರ ದರ್ಶನ ಪಡೆಯಲಿದ್ದಾರೆ. ಇದು ಖಾಸಗಿ ಕಾರ್ಯಕ್ರಮವಾಗಿದೆ. ಸಮಯವಿದ್ದರೆ ತಾಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥ ಹಾಗೂ ಪಟ್ಟಣದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ. ಕುಮಾರಸ್ವಾಮಿ ಕುಟುಂಬದ ಜೊತೆ ಸೋದರ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜಿಲ್ಲೆಯ ಜೆಡಿಎಸ್ ಶಾಸಕರು ಭಾಗವಹಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ