ಕೆಶಿಪ್ ಎತ್ತಂಗಡಿ ಮಾಡಿದರೆ ಹೋರಾಟ: ಉಮೇಶ ಕತ್ತಿ
Team Udayavani, Aug 13, 2018, 6:40 AM IST
ಬೆಳಗಾವಿ: ಬೆಳಗಾವಿ ವಿಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದು ಹೇಳಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಇದನ್ನು ಸಾಬೀತುಪಡಿಸಿ ತೋರಿಸಲಿ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿಯಿಂದ ಕೆಶಿಪ್ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವ ಸಚಿವ ರೇವಣ್ಣ ಅವರ ಕ್ರಮ ಸರಿಯಲ್ಲ. ಇದು ಸಮ್ಮಿಶ್ರ ಸರ್ಕಾರಕ್ಕೆ ಉತ್ತರ ಕರ್ನಾಟಕದ ಮೇಲೆ ಇರುವ ಪ್ರೀತಿಯನ್ನು ಎತ್ತಿ ತೋರಿಸುತ್ತದೆ. ಬೆಳಗಾವಿಯಿಂದ ಸ್ಥಳಾಂತರವಾಗಿರುವ ಕೆಶಿಪ್ ಕಚೇರಿಗಳನ್ನು ಕೂಡಲೇ ಇಲ್ಲಿ ಮುಂದುವರಿಸುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು.
ಅಲ್ಲದೆ, ಮುಖ್ಯಮಂತ್ರಿಯವರು ಹೇಳಿದಂತೆ ಆದಷ್ಟು ಬೇಗ ಸುವರ್ಣ ವಿಧಾನಸೌಧಕ್ಕೆ ಸರ್ಕಾರದ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು. ಈ ಬಾರಿಯ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೇ ಕಾರಣಕ್ಕೆ ಮಠಾಧೀಶರು ಒಂದು ದಿನ ಸುವರ್ಣ ವಿಧಾನಸೌಧದ ಮುಂದೆ ಸಾಂಕೇತಿಕ ಧರಣಿ ನಡೆಸಿದರು. ಇಷ್ಟಾದ ಮೇಲೂ ಅನ್ಯಾಯ ಮುಂದುವರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಇದೇ ರೀತಿ ತಾರತಮ್ಯ ಧೋರಣೆ ಮುಂದುವರಿದರೆ ಹೋರಾಟ ಅನಿವಾರ್ಯ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದರು.
ಕೆಶಿಪ್ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವುದು ಸರಿಯಲ್ಲ.ಇದು ಲೋಕೋಪ ಯೋಗಿ ಇಲಾಖೆ ಸಚಿವರ ತಪ್ಪು ನಿರ್ಧಾರ. ಈ ಭಾಗದ ಎಲ್ಲ ಶಾಸಕರು ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಚರ್ಚಿಸಿ ಈ ಕಚೇರಿಗಳನ್ನು ಇಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ.
– ರಮೇಶ ಜಾರಕಿಹೊಳಿ, ಸಚಿವ
ಕೆಲವು ಇಲಾಖೆಗಳಲ್ಲಿ ಕಾಮಗಾರಿಗಳು ಮುಗಿದ ಮೇಲೆ ಅದಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಯಾ ಇಲಾಖೆಯವರು ತೆಗೆದುಕೊಳ್ಳುತ್ತಾರೆ. ಉತ್ತರ ಕರ್ನಾಟಕದಲ್ಲಿದ್ದ ಕೆಶಿಪ್ ಸೇರಿ ಇತರ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಯವರಿಗೆ ಗೊತ್ತು. ಅವರನ್ನೇ ಕೇಳಬೇಕು. ಅಂತಹ ತೀರ್ಮಾನ ಕೈಗೊಳ್ಳುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ